ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೋರಾಟಕ್ಕೆ ಮೊದಲೇ ಶಿಕ್ಷಕರ ಬಹುತೇಕ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಾ ಬಂದಿದೆ. ಸರ್ಕಾರಿ ನೌಕರರ ಬೇಡಿಕೆಯನ್ನು ಈಡೇರಿಸುವಲ್ಲಿ ಕರ್ನಾಟಕ ರಾಜ್ಯ ಮೊದಲ ಸ್ಥಾನದಲ್ಲಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ.
ಅವರು ಇಂದು ನಗರದ ಫೇಸ್ ಕಾಲೇಜ್ ಆವರಣದಲ್ಲಿರುವ ಜಯಲಕ್ಷ್ಮೀ ಈಶ್ವರಪ್ಪ ಕನ್ವೆನ್ಷನ್ ಹಾಲ್ನಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಇದರ ಶಿವಮೊಗ್ಗ ತಾಲ್ಲೂಕು ಶಾಖಾ ವತಿಯಿಂದ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶೈಕ್ಷಣಿಕ ಕಾರ್ಯಾಗಾರ ಹಾಗೂ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ಹಾಲ್ನಲ್ಲಿ ಮೊದಲ ಸಮಾರಂಭವಾಗಿ ಶಿಕ್ಷಕರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿಕ್ಷಕರ ಆಶೀರ್ವಾದ ಮಕ್ಕಳ ಮೇಲೆ ಸದಾ ಇರಲಿ ಎಂದು ಶುಭಾಶಯ ಕೋರಿದರು.

ರಾಜ್ಯದಲ್ಲೇ ಮೊದಲ ಬಾರಿಗೆ ಮೂಲಭೂತ ಸೌಲಭ್ಯ ಕೊರತೆ ಇರುವ 87 ಶಾಲೆಗಳಿಗೆ ಅಗತ್ಯ ಸೌಕರ್ಯ ಒದಗಿಸಲಾಗಿದೆ. ಗ್ರಾಮೀಣ ಭಾಗದಲ್ಲಿರುವ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ ಮತ್ತು ಪೀಠೋಪಕರಣಗಳ ಕೊರತೆ ಇದ್ದರೆ ಡಿಡಿಪಿಐ ಅವರು ಪಟ್ಟಿಮಾಡಿ ಕೊಟ್ಟಲ್ಲಿ ಅದನ್ನು ಕೂಡ ಸರ್ಕಾರದಿಂದ ಪೂರೈಸಲಾಗುವುದು. ತಪ್ಪಿದರೆ ನಮ್ಮ ಸ್ವಂತ ವೆಚ್ಚದಲ್ಲಾದರೂ ಒದಗಿಸಲು ಸಿದ್ಧ ಎಂದರು.

ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷರಾದ ರವಿ ಎಂ. ಅವರು ಅನೇಕ ಎನ್ಪಿಎಸ್ ರದ್ಧತಿ ಸೇರಿದಂತೆ ಅನೇಕ ಬೇಡಿಕೆಗಳ ಜಾರಿಗೆ ಒತ್ತಾಯಿಸಿ ಮನವಿ ಸಲ್ಲಿಸಿದರು.
Also read: ನಿರಂತರ ಸಾಧನೆ ಮೂಲಕ ಎಜುಕೇಟೆಡ್ ಕ್ಲಾಸ್ ನಿರ್ಮಾಣವಾಗಬೇಕು: ಪ್ರೊ. ವೀರಭದ್ರಪ್ಪ
ವೇದಿಕೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ಸಂಘದ ರಾಜ್ಯ ಸಹಕಾರ್ಯದರ್ಶಿ ಜಿ. ಸುಮತಿ, ಡಿಡಿಪಿಐ ಪರಮೇಶ್ವರಪ್ಪ, ಆರ್.ಮೋಹನ್ ಕುಮಾರ್, ಬಿಇಒ ನಾಗರಾಜ್, ಪ್ರಧಾನ ಕಾರ್ಯದರ್ಶಿ ಎಂ. ಜಯ, ಮಂಜುನಾಥ್ ಬಿ, ಸೇರಿದಂತೆ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.










Discussion about this post