No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಶೋಧನೆಗಳು ಸ್ವಯಂ ಆಸಕ್ತಿಯುಳ್ಳ ಪ್ರಕ್ರಿಯೆ ಆಗಲಿ | ಐಐಎಸ್ಸಿ ಪ್ರಾಧ್ಯಾಪಕ ಶ್ರೀನಿವಾಸ ಅಭಿಮತ

kalpa News by kalpa News
December 13, 2024
in ಶಿವಮೊಗ್ಗ
0
ಸಂಶೋಧನೆಗಳು ಸ್ವಯಂ ಆಸಕ್ತಿಯುಳ್ಳ ಪ್ರಕ್ರಿಯೆ ಆಗಲಿ | ಐಐಎಸ್ಸಿ ಪ್ರಾಧ್ಯಾಪಕ ಶ್ರೀನಿವಾಸ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಹುಮಾಧ್ಯಮ (ಮಲ್ಟಿಮಿಡಿಯಾ ಪ್ರೊಸೆಸಿಂಗ್) #MultimediaProcessing ನಿರ್ವಹಣೆಯಲ್ಲಿ ಹೊಸ ಸಾಧ್ಯತೆಗಳ ಕುರಿತಾಗಿ ಮತ್ತಷ್ಟು ಸಂಶೋಧನೆಗಳ ಅವಶ್ಯಕತೆಯಿದ್ದು ಈ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆಗಳಲ್ಲಿ ಸಂಶೋಧನಾ ಕೇಂದ್ರಗಳು ಪ್ರಾರಂಭವಾಗಲಿ ಎಂದು ಬೆಂಗಳೂರು ಐಐಎಸ್ಸಿ #IISC ಪ್ರಾಧ್ಯಾಪಕ ಟಿ. ಶ್ರೀನಿವಾಸ ಅಭಿಪ್ರಾಯಪಟ್ಟರು.

ನಗರದ ಜೆ.ಎನ್‌.ಎನ್‌ ಎಂಜಿನಿಯರಿಂಗ್‌ #JNNCE ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್‌ ಅಂಡ್‌ ಕಮ್ಯುನಿಕೇಷನ್‌ ಎಂಜಿನಿಯರಿಂಗ್‌ ವಿಭಾಗದ ವತಿಯಿಂದ ಐಇಇಇ ಬೆಂಗಳೂರು ಮತ್ತು ಮಂಗಳೂರು ವಿಭಾಗ, ಐಇಟಿಇ ಶಿವಮೊಗ್ಗ ಕೇಂದ್ರ, ಐಇಇಇ ಕಾಮ್‌ಸಾಕ್‌ ಬೆಂಗಳೂರು ವಿಭಾಗದ ಸಹಯೋಗದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಲ್ಟಿಮಿಡಿಯಾ ಪ್ರೊಸೆಸಿಂಗ್‌, ಕಮ್ಯುನಿಕೇಷನ್‌ ಮತ್ತು ಇನ್ಫಾರ್ಮೇಷನ್‌ ಟೆಕ್ನಾಲಜಿ #InformationTechnology ಕುರಿತ ನಾಲ್ಕನೇ ಅಂತರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಜಗತ್ತಿನಲ್ಲಿ ನಡೆಯುತ್ತಿರುವ ವಿಷಯಗಳ ವಾಸ್ತವತೆಯನ್ನು ವಿಮರ್ಶೆ ಮಾಡುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಬೇಕಿದೆ. ಸಂಶೋಧನೆಗಳು ಸ್ವಯಂ ಆಸಕ್ತಿಯುಳ್ಳ ಪ್ರಕ್ರಿಯೆ ಆಗಬೇಕು. ಸಂಶೋಧನೆಗಾಗಿ ಜಗತ್ತಿನಲ್ಲಿ ನಡೆಯುತ್ತಿರುವ ಆವಿಷ್ಕಾರಗಳ ಪ್ರೇರಣೆ ಪಡೆಯಿರಿ. ಹೊಸ ಸಂಶೋಧನಾ ಲೇಖನಗಳ ಅಧ್ಯಯನಶೀಲತೆ ಮತ್ತು ವಿಮರ್ಶಾತ್ಮಕ ಕೌಶಲ್ಯತೆ ನಿಮ್ಮದಾಗಲಿ ಎಂದು ಹಾರೈಸಿದರು.

Also Read: ಶಿವಮೊಗ್ಗ | ಪೊಲೀಸರಿಂದ 20 ಟನ್ ಮೆಟ್ರಿಕ್ ಮರಳು ವಶ

ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್‌ ಮಾತನಾಡಿ, ಬದಲಾವಣೆ ಜಗದ ನಿಯಮ. ಇಂಜಿನಿಯರಿಂಗ್ #Engineering ವಿದ್ಯಾಭ್ಯಾಸ ಈ ಮೊದಲಿನಂತಿಲ್ಲ. ಕೇವಲ ಪಠ್ಯದ ಅಧ್ಯಯನಕ್ಕೆ ಮಾತ್ರ ಸೀಮಿತವಾಗದೆ, ವಾಸ್ತವತೆಯ ಜ್ಞಾನವು ಬೇಕಿದೆ. ಭವಿಷ್ಯದ ತಾಂತ್ರಿಕ ಆವಿಷ್ಕಾರಗಳ ಅವಶ್ಯಕತೆಯ ಕುರಿತಾಗಿ ಚಿಂತನೆಗಳಿಗೆ ಇಂತಹ ಕಾರ್ಯಾಗಾರ ಪ್ರೇರಣೆಯಾಗಲಿ. ಆಧುನಿಕತೆಯ ಒಳಗೆ ಮಲ್ಟಿಮೀಡಿಯಾ ಬಹುದೊಡ್ಡ ಶಕ್ತಿಯಾಗಿದ್ದು, ಮಾಧ್ಯಮಗಳಲ್ಲಿ ಕಾಣುವ ನೇರ ಪ್ರಸಾರ, ಸುದ್ದಿ ಪ್ರಸರಣ ಎಲ್ಲವೂ ಸೇರಿದೆ. ಅಂತಹ ಪ್ರಸರಣಕ್ಕೆ ಮತ್ತಷ್ಟು ವೇಗ ಮತ್ತು ನಿಖರತೆಯ ಕುರಿತಾಗಿ ಮತ್ತಷ್ಟು ಸಂಶೋಧನೆಗಳ ಬಗ್ಗೆ ಈ ವಿಚಾರ ಸಂಕಿರಣದಲ್ಲಿ ಚರ್ಚೆ ನಡೆಯಲಿ ಎಂದು ಹೇಳಿದರು.

ಆಸ್ಟ್ರೇಲಿಯಾ #Australia ಡಿಕಿನ್‌ ವಿಶ್ವವಿದ್ಯಾಲಯದ #DeakinUniversity ಡಾ.ಗ್ಯಾಂಗ್‌ ಲಿ ಮಾತನಾಡಿ, ಕೃತಕ ಬುದ್ದಿಮತ್ತೆ ಎಂಬುದು ಸಾಮಾನ್ಯ ಜನರ ಜೀವನಕ್ಕೆ ಬಹಳ ಹತ್ತಿರವಾಗಿದೆ. ಮಲ್ಟಿಮಿಡಿಯಾ ಕ್ಷೇತ್ರದಲ್ಲಿ ಎಐ ತಂತ್ರಜ್ಞಾನವು ಅದ್ಭುತ ನಿಖರತೆಯನ್ನು ನೀಡುತ್ತಿದೆ. ಈ ನಡುವೆ ತಂತ್ರಜ್ಞಾನ ಬೆಳೆದಂತೆಲ್ಲ, ಮನುಷ್ಯನಲ್ಲಿರುವ ನೈತಿಕತೆ ಮತ್ತು ವೃತ್ತಿಪರತೆ ಎಂಬುದು ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ಹೇಳಿದರು.
ಎನ್‌ಇಎಸ್‌ ಕಾರ್ಯದರ್ಶಿ ಎಸ್.‌ಎನ್.ನಾಗರಾಜ ಮಾತನಾಡಿ, ಎಮೊಷನಲ್‌ ಎಐ ಮೂಲಕ ತಂತ್ರಜ್ಞಾನ ದೈನಂದಿನ ಕೆಲಸ ಕಾರ್ಯಗಳ ಜೊತೆಯಲ್ಲಿ ಭಾವನಾತ್ಮಕವಾಗಿಯು ಸ್ಪಂದಿಸಲು ಪ್ರಾರಂಭಿಸುತ್ತಿದೆ. ಅನೇಕ ಸೃಜನಶೀಲ ಚಿಂತನೆಗಳನ್ನು ತಂತ್ರಜ್ಞಾನವೇ ಶಿಫಾರಸ್ಸು ಮಾಡುವ ಕಾಲ ಸನಿಹವಾಗಿದೆ. ಇದರಿಂದ ಜನರ ಸಮೂಹದಿಂದಲೇ ದೂರಾಗಿ ಯಾಂತ್ರಿಕರಣದ ಗುಲಾಮರಾಗುವ ಆತಂಕ ಎದುರಾಗುತ್ತಿದೆ ಎಂದು ಹೇಳಿದರು.

ಐಇಇಇ ಮಂಗಳೂರು ಉಪವಿಭಾಗದ ಮುಖ್ಯಸ್ಥ ಡಾ.ವಾಸುದೇವ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್‌ ಅಧ್ಯಕ್ಷತೆ ವಹಿಸಿದ್ದರು.  ಸಂಶೋಧನಾ ಡೀನ್‌ ಡಾ.ಎಸ್.ವಿ.ಸತ್ಯನಾರಾಯಣ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್‌ಇಎಸ್‌ ನಿರ್ದೇಶಕರಾದ ಟಿ.ಆರ್‌.ಅಶ್ವಥನಾರಾಯಣ ಶ್ರೇಷ್ಟಿ, ಹೆಚ್.ಸಿ.ಶಿವಕುಮಾರ್‌, ಆಜೀವ ಸದಸ್ಯರಾದ ಕಿಶೋರ್‌ ಶೀರನಾಳಿ, ಗುರುಪ್ರಸಾದ್‌, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಶೈಕ್ಷಣಿಕ ಡೀನ್‌ ಡಾ.ಪಿ.ಮಂಜುನಾಥ, ಕಾರ್ಯಕ್ರಮ ಸಂಯೋಜಕರಾದ ಡಾ.ಶೀಲಾ, ಡಾ.ಪ್ರಮೋದ್  ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿಚಾರಸಂಕಿರಣದ ಸ್ಮರಣ ಸಂಚಿಕೆಯನ್ನು ಅತಿಥಿಗಳು ಬಿಡುಗಡೆಗೊಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: Deakin UniversityIISCInformation TechnologyJNNCEKannada News WebsiteLatest News KannadaLocal NewsMalnad NewsMultimedia processingShimogaShivamoggaShivamogga Newsಆಸ್ಟ್ರೇಲಿಯಾಇಂಜಿನಿಯರಿಂಗ್ಇನ್ಫಾರ್ಮೇಷನ್‌ ಟೆಕ್ನಾಲಜಿಐಐಎಸ್ಸಿಡಿಕಿನ್‌ ವಿಶ್ವವಿದ್ಯಾಲಯಮಲ್ಟಿಮಿಡಿಯಾ ಪ್ರೊಸೆಸಿಂಗ್ಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಪೊಲೀಸರಿಂದ 20 ಟನ್ ಮೆಟ್ರಿಕ್ ಮರಳು ವಶ

Next Post

ಭದ್ರಾವತಿ | ಕಳ್ಳನ ಬಂಧನ: ಎರಡು ದ್ವಿಚಕ್ರ ವಾಹನ ವಶ

kalpa News

kalpa News

Next Post
ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಭದ್ರಾವತಿ | ಕಳ್ಳನ ಬಂಧನ: ಎರಡು ದ್ವಿಚಕ್ರ ವಾಹನ ವಶ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL