ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರು ಇಂದು ಶಿವಪ್ಪನಾಯಕ ಪ್ರತಿಮೆಯ ಸುತ್ತಲೂ ಹಾಗೂ ಸಾರ್ವಜನಿಕರ ತಂಗುದಾಣವನ್ನು ಸ್ವಚ್ಛತೆ ಮಾಡುವುದರ ಮೂಲಕ ಕನಕದಾಸ ಜಯಂತಿಯನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಚನ್ನವೀರಪ್ಪ ಗಾಮನಗಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ಜಿಪಂ ಸದಸ್ಯ ಕೆ.ಇ. ಕಾಂತೇಶ್, ಟ್ರಾಫಿಕ್ ಪೊಲೀಸ್ ಇನ್ಸ್ಪೆಕ್ಟರ್ ಸಿದ್ದೆ ಗೌಡ್ರು , ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್, ಟಿವಿಸಿ ಸದಸ್ಯರಾದ ಶೇಷಯ್ಯ, ಕನ್ನಡ ಕಾರ್ಮಿಕ ರಕ್ಷಣ ವೇದಿಕೆಯ ಜಿಲ್ಲಾಧ್ಯಕ್ಷ ವಾಟಾಳ್ ಮಂಜುನಾಥ, ಬೀದಿ ಬದಿ ವ್ಯಾಪಾರಸ್ಥರ ಪದಾಧಿಕಾರಿಗಳಾದ ಶರತ್, ರಂಗಮ್ಮ ಹನುಮಂತಪ್ಪ, ಪುಷ್ಪ, ಶ್ರೀಧರ್, ನಾಗರಾಜ್, ರವಿ, ನದಿಂಖಾನ್, ಅಣ್ಣಪ್ಪ, ಹಾಗೂ ಬೀದಿ ಬದಿ ವ್ಯಾಪಾರಸ್ಥರು ಮತ್ತು ಇತರರೂ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















