ರಾಮಲಲ್ಲಾ ಅಯೋಧ್ಯೆಯಲ್ಲಿ Ayodhya ಜನವರಿ 22ರಂದು ಪ್ರತಿಷ್ಟೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರತಿ ರಾಜ್ಯದವರಿಗೆ ಒಂದೊಂದು ದಿನ ನಿಗದಿ ಮಾಡಲಾಗಿದೆ. ಕರ್ನಾಟಕದವರಿಗೆ ಫೆಬ್ರವರಿ 19ರಂದು ಅವಕಾಶ ಇದೆ. ನೋಂದಣಿ ಮಾಡಿಕೊಂಡು ಹೋಗಬೇಕು. 3500 ಜನರಿಗೆ ಅವಕಾಶ ಸಿಗಲಿದೆ. ಬೆಂಗಳೂರಿನಿಂದ ವಿಶೇಷ ರೈಲು ಹೊರಡಲಿದ್ದು, ಸ್ವಂತ ಖರ್ಚಿನಲ್ಲಿ ಹೋಗಿ ಬರಬಹುದಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ್ ತಿಳಿಸಿದರು.
ಇದರ ಅಂಗವಾಗಿ ಜನವರಿ 01 ರಿಂದ 15ರವರೆಗೆ ಮನೆ ಮನೆ ಸಂಪರ್ಕ ಅಭಿಯಾನ ನಡೆಯಲಿದೆ. ಅಭಿಯಾನದಲ್ಲಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಕರಪತ್ರ ಭಾವಚಿತ್ರ ಮತ್ತು ಮಂತ್ರಾಕ್ಷತೆಯನ್ನು ತಲುಪಿಸಲಿದ್ದಾರೆ. ಜನವರಿ 22ರಂದು ಮಾಡಬೇಕಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದರು.
Also read: ಹೊಸ ವರ್ಷ ಸಂಭ್ರಮಾಚರಣೆ ವೇಳೆ ಈ ನಿಯಮಗಳನ್ನು ಪಾಲಿಸಿ: ಎಸ್ಪಿ ಮಿಥುನ್ ಕುಮಾರ್ ಸೂಚನೆ
ಎರಡು ವರ್ಷದ ಹಿಂದೆ ಪ್ರಧಾನಮಂತ್ರಿಗಳು. ಅಯೋಧ್ಯೆಯಲ್ಲಿ ಭೂಮಿ ಪೂಜೆ ನೆರವೇರಿಸಿದ್ದರು. ಗರ್ಭಗುಡಿಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಯನ್ನು ಜಗತ್ತೇ ಕಾತರದಿಂದ ನೋಡುತ್ತಿದೆ. ಇದೀಗ ಭವ್ಯ ಮಂದಿರ ನಿರ್ಮಾಣ ಕಾರ್ಯ ನಡೆದಿದೆ ಎಂದರು.
ವಿಶ್ವಹಿಂದು ಪರಿಷತ್ ವಿಭಾಗ ಸಹ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾಧ್ಯಕ್ಷ ಜೆ.ಆರ್. ವಾಸುದೇವ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post