No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕನ್ನಡ ರಾಜ್ಯೋತ್ಸವ ಕನ್ನಡ ಜಾಗೃತಿಯ ವೇದಿಕೆಯಾಗಬೇಕು: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ | ನೆಹರು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

kalpa News by kalpa News
November 1, 2025
in ಶಿವಮೊಗ್ಗ
0
ಗಣಪತಿ ವಿಸರ್ಜನೆಗೆ ತೆಪ್ಪ ಬಳಕೆ ಮಾಡಿದಲ್ಲಿ ಈ ವಸ್ತು ಕಡ್ಡಾಯವಾಗಿ ಇರಬೇಕು: ಡಿಸಿ ಆದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕನ್ನಡ ರಾಜ್ಯೋತ್ಸವ ಕೇವಲ ಘೋಷಣೆ-ಭಾಷಣಗಳಿಗೆ ಸೀಮಿತಗೊಳ್ಳದೇ ಕನ್ನಡ ಜಾಗೃತಿಯ ವೇದಿಕೆಯಾಗಬೇಕು. ಯಾವುದೇ ಜಾತಿ ಮತ, ಭಾಷೆ-ಬಣ್ಣಗಳ ಹಂಗಿಲ್ಲದೆ ಆಚರಿಸುವ ಹಬ್ಬವಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬಣ್ಣಿಸಿದರು.

ಅವರು ಇಂದು ನಗರದ ನೆಹರು ಮೈದಾನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಯೋಜಿಸಿದ್ದ ಕನ್ನಡ ರಾಜ್ಯೋತ್ಸವ #Kannada Rajyothsava ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಂಭ್ರಮದ ಈ ದಿನದಂದು ನಾವೆಲ್ಲರೂ ಕನ್ನಡದ ಉಳಿವಿಗೆ ಸಂಕಲ್ಪ ಮಾಡಬೇಕಾಗಿದೆ. ಅಂದು ಮೈಸೂರು ರಾಜ್ಯವಾಗಿದ್ದ ಕರ್ನಾಟಕ 19560 ನವೆಂಬರ್ 01 ರಂದು ಅಸ್ತಿತ್ವಕ್ಕೆ ಬಂದ ಈ ದಿನವನ್ನು ರಾಜ್ಯೋತ್ಸವವಾಗಿ ಆಚರಿಸಲಾಗುತ್ತಿದೆ. ದೇವರಾಜ ಅರಸುರವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ 1973ರ ನವೆಂಬರ್ ನಲ್ಲಿ ಕರ್ನಾಟಕ ಎಂದು ಮರುನಾಮಕರಣವಾಯಿತು. ಕರ್ನಾಟಕ ಏಕೀಕರಣಕ್ಕೆ ಕಾರಣರಾದ ಕುವೆಂಪು, ಆಲೂರು ವೆಂಕಟರಾವ್, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಬಿ.ಎಂ.ಶ್ರೀಕಂಠಯ್ಯ ಸೇರಿದಂತೆ ಅನೇಕ ಮಹನೀಯರನ್ನು ನಾವಿಂದು ಸ್ಮರಿಸಬೇಕಾಗಿದೆ ಎಂದರು.

ಮಲೆನಾಡಿನ ಹೆಬ್ಬಾಗಿಲು ಎಂದೇ ಪ್ರಸಿದ್ಧವಾಗಿರುವ ಶಿವಮೊಗ್ಗ ಜಿಲ್ಲೆ ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಹಲವಾರು ಜನಪರ ಚಳುವಳಿಗಳನ್ನು ಹುಟ್ಟು ಹಾಕಿದ ಈ ನೆಲ, ಸಾಮಾಜಿಕವಾಗಿ, ಶ್ರೀಮಂತವಾಗಿದೆ. ಸಾಂಸ್ಕೃತಿಕವಾಗಿ, ಸಾಹಿತ್ಯಿಕವಾಗಿ ಅನುಭವ ಮಂಟಪದ ಅಲ್ಲಮಪ್ರಭು ಬಳ್ಳಿಗಾವಿಯವರು. 12ನೇ ಶತಮಾನದ ಶಿವಶರಣೆ ಅಕ್ಕಮಹಾದೇವಿ ಉಡುತಡಿಯವರು. ಶರಣ ಚಿಂತನೆಗಳ ನೆಲೆವೀಡು ಎಂದೇ ಖ್ಯಾತವಾದ ಕಲ್ಯಾಣ ಚಳುವಳಿಯ ಮೇರು ವ್ಯಕ್ತಿತ್ವಗಳು ಶಿವಮೊಗ್ಗ ಜಿಲ್ಲೆಯವರು ಎಂಬುದು ನಮ್ಮ ಹೆಮ್ಮೆ . ಕನ್ನಡ ಸಾರಸ್ವತ ಲೋಕಕ್ಕೆ ಜಿ.ಎಸ್. ಶಿವರುದ್ರಪ್ಪರವರಂತಹ ರಾಷ್ಟ್ರಕವಿಯನ್ನು ಕೊಟ್ಟ ಹಿರಿಮೆ ಅಷ್ಟೇ ಅಲ್ಲ ಕುವೆಂಪು ಮತ್ತು ಯು.ಆರ್. ಅನಂತಮೂರ್ತಿ ಅವರಂತಹ ಇಬ್ಬರು ಜ್ಞಾನಪೀಠ ಪುರಸ್ಕೃತರನ್ನು ನಾಡಿಗೆ ಮೂರುಜನ ಮುಖ್ಯಮಂತ್ರಿಗಳನ್ನು ಈ ನಾಡಿಗೆ ನೀಡಿದ ಹಿರಿಮೆ ಶಿವಮೊಗ್ಗ ಜಿಲ್ಲೆಯದ್ದು. ಅಲ್ಲದೇ ನಾ.ಡಿಸೋಜ ಸೇರಿದಂತೆ ಅನೇಕ ಹಿರಿಯ ಸಾಹಿತಿಗಳು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದು ಕೊಂಡಾಡಿದರು.
ಕನ್ನಡ ನೆಲ, ಜಲ, ಜನ, ಬದುಕು, ಸಂಸ್ಕೃತಿ, ಪರಂಪರೆ, ಕಲೆ, ಸಂಗೀತ, ಜನಪದ ಎಲ್ಲವನ್ನೂ ಒಳಗೊಂಡ ಕನ್ನಡ ಶ್ರೀಮಂತ ಸಂಸ್ಕೃತಿ ಹಾಗೂ ಭವ್ಯ ಪರಂಪರೆಯನ್ನು ಹೊಂದಿದ್ದು ವಿಶ್ವಮಾನ್ಯವಾಗಿದೆ. ಕನ್ನಡ ಭಾಷೆಗೆ ಸುಮಾರು 2,000 ವರ್ಷಗಳ ಭವ್ಯ ಇತಿಹಾಸವಿದೆ. ಶಾಸ್ತ್ರೀಯ ಪರಂಪರೆಯಾದ ಕರ್ನಾಟಕ ಹಾಗೂ ಹಿಂದೂಸ್ತಾನಿ ಸಂಗೀತ ಶೈಲಿಗೆ ಕರ್ನಾಟಕ ಮಹತ್ವದ ಕೊಡುಗೆ ನೀಡಿದೆ ಎಂದರು.

ಕನ್ನಡ ಭಾಷೆ ಶ್ರೀಮಂತ ಸಾಹಿತ್ಯ ಹೊಂದಿದ್ದು, 08 ಜನ ಸಾಹಿತ್ಯ ಪರಿಚಾರಕರು, ಸಾಹಿತ್ಯದ ಅತ್ಯುನ್ನತ ಜ್ಞಾನಪೀಠ ಪ್ರಶಸ್ತಿ ಪುರಸ್ಕಾರಕ್ಕೆ ಬಾಜನರಾಗಿರುವುದು ಹರ್ಷದ ಸಂಗತಿಯಾಗಿದೆ. ಇಡೀ ದೇಶದಲ್ಲೇ 2ನೇ ಅತಿಹೆಚ್ಚು ಪ್ರಶಸ್ತಿಯನ್ನು ಪಡೆದ ಭಾಷೆ ಕನ್ನಡ ಎಂದರಲ್ಲದೆಪ್ರಸ್ತುತ ಸಂದರ್ಭದಲ್ಲಿ ನಾವು ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ತಾಂತ್ರಿಕವಾಗಿ, ಸಾಹಿತ್ಯಾತ್ಮಕವಾಗಿ, ಆಡಳಿತಾತ್ಮಕವಾಗಿ ಮತ್ತಿತರ ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ನಾಡು-ನುಡಿಯ ಉಳಿವಿಗಾಗಿ ತೊಡಗಿಸಿಕೊಳ್ಳೋಣ. ಜಾಗತೀಕರಣದ ಹಿನ್ನೆಲೆಯಲ್ಲಿ ಇಂಗ್ಲೀಷ್ ಭಾಷಾಜ್ಞಾನ ಅವಶ್ಯಕವಾಗಿದ್ದರೂ ಮಾತೃಭಾಷೆ ಕನ್ನಡಕ್ಕೆ ಮೊದಲ ಆದ್ಯತೆ. ನಮ್ಮ ಶಿಕ್ಷಣ ನೀತಿಯ ಮಾತೃಭಾಷೆಗೆ ಹೆಚ್ಚಿನ ಒತ್ತನ್ನು ನೀಡಿದೆ. ಈ ರಾಜ್ಯೋತ್ಸವದ ಭಾಷಾಭಿಮಾನ ನವೆಂಬರ್‍ಮಾಹೆಗೆ ಸೀಮಿತವಾದರೆ ಸಾಲದು. ಪ್ರತಿನಿತ್ಯ ನಾವು ಕನ್ನಡಿಗರಾಗಬೇಕು. ಕನ್ನಡ ನಮ್ಮ ಉಸಿರು, ಜೀವನಾಡಿಯಾಗಬೇಕು. ಆಂತರಿಕವಾಗಿ ಕನ್ನಡ ಡಿಂಡಿಮ ಮೊಳಗಬೇಕು.
ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಿದ ನಮ್ಮ ನಾಡು ಎಲ್ಲಾ ಜಾತಿ ಧರ್ಮಗಳ ಜನರು ಸಾಮರಸ್ಯದಿಂದ ಬದುಕುವ ಒಂದು ಸುಂದರ ತೋಟವಾಗಿಯೇ ಉಳಿಯಬೇಕು ಎಂದು ಆಶಿಸಿದರು. ಇದೇ ಸಂದರ್ಭದಲ್ಲಿ ಅವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.

ಇದಕ್ಕೂ ಮುಂಚೆ ನಗರದ ಸೈನ್ಸ್ ಮೈದಾನದಿಂದ ನೆಹರೂ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‍ಕುಮಾರ್, ಭಾರತ ಸೇವಾದಳದ ವೈ.ಹೆಚ್. ನಾಗರಾಜ್ ಮುಂತಾದವರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada RajyothsavaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಕನ್ನಡ ರಾಜ್ಯೋತ್ಸವಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ಬಳಸಿ ಮುಂದಿನ ಪರಂಪರೆಗೆ ಭಾಷೆ ಉಳಿಸುವ ಕಾರ್ಯ ಮಾಡೋಣ: ಸುರೇಶ್ ಋಗ್ವೇದಿ

Next Post

ಹಿರಿಯರು, ಜ್ಞಾನಿಗಳು, ಸಾಧಕರು ಹೇಳಿದ ಮಾತನ್ನು ಕೇಳಿ | ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯ ಸಂದೇಶ

kalpa News

kalpa News

Next Post
ವೇದಗಳನ್ನು ಸಂರಕ್ಷಿಸುವ ಕೆಲಸ ಮಾಡಬೇಕು | ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯರ ವಿಶೇಷ ಪ್ರವಚನ

ಹಿರಿಯರು, ಜ್ಞಾನಿಗಳು, ಸಾಧಕರು ಹೇಳಿದ ಮಾತನ್ನು ಕೇಳಿ | ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯ ಸಂದೇಶ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL