ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯ ಶೆಟ್ಟಿಹಳ್ಳಿ ಗ್ರಾಮದ ಜೆ. ಅಶೋಕ ಅವರ ಮನೆಯ ಕೊಟ್ಟಿಗೆಯ ಅಟ್ಟದ ಮೇಲೆ ಇದ್ದ ಅಂದಾಜು ೧೩.೫ ಅಡಿ ಉದ್ದದ ಕಾಳಿಂಗ ಸರ್ಪ ಹಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಅವರ ಸಮ್ಮುಖದಲ್ಲಿ ಉರಗ ತಜ್ಞ ಸ್ನೇಕ್ ಕಿರಣ್ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟಿದ್ದಾರೆ.
ಈ ಸಂದರ್ಭದಲ್ಲಿ ಅರಣ್ಯ ರಕ್ಷಕ ಹೆಚ್. ಎಸ್. ಸಂತೋಷ್ ಮತ್ತು ರಮೇಶ್ ಕುಮಾರ್, ಎ.ಆರ್. ಸುನೀಲ್, ವಸಂತ್, ಸುನೀಲ್ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post