ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಕೆ. ರಂಗನಾಥ್ K Ranganath ಅವಿರೋಧ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಕರ್ನಾಟಕ ಪ್ರದೇಶ ಕುರುಬರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರದೇಶ ಕುರುಬರ ಸಂಘದ ನಿರ್ದೇಶಕರಾಗಿದ್ದ ಯುವ ಮುಖಂಡ ಕೆ.ರಂಗನಾಥ್ ರಾಜ್ಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.
ಆಯ್ಕೆಗೆ ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮಾಜಿ ಸಚಿವರಾದ ಹೆಚ್.ಎಂ. ರೇವಣ್ಣ, ಎಚ್ ವಿಶ್ವನಾಥ್, ಕುರುಬರ ಸಂಘದ ರಾಜ್ಯ ನಾಯಕ ರಾಮಚಂದ್ರಪ್ಪ ಮತ್ತು ಸಂಘದ ಎಲ್ಲ ನಿರ್ದೇಶಕರಿಗೆ ಹಾಗೂ ಸಮಾಜ ಬಾಂಧವರಿಗೆ ಕೆ. ರಂಗನಾಥ್ ಅಭಿನಂದನೆ ಸಲ್ಲಿಸಿದ್ದಾರೆ.
Also read: ರಾಷ್ಟ್ರ, ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಕುವೆಂಪು ವಿವಿ ವಿದ್ಯಾರ್ಥಿಗಳು ಆಯ್ಕೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















