ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ನಿ ಕಮಲಮ್ಮ ಅವರನ್ನು ಕೊಲೆ ಮಾಡಿ ನಗದು ದೋಚಿದ್ದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಿಂದ 33,74,800 ರೂ. ನಗದು ಸೇರಿದಂತೆ 2 ಬೈಕ್, ಒಂದು ಕಾರು ಹಾಗೂ 7 ಮೊಬೈಲ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಲ್ಲಿಕಾರ್ಜುನ್ ಅವರ ಕಾರು ಚಾಲಕನಾಗಿದ್ದ ಹುಣಸೋಡು ತಾಂಡಾದ ಹನುಮಂತನಾಯ್ಕ(22), ಗುಂಡಪ್ಪ ಶೆಡ್ನ ಪ್ರದೀಪ್ ವಿ. ಯಾನೆ ಮೊದಲಿಯಾರ್(21), ಅನುಪಿನಕಟ್ಟೆ ತಾಂಡಾದ ಅಪ್ಪುನಾಯ್ಕ ಸಿ. ಯಾನೆ ಅಪ್ಪು(21), ಗುಂಡಪ್ಪ ಶೆಡ್ನ ಸತೀಶ್ ವಿ.(26), ಅನುಪಿನಕಟ್ಟೆ ತಾಂಡಾದ ರಾಜು ವೈ. ಯಾನೆ ತೀತಾ(24) ಬಂಧಿತ ಆರೋಪಿಗಳಾಗಿದ್ದಾರೆ ಎಂದ ಅವರು, ಈ ಕೃತ್ಯಕ್ಕೆ ಕಾರು ನೀಡಿದ್ದ ಕೌಶಿಕ್ ಎಂಬ 7ನೇ ಆರೋಪಿಯನ್ನು ಕೂಡ ನಿನ್ನೆ ಬಂಧಿಸಲಾಗಿದೆ ಎಂದರು.

ಮಲ್ಲಿಕಾರ್ಜುನ ಅವರು ಗೋವಾಕ್ಕೆ ತೆರಳಿದ ಸಂದರ್ಭ ನೋಡಿಕೊಂಡ ಆರೋಪಿ ಹನುಮಂತನಾಯ್ಕ ತನ್ನ ಸೋದರನಿಗೆ ಅಪಘಾತವಾಗಿದ್ದು, ಆತನ ಚಿಕಿತ್ಸೆಗೆ 2 ಸಾವಿರ ಹಣ ಬೇಕೆಂದು ಜೂ.16 ರ ರಾತ್ರಿ ಮಲ್ಲಿಕಾರ್ಜುನ ಅವರ ಮನೆಗೆ ಹೋಗಿ ಕಮಲಮ್ಮನವರ ಬಳಿ ಕೇಳಿದ್ದ. ಆ ಸಂದರ್ಭದಲ್ಲಿ ಹಣ ನೀಡದೆ ಮಾರನೇ ದಿನ ಬರುವಂತೆ ಹೇಳಿದ್ದರು ಎಂದರು.

ಬಳಿಕ ಎಲ್ಲರೂ ಬೇರೆ ಬೇರೆ ಕಡೆ ತೆರಳಿದ್ದರು. ಹೋಟೆಲ್ನಲ್ಲಿ ಉಳಿದು, ಹೊಸ ಮೊಬೈಲ್ಗಳನ್ನು ಖರೀದಿ ಮಾಡಿದ್ದರು. ಇನ್ನೋರ್ವ ಕೌಶಿಕ್ ಎಂಬಾತ ಇವರಿಗೆ ಕಾರು ನೀಡಿ ಸಹಾಯ ಮಾಡಿದ್ದು, ಆತನ ಮೇಲೆಯೂ ಪ್ರಕರಣ ದಾಖಲಿಸಲಾಗಿದೆ ಎಂದರು.

Also read: ಭೂಗತ ಕೇಬಲ್ ಫೀಡರ್ ಪಿಲ್ಲರ್ ಬಾಕ್ಸ್ ನಲ್ಲಿ ಬೆಂಕಿ: ಆತಂಕಗೊಂಡ ಸ್ಥಳೀಯರು
ಆರೋಪಿಗಳೆಲ್ಲರೂ ಕೂಲಿ ಹಾಗೂ ಗಾರೆ ಕೆಲಸ ಮಾಡುವವರಾಗಿದ್ದಾರೆ. ಇವರೆಲ್ಲರೂ ಟೀ, ಮದ್ಯದಂಗಡಿಗಳನ್ನು ಅಡ್ಡೆಯಾಗಿ ಮಾಡಿಕೊಂಡಿದ್ದರು. ಇವರ ಪರಿಚಯ ಮಾಡಿಕೊಂಡ ಡ್ರೈವರ್ ಹನುಮಂತನಾಯ್ಕ್ ಮನೆಯಲ್ಲಿ ಹಣ ಇರುವುದು ಖಚಿತ ಇದನ್ನು ದೋಚಬೇಕು ಎಂದು ಪ್ಲಾನ್ ಮಾಡಿದ್ದರು. ಹನುಂತನಾಯ್ಕ್ ಒಂದು ವರ್ಷದಿಂದ ಇಂಜಿನಿಯರ್ ಮಲ್ಲಿಕಾರ್ಜುನಪ್ಪ ಅವರ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಪ್ರತಿದಿನ ಅವರು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ. ಹಾಗಾಗಿ ಇವರ ಕುಟುಂಬಕ್ಕೆ ಹತ್ತಿರವಾಗಿದ್ದು, ಅವರ ವಿವರಗಳನ್ನು ತಿಳಿದುಕೊಂಡಿದ್ದ ಮತ್ತು ಹಣವನ್ನು ದೋಚಲು ಮುಂಚೆಯೇ ಉಪಾಯ ಮಾಡಿದ್ದ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಎಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ, ಡಿವೈಎಸ್ಪಿ ಬಾಲರಾಜು, ತುಂಗಾನಗರ ಪೊಲೀಸ್ ಠಾಣೆಯ ಮಂಜುನಾಥ್, ಪಿಎಸ್ಐ ಕುಮಾರ್, ರಘುವೀರ್, ಸಿಬ್ಬಂದಿಗಳಾದ ಕಿರಣ್, ರಾಜು, ಅರುಣ್ಕುಮಾರ್, ಅಶೋಕ್, ಮೋಹನ್, ಕೇಶವ್ ಕುಮಾರ್, ಕಾಂತರಾಜ್, ನಾಗಪ್ಪ, ಹರೀಶ್ನಾಯ್ಕ ಮತ್ತಿತರರು ಇದ್ದರು.










Discussion about this post