ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜುಲೈ 20ರಂದು ರಾತ್ರಿ 10.30ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಜುಲೈ 21 ರಂದು ಬೆಳಗ್ಗೆ 9.30 ರಿಂದ 10ರವರೆಗೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. 10ರಿಂದ 11ರವರೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಅಭಿವೃದ್ಧಿ ಕುರಿತು ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬೆಂಗಳೂರಿಗೆ ವಾಪಸ್ಸು ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post