ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಮಾಜಿಕ ಸಾಮರಸ್ಯಕ್ಕಾಗಿ ಸಂಘ ನೂರು ವರ್ಷಗಳಿಂದಲೂ ಕೆಲಸ ಮಾಡಿದ್ದರೂ ಇನ್ನೂ ಅಸ್ಪಶ್ಯತೆ ಹೋಗಿಲ್ಲ. ಮನೆಗಳಲ್ಲಿ, ಮಂದಿರಗಳಲ್ಲಿ, ಸ್ಮಶಾನಗಳಲ್ಲಿ ಸಾಮರಸ್ಯ ತರಲು ಎಲ್ಲರೂ ಶ್ರಮಿಸಬೇಕಿದೆ ಎಂದು ಆರ್’ಎಸ್’ಎಸ್ #RSS ಕ್ಷೇತ್ರೀಯ ಕಾರ್ಯವಾಹ ನಾ.ತಿಪ್ಪೇಸ್ವಾಮಿ ಕರೆ ನೀಡಿದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ದಿ ವರ್ಷದ ವಿಜಯದಶಮಿ ಉತ್ಸವದ ಅಂಗವಾಗಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಆಕರ್ಷಕ ಪಥಸಂಚಲನ #RouteMarch ಬಳಿಕ ಅಲ್ಲಮ ಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸಭೆಯನುದ್ದೇಶಿಸಿ ಅವರು ಮಾತನಾಡಿದರು.
ಸಂಘ ಕಳೆದ ನೂರು ವರ್ಷಗಳಿಂದ ಸಮಾಜದ ವಿವಿಧ ಸ್ತರಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದು, ಮುಂದೆ ಇನ್ನಷ್ಟು ಕಾರ್ಯಕ್ಷೇತ್ರದ ವಿಸ್ತರಣೆ ಮಾಡಲು ಸ್ವಯಂಸೇವಕರು ಸಮಯ ನೀಡುವಂತೆ ಕರೆ ನೀಡಿದರು.
ಸಾಮಾಜಿಕ ಸಾಮರಸ್ಯಕ್ಕಾಗಿ ಸಂಘ ನೂರು ವರ್ಷಗಳಿಂದಲೂ ಕೆಲಸ ಮಾಡಿದ್ದರೂ ಇನ್ನೂ ಅಸ್ಪಶ್ಯತೆ #Untouchability ಹೋಗಿಲ್ಲ. ಮನೆಗಳಲ್ಲಿ, ಮಂದಿರಗಳಲ್ಲಿ, ಸ್ಮಶಾನಗಳಲ್ಲಿ ಸಾಮರಸ್ಯ ತರಲು ಎಲ್ಲರೂ ಶ್ರಮಿಸಬೇಕಿದೆ. ದೇಶದ ಪ್ರಗತಿಗೆ ಪೂರಕವಾಗಿ ಮಾತೃ ಭಾಷೆಯಲ್ಲಿ ಎಲ್ಲರೂ ವ್ಯವಹರಿಸುವುದು, ಸ್ವದೇಶಿ ವಸ್ತುಗಳ ಬಳಕೆ ಮಾಡುವುದು ಕಡ್ಡಾಯ ಮಾಡಬೇಕೆಂದು ಹೇಳಿದರು.ನಾಗರಿಕ ಸಂಹಿತೆ ಬೆಳೆಸಲು ಮುಂದಾಗಬೇಕಿದೆ. ಹಿರಿಯರಿಗೆ ಗೌರವ ನೀಡಬೇಕು. ಕಾನೂನು ಪಾಲನೆ ಕಟ್ಟುನಿಟ್ಟಾಗಿ ಮಾಡಬೇಕು. ಅದರಲ್ಲೂ ವಾಹನ ಚಾಲನೆ ಸಂದರ್ಭದಲ್ಲಿ ಪಾಲಿಸಬೇಕಾದ ನಿಯಮಗಳನ್ನು ಅನುಸರಿಸಬೇಕು. ಪಂಚಪರಿವರ್ತನೆಗೆ ಎಲ್ಲರೂ ಗಮನ ನೀಡಬೇಕಿದೆ ಎಂದರು.
ಮುಂದಿನ ದಿನಗಳಲ್ಲಿ ಪ್ರತಿಯೊಂದು ಪ್ರಾಂತದ ಎಲ್ಲಾ ಮಂಡಲದಲ್ಲೂ ಹಿಂದು ಸಮಾವೇಶ ನಡೆಸಬೇಕು. ಜಿಲ್ಲಾ ಪ್ರಮುಖರನ್ನು ಸೇರಿಸಿ ಕಾರ್ಯಕ್ರಮ ಮಾಡಬೇಕಿದೆ. ತಾಲ್ಲೂಕು ಮಟ್ಟದಲ್ಲಿಯೂ ಜಾಗೃತಿ ಕಾರ್ಯಕ್ರಮ ಮಾಡಬೇಕಿದೆ ಎಂದರು.
ಸಂಘಕ್ಕೆ ನೂರು ವರ್ಷ ತುಂಬಿ ನೂರ ಒಂದನೆ ವರ್ಷಕ್ಕೆ ಕಾಲಿಟ್ಟಿದೆ. ಅನೇಕರು ನೂರು ವರ್ಷದಲ್ಲಿ ಸಂಘ ಏನು ಮಾಡಿದೆ ಎಂದು ಕೇಳುವವರಿರೆ. ಇಂದು ಹಿಂದು ಸಮಾಜ ಜಾಗೃತವಾಗಿದೆ. ಹಿಂದು ಎಂದು ಹೇಳಿಕೊಳ್ಳುಟಿ ಪ್ರತಿಯೊಬ್ಬರೂ ಹೆಮ್ಮೆ ಪಡುತ್ತಾರೆ. ವಿಶ್ವಾಸ, ನಂಬಿಕೆಯನ್ನು ಹೆಚ್ಚಿಸುವಲ್ಲಿ ಸಂಘ ಕೆಲಸ ಮಾಡಿದೆ. ದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಶಾಖೆಗಳು ನಡೆಯುತ್ತಿವೆ ಎಂದರು.ದೇಶಕ್ಕೆ ಇಬ್ಬರು ಪ್ರಧಾನ ಮಂತ್ರಿಗಳನ್ನು ನೀಡಿದೆ. ರಾಷ್ಟçಪತಿ, ಉಪ ರಾಷ್ಟçಪತಿಗಳನ್ನು ನೀಡಿದೆ. ವನವಾಸಿಗಳನ್ನು ಸಂಘಟಿಸಿ ಅವರ ಏಳಿಗೆಗೆ ಶ್ರಮಿಸುತ್ತಿದೆ. ವಿಕಲಚೇತನರಿಗೆ ಬೇಕಾದ ಸೌಲಭ್ಯಗಳನ್ನು ಕೊಡುತ್ತಿದೆ. ಹೀಗೆ ಅನೇಕ ಸ್ತರದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಸಂಘದ ಸಾಧನೆ ಎಂದರು.
ಹಿಂದು ಸಂಘಟಿತನಾಗಬಲ್ಲ. ಒಂದು ವಿಚಾರಕ್ಕಾಗಿ ಕೆಲಸ ಮಾಡಬಲ್ಲ ಎಂಬುದನ್ನು ತೋರಿಸಲಾಗಿದೆ. ಸಂಘ ನೂರು ವರ್ಷದಲ್ಲಿ ಎರಡಾಗಿಲ್ಲ. ಸ್ವಯಂ ಸೇವಕರು ದೇಶ ಮೊದಲು ಎಂಬ ನಿಸ್ವಾರ್ಥ ಭಾವನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆಪತ್ತು, ವಿಪತ್ತು, ಯುದ್ಧ ಬಂದಾಗ ಸ್ವಯಂ ಸೇವಕರು ಕೆಲಸ ಮಾಡಿದ್ದಾರೆ. ನಗರ, ಗ್ರಾಮ, ಗುಡ್ಡಗಾಡು ಪ್ರದೇಶದಲ್ಲಿಯೂ ಕೂಡ ಗಣವೇಷ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದರು.
ವೇದಿಕೆಯಲ್ಲಿ ಶಿವಮೊಗ್ಗ ವಿಭಾಗ ಸಂಘಚಾಲಕ ದಿನೇಶ್ ಭಾರತೀಪುರ, ಜಿ ಸಂಘಚಾಲಕ ಬಿ.ಎ. ರಂಗನಾಥ್, ನಗರ ಸಂಘಚಾಲಕ ಲೋಕೇಶ್ವರ ರಾವ್ ಕಾಳೆ, ಪ್ರಾಂತ ಘೋಷ್ ಪ್ರಮುಖ ಗಿರೀಶ್, ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಟ್ಟಾಭಿರಾಮ, ವಿಭಾಗ ಕಾರ್ಯವಾಹ ಗಿರೀಶ್ ಕಾರಂತ್, ವಿಭಾಗ ಸಹ ಕಾರ್ಯವಾಹ ಮಧುಕರ, ವಿಭಾಗ ಪ್ರಚಾರಕ ಭರತ್ ರಾಜ್, ಜಿಲ್ಲಾ ಕಾರ್ಯವಾಹ ಚೇತನ, ಜಿಲ್ಲಾ ಪ್ರಚಾರಕ ವೀರೇಶ್, ನಗರ ಕಾರ್ಯವಾಹ ವರುಣ್, ನಗರ ಸಹ ಕಾರ್ಯವಾಹ ಕಿರಣ್ ಕಾಂಬ್ಳೆ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post