ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಜನತೆ ನಿಮ್ಮ ಮನೆ ಬಾಗಿಲಿನ ರಸ್ತೆಗಳನ್ನು ಗಮನಿಸಿ ಕಳಪೆ ಕಾಮಗಾರಿ ಕಂಡುಬಂದಲ್ಲಿ ತಕ್ಷಣ ತಮಗೆ ದೂರು ನೀಡಿ, ತಾವು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಶಾಸಕ ಈಶ್ವರಪ್ಪ MLA Eshwarappa ಹೇಳಿದರು.
ಸ್ಮಾರ್ಟ್ಸಿಟಿ ಯೋಜನೆಯಡಿಯಲ್ಲಿ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಿಗೆ ಮೇಯರ್, ಉಪಮೇಯರ್ ಮತ್ತು ಅಧಿಕಾರಿಗಳನ್ನೊಳಗೊಂಡ ತಂಡ ನಗರದಲ್ಲಿ ಪರಿಶೀಲನೆ ನಡೆಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದರು ಅವರು, ಸ್ಮಾರ್ಟ್ಸಿಟಿ ಅಭಿವೃದ್ಧಿ ಕಾಮಗಾರಿ ತಮಗೆ ತೃಪ್ತಿ ತಂದಿದೆ. ಆದರೆ, ಕೆಲವು ಮಾಧ್ಯಮಗಳಲ್ಲಿ ಕಳಪೆ ಕಾಮಗಾರಿ ನಡೆದಿರುವ ಬಗ್ಗೆ ವರದಿಗಳು ಪ್ರಕಟಗೊಂಡಿದ್ದು, ನಾಗರೀಕರಿಗೆ ಇದಕ್ಕೆ ಸಂಬಂಧಪಟ್ಟಂತೆ ಏನೇ ದೂರುಗಳಿದ್ದರು ತಮಗೆ ವೈಯಕ್ತಿಕವಾಗಿ ಮಾಹಿತಿ ನೀಡಿದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಆಶ್ವಾಸನೆ ನೀಡಿದರು.
ಸ್ಮಾಟಿಸಿಟಿ ಕಾಮಗಾರಿಗಾಗಿ 817ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದ್ದು, 780 ಕೋಟಿ ರೂ. ವೆಚ್ಚದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ. 104 ಕಿಮೀನಷ್ಟು ರಸ್ತೆ ದುರಸ್ತಿ ಕಾರ್ಯ ಮಾಡಲಾಗಿದ್ದು, 18 ಪಾರ್ಕ್ಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇನ್ನು 113 ಕನ್ಸರ್ವೆನ್ಸಿ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಗುರು ಹೊಂದಲಾಗಿದೆ ಎಂದರು.
Also read: ಜೈನ್ ಪಬ್ಲಿಕ್ ಶಾಲೆಗೆ ಗಾಯನ ಸ್ಫರ್ಧೆಯಲ್ಲಿ ಪ್ರಥಮ, ವಾಲಿಬಾಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ
ಸರ್ಕಾರಿ ಮೇನ್ ಮಿಡಲ್ ಸ್ಕೂಲ್ ದುರಸ್ಥಿ ಕಾರ್ಯ ಸಂಪೂರ್ಣಗೊಂಡಿದೆ. ಇನ್ನು ಶಿವಪ್ಪ ನಾಯಕ ಅರಮನೆಗೆ ಸಂಬಂಧಪಟ್ಟಂಥೆ ಸೂಕ್ಷ್ಮ ಕುಸುರಿ ಕೆಲಸಗಳು ನಡೆಯುತ್ತಿರುವ ಕಾರಣ ದುರಸ್ತಿ ಕಾರ್ಯ ಸ್ವಲ್ಪ ವಿಳಂಬವಾಗುತ್ತಿದೆ. ಶೀಘ್ರದಲ್ಲೇ ಕಾಮಗಾರಿ ಸಂಪೂರ್ಣಗೊಳ್ಳಲಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post