No Result
View All Result
AN-32 of IAF has met with an accident in Assam
English Articles

IAF Aircraft Crashes During Landing at Jorhat Airbase in Assam

by ಕಲ್ಪ ನ್ಯೂಸ್
June 13, 2026
0

Kalpa Media House  |  Assam  | An Indian Air Force (IAF) Antonov An-32 transport aircraft crashed while attempting to land...

Read moreDetails
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆತಂಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 30, 2025
in ಶಿವಮೊಗ್ಗ
0
ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆತಂಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕುವೆಂಪು ವಿವಿಯು #Kuvempu University ಮುಚ್ಚುವ ದಿನಗಳು ದೂರವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಆತಂಕ ವ್ಯಕ್ತಪಡಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕುವೆಂಪು ವಿವಿಯಲ್ಲಿ ಭ್ರಷ್ಟಾಚಾರ ಸೇರಿದಂತೆ ಅನೇಕ ಅಧ್ವಾನಗಳು ನಡೆಯತೊಡಗಿವೆ. ಈ ಬಗ್ಗೆ ಸರ್ಕಾರವಾಗಲೀ ಅಲ್ಲಿನ ಕುಲಪತಿಗಳಾಗಳಿ ಕಿಂಚಿತ್ತೂ ಯೋಚಿಸುತ್ತಿಲ್ಲ. ಹೀಗೆ ಮುಂದುವರೆದರೆ ಕುವೆಂಪು ವಿವಿ ಮುಚ್ಚುವ ದಿನಗಳು ಹತ್ತಿರ ಬರುತ್ತವೆ. ಅದಕ್ಕೂ ಮುಂಚೆ ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದರು.
ಇತ್ತೀಚೆಗೆ ಕುವೆಂಪು ವಿವಿಯಲ್ಲಿ ಘಟಿಕೋತ್ಸವ ಕಾರ್ಯಕ್ರಮ ನಡೆಯಿತು. ಅಂದು ಸಾವಿರಾರು ವಿದ್ಯಾರ್ಥಿಗಳಿಗೆ ಸಂಭ್ರಮದ ದಿನವಾಗಿತ್ತು, ರ‍್ಯಾಂಕ್ ಬಂದವರು ತಮ್ಮ ಪೋಷಕರ ಜೊತೆಗೆ ಬಂದಿದ್ದರು. ಇಂತಹ ಒಂದು ಸಂಭ್ರಮದ ಕಾರ್ಯಕ್ರಮವೊಂದು ಅಲ್ಲಿನ ಅವ್ಯವಸ್ಥೆಗಳಿಗೆ ಸಾಕ್ಷಿಯಾಯಿತು ಎಂದು ಬೇಸರ ವ್ಯಕ್ತಪಡಿಸಿದರು.

ಈ ಎಲ್ಲಕ್ಕಿಂತ ಮುಖ್ಯವಾಗಿ ಈ ಸಮಾರಂಭಕ್ಕೆ ಉನ್ನತ ಶಿಕ್ಷಣ ಸಚಿವರು ಬರಬೇಕಿತ್ತು. ಇಲ್ಲಿನ ಸಮಸ್ಯೆಗಳ ಬಗ್ಗೆ ಆಲಿಸಬೇಕಿತ್ತು. ನಾವು ಕೂಡ ಅವರು ಬರುತ್ತಾರೆ ಎಂದುಕೊಂಡಿದ್ದೆವು. ಆದರೆ ಅವರು ಬರಲಿಲ್ಲ. ಕಳೆದ ವರ್ಷವೂ ಅವರು ಬಂದಿರಲಿಲ್ಲ. ಕುವೆಂಪು ವಿವಿ ಬಗ್ಗೆ ಯಾಕಿಷ್ಟು ಅನಾದರ ಎಂದು ಅರ್ಥವಾಗುತ್ತಿಲ್ಲ. ರಾಜ್ಯಪಾಲರು ಕಾರ್ಯಕ್ರಮಕ್ಕೆ ಬರುತ್ತಾರೆ ಎಂಬ ಕಾರಣಕ್ಕೆ ಅವರು ಬರಲಿಲ್ಲ ಎಂಬ ಅನುಮಾನ ನಮಗಿದೆ. ಅವರು ಹೇಳಿದ ದಿನಾಂಕವನ್ನೇ ಗೊತ್ತುಪಡಿಸಲಾಗಿತ್ತು. ಆದರೂ ಕೂಡ ಅವರು ಬರಲಿಲ್ಲ ಎಂದರು.

Also read: ಸೇನಾ ಹೆಲಿಕಾಪ್ಟರ್‌ಗೆ ಪ್ರಯಾಣಿಕರಿದ್ದ ವಿಮಾನ ಡಿಕ್ಕಿ | ಘಟನೆ ನಡೆದಿದ್ದೆಲ್ಲಿ?

ಇದೇ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದವರೇ ಆದ ಹಿರಿಯ ಮುತ್ಸದ್ಧಿ ರಾಜಕಾರಣಿ ಕಾಗೋಡು ತಿಮ್ಮಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಿದರು. ಇದಕ್ಕಾದರೂ ಅವರು ಬರಬಹುದಿತ್ತು. ಆದರೆ, ಬರಲಿಲ್ಲ. ಏನಾಗಿದೆ ಅವರಿಗೆ ಎಂದು ಗೊತ್ತಿಲ್ಲ. ಇದು ವಿದ್ಯಾರ್ಥಿಗಳಿಗೆ ಮತ್ತು ವಿಶ್ವವಿದ್ಯಾಲಯಕ್ಕೆ ಮಾಡಿದ ಅವಮಾನ ಎಂದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿಯೂ ಒಂದು ಪ್ರತಿ ವರ್ಷ ಕುವೆಂಪು ವಿವಿ ವ್ಯಾಪ್ತಿಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪದವಿ ಪಡೆಯುತ್ತಾರೆ. ಆದರೆ ಅವರಿಗೆ ಯುವನಿಧಿಗೆ ಅರ್ಜಿ ಹಾಕಲು ಕೂಡ ಬರುವುದಿಲ್ಲ. ಕಾರಣ ಕುವೆಂಪು ವಿವಿಯಲ್ಲಿರುವ ಅವ್ಯವಸ್ಥೆ. ಅವರಿಗೆ ಇದುವರೆಗೂ ಅಂಕಪಟ್ಟಿಯೇ ಬಂದಿಲ್ಲ. ಒಂದು ಅಂಕಪಟ್ಟಿ ಕೊಡಲು ಇವರಿಗೆ ವರ್ಷಗಳು ಬೇಕೇ ಎಂದ ಅವರು ಈ ಬಗ್ಗೆ ಕುಲಪತಿಗಳನ್ನು ಕೇಳಿದರೆ ಅವರ ಉತ್ತರವೇ ಒಂದು ರೀತಿಯ ದರ್ಪವಾಗಿರುತ್ತದೆ. ಬೇರೆ ದೇಶದಿಂದ ಬಂದವರಂತೆ ಅವರು ಕಾಣುತ್ತಾರೆ ಎಂದು ದೂರಿದರು.
ಇನ್ನು ಅಲ್ಲಿನ ಸಾಫ್ಟ್ ವೇರ್ ಹಗರಣ ದೊಡ್ಡದಿದೆ. ಸದ್ಯದರಲ್ಲೇ ಈ ಹಗರಣದ ಬಗ್ಗೆ ತನಿಖೆಯಾಗಲಿದೆ. ಸುಮಾರು 25 ಲಕ್ಷಕ್ಕೂ ಹೆಚ್ಚು ಮೊತ್ತದ ಹಗರಣ ಇದಾಗಿದೆ. ಕುವೆಂಪು ವಿವಿಯಲ್ಲಿ ಎಷ್ಟರಮಟ್ಟಿಗೆ ಅವ್ಯವಹಾರವಾಗುತ್ತಿದೆ ಎಂದರೆ ಘಟಿಕೋತ್ಸವದಂತಹ ಸಮಾರಂಭ ನಿರ್ವಹಿಸಲು ಇವೆಂಟ್ ಮ್ಯಾನೇಜ್ ಮೆಂಟ್ ಗೆ ಗುತ್ತಿಗೆ ನೀಡುತ್ತಾರೆ ಎಂದರೆ ಆಶ್ಚರ್ಯವಾಗುತ್ತದೆ. ಕುವೆಂಪು ವಿವಿಯಲ್ಲಿ ಸುಮಾರು 500ಕ್ಕೂ ಹೆಚ್ಚು ನೌಕರರಿದ್ದಾರೆ. ವಿದ್ಯಾರ್ಥಿಗಳಿಂದ ಪಡೆದ ಶುಲ್ಕದಲ್ಲಿ ಅರೆಕಾಲಿಕ ಉದ್ಯೋಗಿಗಳಿಗೆ ವೇತನ ಬಳಸಿಕೊಳ್ಳುತ್ತಾರೆ ಎಂದರೆ ಕುವೆಂಪು ವಿವಿ ಸ್ಥಿತಿ ಎಲ್ಲಿಗೆ ಬಂದಿದೆ ಎಂದು ಅರ್ಥವಾಗುತ್ತದೆ ಎಂದರು.

ಕುವೆಂಪು ವಿವಿಯ ಸಾಲು-ಸಾಲು ಹಗರಣಗಳಲ್ಲಿ ಅಸಮರ್ಪಕ ಮೌಲ್ಯಮಾಪನ ಪ್ರಕ್ರಿಯೆಯೂ ಒಂದಾಗಿದ್ದು, ಕಡಿಮೆ ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅಂಕ ಲಭಿಸಿರುವುದು ಕಂಡು ಬಂದಿದೆ. ಇದರ ಬಗ್ಗೆ ಸಮರ್ಪಕ ತನಿಖೆಯಾಗಬೇಕು. ಹಾಗೂ ಮೌಲ್ಯಮಾಪನ ಪ್ರಕ್ರಿಯೆ ಕಳೆದು ನಾಲ್ಕು ತಿಂಗಳಾದರು ಮೌಲ್ಯಮಾಪಕರಾಗಿ ಪಾಲ್ಗೊಂಡಿದ್ದ ಸಿಬ್ಬಂದಿಗಳಿಗೆ ಮೌಲ್ಯಮಾಪನ ಶುಲ್ಕ ಇನ್ನೂ ಕೂಡ ನೀಡದೆ ಇರುವುದು ಬೆಳಕಿಗೆ ಬಂದಿದ್ದು, ಇದಕ್ಕೆ ಸೂಕ್ತ ಕಾರಣ ನೀಡಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಈಗ ಮತ್ತೊಂದು ನಿರ್ಧಾರ ಕೈಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ಸ್ಥಾಪಿಸಲು ಹೊರಟಿದೆ. ಈ ವಿವಿಗೆ ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಿರಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ. ಇದು ಎಷ್ಟರಮಟ್ಟಿಗೆ ಸರಿಯೋ ಅರ್ಥವಾಗುತ್ತಿಲ್ಲ. ಬಹುಶಃ ರಾಜ್ಯಪಾಲರೇ ಕುಲಪತಿಗಳಾಗಬೇಕು ಎಂಬ ಈಗಿರುವ ನಿಯಮದಿಂದ ರಾಜ್ಯ ಸರ್ಕಾರ ಆತಂಕಗೊAಡAತೆ ಕಾಣುತ್ತದೆ. ಕೇಂದ್ರದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿಯೇ ಬರುತ್ತದೆ. ಹಾಗಾಗಿ ಅವರ ಪಕ್ಷದವರೇ ರಾಜ್ಯಪಾಲರಾಗುತ್ತಾರೆ ಎಂಬ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ, ಅವರಿಗೆ ನೆನಪಿರಲಿ, ರಾಜ್ಯದಲ್ಲಿಯೂ ಕೂಡ ಬಿಜೆಪಿ ಸರ್ಕಾರ ಬರುತ್ತದೆ ಎಂದರು.

ಸಚಿವ ಮಧು ಬಂಗಾರಪ್ಪ ಅವರು ಸಂಸದರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿದ ಅರುಣ್, ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಅಧ್ಯಕ್ಷರ ಆಯ್ಕೆಗೆ ಸಂಬAಧಿಸಿದAತೆ ಬಿಜೆಪಿಯಲ್ಲಿ ಒಂದು ಶಿಸ್ತು ಇದೆ. ಆ ಶಿಸ್ತಿನ ಪ್ರಕಾರವೇ ನಡೆಯುತ್ತದೆ. ಗೊಂದಲಗಳಿದ್ದರೆ ಹಿರಿಯರು ಅದನ್ನು ಸರಿಪಡಿಸುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಮಾಲತೇಶ್, ಅಣ್ಣಪ್ಪ ಕೆ.ವಿ. ಚಂದ್ರಶೇಖರ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: D S ArunKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempu UniversityLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕುವೆಂಪು ವಿವಿಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೇನಾ ಹೆಲಿಕಾಪ್ಟರ್‌ಗೆ ಪ್ರಯಾಣಿಕರಿದ್ದ ವಿಮಾನ ಡಿಕ್ಕಿ | ಘಟನೆ ನಡೆದಿದ್ದೆಲ್ಲಿ?

Next Post

ಮೋದಿ ದೂರದೃಷ್ಟಿಯಿಂದ ವೈಜಾಗ್ ಸ್ಟೀಲ್ ಪುನಶ್ಚೇತನ | ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೋದಿ ದೂರದೃಷ್ಟಿಯಿಂದ ವೈಜಾಗ್ ಸ್ಟೀಲ್ ಪುನಶ್ಚೇತನ | ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಮೋದಿ ದೂರದೃಷ್ಟಿಯಿಂದ ವೈಜಾಗ್ ಸ್ಟೀಲ್ ಪುನಶ್ಚೇತನ | ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Facility for Divyangjan Passengers in Indian Railways

ಆನ್‌ಲೈನ್‌ನಲ್ಲಿ ಈಗ ದಿವ್ಯಾಂಗ ಜನರಿಗೆ ರೈಲ್ವೆ ರಿಯಾಯಿತಿ ಐಡಿ | ಪಡೆಯುವುದು ಹೇಗೆ?

June 13, 2026
ಸಾಮಾಜಿಕ ಹೊಣೆಗಾರಿಕೆಯೊಂದಿಗೆ ವೃತ್ತಿಜೀವನ ರೂಪಿಸಿಕೊಳ್ಳಿ: ಪ್ರೊ. ರಾಮರಾವ್ ಕರೆ

ಸಾಮಾಜಿಕ ಹೊಣೆಗಾರಿಕೆಯೊಂದಿಗೆ ವೃತ್ತಿಜೀವನ ರೂಪಿಸಿಕೊಳ್ಳಿ: ಪ್ರೊ. ರಾಮರಾವ್ ಕರೆ

June 13, 2026
India Face Afghanistan in 1st ODI

1ನೇ ಏಕದಿನ ಪಂದ್ಯ | ಅಫ್ಗಾನಿಸ್ತಾನ ವಿರುದ್ಧ ಭಾರತಕ್ಕೆ ಮಹತ್ವದ ಪರೀಕ್ಷೆ

June 13, 2026
ಗ್ರಾಮೀಣ ಪ್ರತಿಭೆ ದೊಡ್ಡ ವೇದಿಕೆಯಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ: ಮಧು ಬಂಗಾರಪ್ಪ

ಗ್ರಾಮೀಣ ಪ್ರತಿಭೆ ದೊಡ್ಡ ವೇದಿಕೆಯಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ: ಮಧು ಬಂಗಾರಪ್ಪ

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL