ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಪರಿಷತ್ ನೀಡುವ 2023ನೇ ಸಾಲಿನ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಲಕ್ಷ್ಮಿ ಎಸ್. ಭದ್ರಾವತಿ ಆಯ್ಕೆಯಾಗಿದ್ದಾರೆ.
ಉರ್ದು ಶಾಲೆಗಳಲ್ಲಿ ಕನ್ನಡ ಶಿಕ್ಷಣದ ಸರ್ವತೋಮುಖ ಬೆಳವಣಿಗೆ ಮುತ್ತು ದಾಖಲಾತಿ ಹೆಚ್ಚುವಂತೆ ನಡೆಸಿದ ಸೃಜನಶೀಲ ಚಟುವಟಿಕೆಗಳ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ತಾಲೂಕು ಸಿರಿಗೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಲಕ್ಷ್ಮಿ ಎಸ್. ಭದ್ರಾವತಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Also read: ರೌಡಿ ಶೀಟರ್’ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ
ಶಿವಮೊಗ್ಗದ ರಂಗಭೂಮಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಇವರು ರಾಜ್ಯ ಮಟ್ಟದ ಅತ್ಯುತ್ತಮ ನಟಿ ಪ್ರಶಸ್ತಿಗಳಿಸಿದ್ದಾರೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ವಿಶೇಷ ಚಟುವಟಿಕೆಗಳು, ನೃತ್ಯ ಸಂಯೋಜನೆ, ನಿರೂಪಣೆ ಇವರನ್ನು ಅತ್ಯುತ್ತಮ ಶಿಕ್ಷಕಿಯಾಗಿ ರೂಪಿಸಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post