No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Saturday, June 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಇರುವಕ್ಕಿಯ ಕೃಷಿ ವಿವಿಗೆ ಕೆಳದಿ ಶಿವಪ್ಪನಾಯಕನ ಹೆಸರು : ಸಿಎಂ ಯಡಿಯೂರಪ್ಪ

1804 ಕೋಟಿ ರೂ.ಗಳ ವೆಚ್ಚದ ವಿವಿಧ ಯೋಜನೆಗಳು ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 24, 2021
in ಶಿವಮೊಗ್ಗ
0
ಇರುವಕ್ಕಿಯ ಕೃಷಿ ವಿವಿಗೆ ಕೆಳದಿ ಶಿವಪ್ಪನಾಯಕನ ಹೆಸರು : ಸಿಎಂ ಯಡಿಯೂರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಸಾಗರ ತಾಲೂಕಿನ ಇರುವಕ್ಕಿಯಲ್ಲಿರುವ ಹಾಗೂ ಇಂದು ಲೋಕಾರ್ಪಣೆ ಮಾಡಲಾದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಅವರು ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಟಾದಲ್ಲಿ ವರ್ಚುವಲ್ ವೇದಿಕೆ ಮೂಲಕ ಜಿಲ್ಲೆಯ ಸುಮಾರು 1074 ಕೋಟಿ ರೂ. ವೆಚ್ಚದ ವಿವಿಧ ಯೋಜನೆ ಕಾಮಗಾರಿಗಳ ಉದ್ಘಾಟನೆ ಮತ್ತು 560 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು.
ಜಿಲ್ಲೆಯ ರೈತರ ಹೊಲಗಳಿಗೆ ನೀರುಣಿಸುವ ಹಲವು ನೀರಾವರಿ ಯೋಜನೆಗಳನ್ನು ಕಳೆದ ಎರಡು ವರ್ಷಗಳ ಅವಧಿಯಲ್ಲ್ಲಿ ಅನುಷ್ಟಾನಗೊಳಿಸಲಾಗಿದೆ. ಕೆರೆಗಳನ್ನು ತುಂಬಿಸುವ ಏತ ನೀರಾವರಿ ಯೋಜನೆಗಳಿಗೆ ದಾಖಲೆ ಪ್ರಮಾಣದ ಅನುದಾನವನ್ನು ಒದಗಿಸಲಾಗಿದೆ. ಈ ನೀರಾವರಿ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವಿದೆ ಎಂದರು.

ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ 384 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣ ಕಾiಗಾರಿ ಈಗಾಗಲೇ ಆರಂಭಗೊಂಡಿದ್ದು, ಮುಂದಿನ ಏಪ್ರಿಲ್ ಮಾಹೆ ವೇಳೆಗೆ ಪೂರ್ಣಗೊಂಡು ಲೋಕಾರ್ಪಣೆಗೊಳ್ಳಲಿದೆ. ಇಲ್ಲಿ ಏರ್‌ಬಸ್ ಮಾದರಿಯ ವಿಮಾನಗಳು ಇಳಿಯಲು ಸಾಧ್ಯವಾಗುವಂತೆ ನಿಲ್ದಾಣವನ್ನು ನಿರ್ಮಿಸಲಾಗುತ್ತಿದೆ. ಇದರಿಂದಾಗಿ ನೆರೆಯ ಜಿಲ್ಲೆಗಳ ಆರ್ಥಿಕ ಸ್ಥಿತಿಯಲ್ಲಿ ಪರಿಣಾಮಕಾರಿ ಬದಲಾವಣೆಯಾಗುವ ನಿರೀಕ್ಷೆ ತಮಗಿದೆ. ಇದೀಗ 258 ಕೋಟಿ ರೂ.ಗಳ ವೆಚ್ಚದ ಟರ್ಮಿನಲ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದವರು ತಿಳಿಸಿದರು.

ತುಂಗಭದ್ರಾ ನದಿಯಿಂದ ನೀರನ್ನೆತ್ತಿ ಶಿಕಾರಿಪುರ ತಾಲೂಕಿನ ತಾಳಗುಂದ, ಉಡುಗಣಿ, ಹೊಸೂರು ಹೋಬಳಿಗಳ 249 ಕೆರೆಗಳಿಗೆ ಹಾಗೂ ಹಿರೇಕೆರೂರು ತಾಲೂಕಿನ 6 ಕೆರೆಗಳಿಗೆ ನೀರು ಒದಗಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು 850 ಕೋಟಿ ರೂ.ಗಳ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ. ಕಸಬಾ ಹೋಬಳಿ ಮತ್ತು ಅಂಜನಾಪುರ ಹೋಬಳಿಯ ಹೊಸಹಳ್ಳಿ ಏತ ನೀರವಾರಿ ಕಾಮಗಾರಿಗಳನ್ನು ಸಹ ಎರಡು ತಿಂಗಳಲ್ಲಿ ಲೋಕಾರ್ಪಣೆ ಮಾಡಲಾಗುವುದು. ಈ ಯೋಜನೆಗಳು ಭವಿಷ್ಯದಲ್ಲಿ ಜಿಲ್ಲೆಯ ರೈತರ ಆರ್ಥಿಕ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸ ತಮಗಿರುವುದಾಗಿ ತಿಳಿಸಿದರು.

ಜೋಗ ಜಲಪಾತ ವೀಕ್ಷಣೆಯನ್ನು ಸ್ಮರಣೀಯವಾಗಿಸಲು ಮೂಲಸೌಲಭ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇಲ್ಲಿ 185 ಕೋಟ ರೂಪಾಯಿ ವೆಚ್ಚದಲ್ಲಿ ಒಟ್ಟು 24 ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಸುಂದರ ಪ್ರವೇಶದ್ವಾರ, ಶರಾವತಿ ವಿಗ್ರಹ, ಮೂರು ಅಟ್ಟಣಿಗೆಯ ವೀಕ್ಷಣಾ ಗ್ಯಾಲರಿ, ಪಾಕಿರ್ಂಗ್, ಉಪಹಾರ ಗೃಹ, ವಿಶ್ರಾಂತಿ ಕೊಠಡಿ, ಬೋಟಿಂಗ್, ಜಲಕ್ರೀಡೆ, ಜಲಪಾತವನ್ನು ಸನಿಹದಿಂದ ನೋಡುವ ಅವಕಾಶ ಕಲ್ಪಿಸುವ ರೋಪ್ ವೇ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ಒದಗಿಸುವ ಕಾಮಗಾರಿಗಳು ಹಾಗೂ ಸಕ್ಕರೆಬೈಲಿನ ಆನೆ ಬಿಡಾರ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗುತ್ತಿವೆ ಎಂದರು.

ಶಿವಮೊಗ್ಗ ನಗರದ ಸರ್ವತೋಮುಖ ಅಭಿವೃದ್ಧಿಗೂ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 46 ಎಕರೆ ವಿಶಾಲ ಪ್ರದೇಶದಲ್ಲಿ ಇರುವ ಶಿವಮೊಗ್ಗದ ಹಳೇ ಜೈಲು ಪ್ರದೇಶ ಈಗ ಫ್ರೀಡಂ ಪಾರ್ಕ್ ಆಗಿದೆ. ಒಟ್ಟು 5.35 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಂಡಿದೆ. ಫ್ರೀಡಂಪಾರ್ಕ್ ಕಾಂಪೌಂಡ್‌ಗಳಲ್ಲಿ ಮಲೆನಾಡಿನ ಪ್ರಕೃತಿ ಸೌಂದರ್ಯ ಹಾಗೂ ಇತಿಹಾಸ ಬಿಂಬಿಸುವ ಮ್ಯೂರಲ್ ಆರ್ಟ್ ಚಿತ್ರಗಳು ಕಣ್ಮನ ಸೆಳೆಯುತ್ತಿವೆ. 482.84 ಕೋಟಿ ರೂ.ವೆಚ್ಚದ ಸಿಗಂಧೂರು ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

ಪ್ರಕೃತಿ ವಿಕೋಪ, ಕೊರೋನ ಸೋಂಕಿನಂತಹ ಸಂದಿಗ್ಧ ಸಂದರ್ಭಗಳಲ್ಲಿಯೂ ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ನಿಲ್ಲದಂತೆ ಮುಂದುವರೆದಿವೆ. ಮತ್ತೆ ಮತ್ತೆ ಪ್ರವಾಹದ ಪರಿಸ್ಥಿತಿ ಎದುರಾಗಿದ್ದು, ನಿನ್ನೆ ಶಿವಮೊಗ್ಗ ಸೇರಿದಂತೆ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ, ಜನರ ರಕ್ಷಣೆ, ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ನೆರವಿಗೆ ಅಗತ್ಯ ಸಹಕಾರ ನೀಡಿವೆ. ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಸಹಸ್ರಾರು ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಇದರಿಂದಾಗಿ ಜಿಲ್ಲೆಯ ಹಾಗೂ ನೆರೆ ಜಿಲ್ಲೆಯ 500ಕ್ಕೂ ಹೆಚ್ಚಿನ ಕೆರೆಗಳಿಗೆ ನೀರನ್ನು ತುಂಬಿಸಲಾಗುತ್ತಿದೆ ಎಂದರು.

ಸಾಗರ ತಾಲೂಕಿನ ಇರುವಕ್ಕಿಯಲ್ಲಿ 155ಕೋಟಿ ರೂ.ಗಳ ವೆಚ್ಚದಲ್ಲಿ ಅಂತರಾಷ್ಟ್ರೀಯ ಮಟ್ಟದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯನ್ನು 100 ಹಾಸಿಗೆಗಳ ಸಾಮರ್ಥ್ಯದಿಂದ 1000 ಹಾಸಿಗೆಗಳ ಸಾಮಥ್ಯಕ್ಕೆ ವಿಸ್ತರಿಸಲಾಗಿದೆ. ಅದಕ್ಕೆ ಪೂರಕವಾಗಿ ಸಲಕರಣೆ ಹಾಗೂ ಸಿಬ್ಬಂಧಿಯನ್ನು ನಿಯೋಜಿಸಲಾಗಿದೆ. ಇದರಿಂದಾಗಿ ಕೋರೋನದಂತ ಸೋಂಕಿನ ನಿಯಂತ್ರಣದಲ್ಲಿ ಸಹಕಾರಿಯಾಯಿತು ಎಂದ ಅವರು, ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ಯಾತ್‌ಲ್ಯಾಬ್ ಹಾಗೂ ಆಸ್ಪತ್ರೆಯ ಆವರಣದಲ್ಲಿ ಕಿದ್ವಾಯಿ ಮಾದರಿಯಲ್ಲಿ 50ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆಯನ್ನು ಆರಂಭಿಸಲು ಕ್ರಮ ವಹಿಸಲಾಗಿದೆ ಎಂದರು.

ಪ್ರವಾಸೋದ್ಯಮ ಕ್ಷೇತ್ರಕ್ಕೂ ಆದ್ಯತೆ ನೀಡಿದ್ದು, 205.89ಕೋಟಿ ರೂ.ಗಳ ವೆಚ್ಚದಲ್ಲಿ ವಿಶ್ವವಿಖ್ಯಾತ ಜೋಗದ ಜಲಪಾತ ಹಾಗೂ ಸಕ್ರೆಬೈಲಿನ ಆನೆಬಿಡಾರವನ್ನು ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಈಗಾಗಲೆ ಚಾಲನೆ ನೀಡಲಾಗಿದೆ. ನಗರದಲ್ಲಿ ನೌಕರರ ಭವನ, ಮಲವಗೊಪ್ಪದಲ್ಲಿ ಮೋಟಾರು ವಾಹನ ಚಾಲನ ಟ್ರ್ಯಾಕ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿವೆ ಎಂದ ಅವರು ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳ ಸ್ಥಾಪನೆ ಉತ್ತೇಜನ ನೀಡಲಾಗಿದೆ. ಕೈಗಾರಿಕೋದ್ಯಮಿಗಳು ಸಕಾಲದಲ್ಲಿ ಆಗಮಿಸಿ, ಹಿಂದಿರುಗಲು ಅನುಕೂಲವಾಗುವಂತೆ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಎಲ್ಲಾ ಕಾರ್ಯಗಳು ಸುಗಮವಾಗಿ ನಡೆಯುವಂತಾಗಲು ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳ ಸಹಕಾರ, ಅನುಷ್ಠಾನ ಕಾರ್ಯದಲ್ಲಿ ಅಧಿಕಾರಿ-ಸಿಬ್ಬಂಧಿಗಳ ಪಾತ್ರ ಪ್ರಧಾನವಾದುದ್ದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಜಿಲ್ಲೆಯ ಜನರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳು ಅತ್ಯಲ್ಪ ಅವಧಿಯಲ್ಲಿ ಮಿಂಚಿನ ವೇಗದಲ್ಲಿ ನಡೆದಿವೆ. ವಿಶೇಷವಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಸುಮಾರು 10,000 ಕೋಟಿಗಳಿಗೂ ಹೆಚ್ಚಿನ ಅನುದಾನವನ್ನು ತಂದು ಕೃಷಿ, ನೀರಾವರಿ, ಆರೋಗ್ಯ, ರೈಲು, ರಸ್ತೆ, ಸೇತುವೆ, ವಿಮಾನ ನಿಲ್ದಾಣ, ಕೈಗಾರಿಕೆ, ಕುಡಿಯುವ ನೀರು, ಪ್ರವಾಸೋದ್ಯಮ ಮುಂತಾದ ಅನೇಕ ಕ್ಷೇತ್ರಗಳಲ್ಲಿ ಆಗಿರುವ ಬದಲಾವಣೆ ಅಸಾಮಾನ್ಯವಾದುದಾಗಿದ್ದು, ಅದಕ್ಕಾಗಿ ಶ್ರಮಿಸಿದ ಸಂಸದ ಬಿ.ವೈ.ರಾಘವೇಂದ್ರ ಅಭಿನಂದನಾರ್ಹರು ಎಂದರು.

ರಾಜ್ಯದ ಬಹುತೇಕ ಎಲ್ಲೆಡೆ ಈ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಸರ್ಕಾರವೂ ಕೂಡ ಜನರ ಹೋರಾಟಗಳಿಗೆ ಅವಕಾಶವಿಲ್ಲದಂತೆ ಜನರ ಆಶಯಗಳನ್ನು ಪೂರೈಸುವಲ್ಲಿ ಸಕ್ರಿಯವಾಗಿದೆ ಎಂದರು.

ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ವರ್ಚುವಲ್ ಹೋಸ್ಟಿಂಗ್ ಮೂಲಕ ನಡೆದ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರಸಾರಗೊಂಡ ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ವಿಧಾನಸಭಾ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕೃಷಿ ಸಚಿವ ಬಿ.ಸಿ.ಪಾಟೀಲ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಶಾಸಕರಾದ ಹರತಾಳು ಹಾಲಪ್ಪ, ಆರಗಜ್ಞಾನೇಂದ್ರ, ಎಸ್.ಕುಮಾರ್ ಬಂಗಾರಪ್ಪ, ಬಿ.ಕೆ.ಸಂಗಮೇಶ್ವರ, ಕೆ.ಬಿ.ಅಶೋಕನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಆರ್.ಪ್ರಸನ್ನಕುಮಾರ್, ರುದ್ರೇಗೌಡ, ಆಯನೂರು ಮಂಜುನಾಥ್, ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ನಿಗಮ-ಮಂಡಳಿಗಳ ಅಧ್ಯಕ್ಷರು, ವಿವಿಧ ಇಲಾಖೆಗಳ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಲ್ಲೆಯ ವಿವಿಧ ಮಠಾಧೀಶರುಗಳು, ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಸಮನ್ವಯ ತಂಡದ ಸದಸ್ಯರ ನಾಡಗೀತೆ ಹಾಗೂ ರೈತಗೀತೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸ್ವಾಗತಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ ಅವರು ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CM YadiyurappaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಮುಖ್ಯಮಂತ್ರಿ ಯಡಿಯೂರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

Next Post

ಜಲಾವೃತದಿಂದ ಸಂಕಷ್ಟದಲ್ಲಿರುವ ನಾಗರಿಕರಿಗೆ ಶಿವಮೊಗ್ಗ ಯುವ ಕಾಂಗ್ರೆಸ್ ನೆರವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಲಾವೃತದಿಂದ ಸಂಕಷ್ಟದಲ್ಲಿರುವ ನಾಗರಿಕರಿಗೆ ಶಿವಮೊಗ್ಗ ಯುವ ಕಾಂಗ್ರೆಸ್ ನೆರವು

ಜಲಾವೃತದಿಂದ ಸಂಕಷ್ಟದಲ್ಲಿರುವ ನಾಗರಿಕರಿಗೆ ಶಿವಮೊಗ್ಗ ಯುವ ಕಾಂಗ್ರೆಸ್ ನೆರವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
Shivamogga Ganja sale case Two arrested

ಶಿವಮೊಗ್ಗ | ಗಾಂಜಾ ಮಾರಾಟ ಪ್ರಕರಣ: ಇಬ್ಬರ ಬಂಧನ

June 19, 2026
ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ನಕಲಿ ಪತ್ರದ ಮೂಲಕ ಸಾಲ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

June 19, 2026
ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

ಭುವನೇಶ್ವರಿ ಬಡಾವಣೆ ಪಾರ್ಕ್ ಪರಿಶೀಲನೆ: ಮೂಲಸೌಕರ್ಯ ಕೊರತೆಗೆ ಶಾಸಕ ಚನ್ನಬಸಪ್ಪ ಗರಂ

June 19, 2026
ಮಾಸಿಕ ಪಿಂಚಣಿ ಯೋಜನೆ ಸ್ಥಗಿತ | ಬಡವರಿಗೆ ದ್ರೋಹ: ಶಾಸಕ ಚನ್ನಬಸಪ್ಪ ಆಕ್ರೋಶ

ಧರ್ಮಸ್ಥಳ ವಿಚಾರ: ನಟ ಪ್ರಕಾಶ್ ರಾಜ್ ವಿರುದ್ಧ ತನಿಖೆ ನಡೆಸಲು ಶಾಸಕ ಚನ್ನಬಸಪ್ಪ ಆಗ್ರಹ

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL