No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅರಳಿಸುವ ಸಾಹಿತ್ಯಕ್ಕೆ ಮನಸ್ಸಿನಲ್ಲಿ ಆಯಸ್ಸು ಅಧಿಕ: ಎಂ.ಎನ್. ಸುಂದರರಾಜ್

ಡಾ.ವಿನಯ ಶ್ರೀನಿವಾಸ್ ವಿರಚಿತ ನಿನ್ನೆ ನಿನ್ನೆಗೆ, ಇಂದು ಇಂದಿಗೆ ಪುಸ್ತಕ ಲೋಕಾರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 26, 2024
in ಶಿವಮೊಗ್ಗ
0
ಅರಳಿಸುವ ಸಾಹಿತ್ಯಕ್ಕೆ ಮನಸ್ಸಿನಲ್ಲಿ ಆಯಸ್ಸು ಅಧಿಕ: ಎಂ.ಎನ್. ಸುಂದರರಾಜ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವ್ಯಕ್ತಿತ್ವವನ್ನು ಅರಳಿಸುವ ಸಾಹಿತ್ಯಗಳಿಗೆ ಓದುಗರ ಮನಸ್ಸಿನಲ್ಲಿ ಆಯಸ್ಸು ಅಧಿಕವಾಗಿರುತ್ತದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್. ಸುಂದರರಾಜ್ ಅಭಿಪ್ರಾಯಪಟ್ಟರು.

ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನ Subbaiah Medial College ಕಾರ್ಯನಿರ್ವಾಹಕ ನಿರ್ದೇಶಕಿ, ವೈದ್ಯ ಸಾಹಿತಿ ಡಾ. ವಿನಯ ಶ್ರೀನಿವಾಸ್ Dr. Vinaya Shrinivas ಅವರು ಬರೆದಿರುವ `ನಿನ್ನೆ ನಿನ್ನೆಗೆ, ಇಂದು ಇಂದಿಗೆ ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಸಾಹಿತ್ಯದಲ್ಲಿ ಎರಡು ಪ್ರಕಾರಗಳಿವೆ. ಅರಳಿಸುವ ಸಾಹಿತ್ಯ ಹಾಗೂ ಕೆರಳಿಸುವ ಸಾಹಿತ್ಯ. ಅರಳಿಸುವ ಸಾಹಿತ್ಯ ಎಂದರೆ ಒಂದು ರೀತಿಯ ಜೀವನದ ಮಾರ್ಗದರ್ಶಿಯಂತೆ. ಉತ್ತಮ ಬರವಣಿಗೆ, ಸಾಹಿತ್ಯ, ಚಿಂತನೆಯೊಂದಿಗೆ ಸಕಾರಾತ್ಮಕ ಆಲೋಚನೆಗಳನ್ನು ಮನದಲ್ಲಿ ಹುಟ್ಟಹಾಕುವುದು ಅರಳಿಸುವ ಸಾಹಿತ್ಯ ಎಂದರು.

ಇನ್ನು, ಭಯಾನಕ ಕಥೆ, ಕೆಟ್ಟ ವಿಚಾರ ಹಾಗೂ ಚಿಂತನೆಗಳನ್ನು ಮನದಲ್ಲಿ ಹುಟ್ಟುಹಾಕುವುದೇ ಕೆರಳಿಸುವ ಸಾಹಿತ್ಯ. ಅರಳಿಸುವ ಸಾಹಿತ್ಯ ಜೀವನದ ಮಾರ್ಗದರ್ಶಿಯಾಗಿದ್ದು, ಓದುಗರ ಅಥವಾ ಸಾಹಿತ್ಯಾಸಕ್ತರ ಮನದಲ್ಲಿ ದೀರ್ಘಕಾಲ ಉಳಿದುಕೊಳ್ಳುತ್ತದೆ. ಇದಕ್ಕೆ ಆಯಸ್ಸು ಹೆಚ್ಚು. ಆದರೆ, ಕೆರಳಿಸುವ ಸಾಹಿತ್ಯದ ಆಯಸ್ಸು ಅತ್ಯಂತ ಕಡಿಮೆ ಎಂದರು.

ಅರಳಿಸುವ ಸಾಹಿತ್ಯದ ಪ್ರಾಕಾರಕ್ಕೆ ಹೊಸ ಸೇರ್ಪಡೆ ಇಂದು ಬಿಡುಗಡೆಯಾದ `ನಿನ್ನೆ ನಿನ್ನೆಗೆ, ಇಂದು ಇಂದಿಗೆ’ ಪುಸ್ತಕ ಎಂದು ಸಂತಸ ವ್ಯಕ್ತಪಡಿಸಿದರು.
Kalahamsa Infotech private limitedಸಾಮಾನ್ಯವಾಗಿ ನಾವೆಲ್ಲಾ ಬರೆಯುವುದು ಓದಿ, ಅಧ್ಯಯನ ಮಾಡಿದ ನಂತರದ ಸಾಹಿತ್ಯ. ಆದರೆ, ವೈದ್ಯರು ತಮ್ಮ ಅನುಭವವನ್ನು ಅಕ್ಷರ ರೂಪಕ್ಕೆ ಇಳಿಸಿ ಸಾಹಿತ್ಯ ರಚಿಸುತ್ತಾರೆ. ಇಂತಹ ಸಾಹಿತ್ಯ ಹೆಚ್ಚು ಕಾಲ ಮನದಲ್ಲಿ ಉಳಿಯುತ್ತದೆ ಎಂದರು.

Also read: ಆಸ್ಟ್ರೇಲಿಯಾ: ನೀರಿನಲ್ಲಿ ಮುಳುಗಿ ನಾಲ್ವರು ಭಾರತೀಯರು ಸಾವು

ಈ ಪುಸ್ತಕದಲ್ಲಿನ 44 ಲೇಖನಗಳು ಲೇಖಕರ ಅನುಭವದ್ದು. ಲೇಖಕರ ಜೀವನದಲ್ಲಿ ಅವರ ಪೋಷಕರು, ಶಿಕ್ಷಕರು ಹಾಗೂ ಹಿರಿಯರು ತಿದ್ದಿ ತೀಡಿದ್ದಾರೆ. ಇಂತಹ ಅನುಭವವನ್ನು ಅತ್ಯಂತ ಸರಳ ಹಾಗೂ ಸುಂದರವಾಗಿ ಡಾ.ವಿನಯ ಶ್ರೀನಿವಾಸ್ ಅವರು ಅಕ್ಷರ ರೂಪಕ್ಕೆ ಇಳಿಸಿದ್ದಾರೆ ಎಂದರು.
ಸಮಯ ಪರಿಪಾಲನೆ ಮುಖ್ಯ
ಯುವಕರು ಹಾಗೂ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಮಯ ಪರಿಪಾಲನೆ ಹಾಗೂ ಕರ್ತವ್ಯ ನಿಷ್ಠಯನ್ನು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡಬೇಕಾದರೆ ಇವುಗಳನ್ನು ಜೀವನದಲ್ಲಿಯೇ ಮೈಗೂಡಿಸಿಕೊಳ್ಳಬೇಕು. ಭಾರತ ರತ್ನ ಸರ್.ಎಂ. ವಿಶ್ವೇಶ್ವರಯ್ಯ, ಜನರಲ್ ಕಾರ್ಯಪ್ಪ ಅವರಂತಹ ಸಾಧಕರ ಜೀವನಶೈಲಿ ವಿದ್ಯಾರ್ಥಿಗಳಿಗೆ ಆದರ್ಶಪ್ರಾಯರಾಗಿದ್ದಾರೆ ಎಂದರು.

ಡಾ. ವಿನಯ ಶ್ರೀನಿವಾಸ್ ಅವರ ಈ ಪುಸ್ತಕನ್ನು ಎರಡು ಬಾರಿ ಓದಿದ್ದೇನೆ. ಮತ್ತೆ ಮತ್ತೆ ಓದಬೇಕು ಎನಿಸುವ ಸಾಹಿತ್ಯ ಇದಾಗಿದ್ದು, ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಅಂಶ ಇದರಲ್ಲಿವೆ ಎಂದರು.

ಪೋಷಕರನ್ನು ವೃದ್ಧಾಶ್ರಮಕ್ಕೆ ಕಳುಹಿಸುವ ಮನೋಭಾವ ಬದಲಾಗಬೇಕು. ಹಿರಿಯರಿಲ್ಲದ ಮನೆ ಮೊಸರನ್ನವಿಲ್ಲದ ಊಟದಂತೆ ಎಂಬಂತೆ ಪ್ರತಿ ಮನೆಯಲ್ಲೂ ಹಿರಿಯರು ಇರಬೇಕು, ಅವರನ್ನು ಗೌರವಿಸಬೇಕು. ಈ ವಿಚಾರವನ್ನು ಈ ಪುಸ್ತಕದಲ್ಲಿ ಅತ್ಯಂತ ವಿಷದವಾಗಿ ತಿಳಿಸಿದ್ದು ತಿಳಿಯಬೇಕಾದ ವಿಚಾರವಿದೆ ಎಂದರು.

ಲೇಖಕಿ ಡಾ. ವಿನಯ ಶ್ರೀನಿವಾಸ್ ಮಾತನಾಡಿ, ಅಂಬೆಗಾಲಿಡುತ್ತಾ ಆರಂಭವಾದ ನನ್ನ ಬರಹ ಈಗ 3 ಪುಸ್ತಕಗಳನ್ನು ಬರೆದು, ಓದುಗರಿಗೆ ನೀಡುವ ಹಂತಕ್ಕೆ ಬೆಳೆಸಿದೆ ಎಂದು ಸಂತಸ ವ್ಯಕ್ತಪಡಿಸಿದರು.
ನನ್ನ ವೃತ್ತಿ ಜೀವನದಲ್ಲಿ ಕಂಡ, ಸಾಮಾನ್ಯ ಜನರಲ್ಲಿ ಕಂಡ ವಿಚಾರಗಳೇ ನನ್ನ ಬರಹಕ್ಕೆ ಪೂರಕವಾಗಿದೆ. ನಾನು ಕಲಿತುಕೊಂಡ ವಿಚಾರಗಳನ್ನು ಅಕ್ಷರ ರೂಪಕ್ಕೆ ಇಳಿಸಿದ್ದೇನೆ. ಇತ್ತೀಚಿನ ದಿನಗಳಲ್ಲಿ ಹೆಚ್ಚು ಬರಹಗಾರರ ಒಡನಾಟ ಹೆಚ್ಚಾದ ನಂತರ ನನ್ನ ಬರಹಗಳನ್ನು ಪುಸ್ತಕ ರೂಪದಲ್ಲಿ ಹೊರತರುವ ಚಿಂತನೆ ಮಾಡಿ, ಅದು ಇಂದು ಸಾಕಾರಗೊಂಡಿದೆ ಎಂದರು.

ಸುಬ್ಬಯ್ಯ ವೈದ್ಯಕೀಯ ಕಾಲೇಜು ಹಾಗೂ ಸುಬ್ಬಯ್ಯ ಲಿಟರರಿ ಕ್ಲಬ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವೈದ್ಯಕೀಯ ಕಾಲೇಜು ಪ್ರಾಂಶುಪಾಲರಾದ ಡಾ.ಸಿ.ಎಂ. ಸಿದ್ದಲಿಂಗಪ್ಪ, ದಂತ ವೈದ್ಯಕೀಯ ಕಾಲೇಜು ಪ್ರಾಂಶುಪಾಲರಾದ ಡಾ.ಬಿ.ಎಸ್. ಸುರೇಶ್, ನರ್ಸಿಂಗ್ ಕಾಲೇಜು ಪ್ರಾಂಶುಪಾಲರಾದ ಡಾ.ವನಮಾಲ ಸತೀಶ್, ಎಂಎಸ್ ಡಾ. ವಿನಾಯಕ್, ಡೀನ್ ನಂದಕಿಶೋರ್ ಲಾಹೋಟೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Dr. Vinaya ShrinivasKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSubbaiah Medial Collegeಡಾ. ವಿನಯ ಶ್ರೀನಿವಾಸ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜು
Share197Tweet123Send
Previous Post

ಆಸ್ಟ್ರೇಲಿಯಾ: ನೀರಿನಲ್ಲಿ ಮುಳುಗಿ ನಾಲ್ವರು ಭಾರತೀಯರು ಸಾವು

Next Post

ಇಂಡಿಯಾ ಒಕ್ಕೂಟ ಛಿದ್ರವಾಗಿ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ: ಈಶ್ವರಪ್ಪ ವಿಶ್ವಾಸ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಂಡಿಯಾ ಒಕ್ಕೂಟ ಛಿದ್ರವಾಗಿ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ: ಈಶ್ವರಪ್ಪ ವಿಶ್ವಾಸ

ಇಂಡಿಯಾ ಒಕ್ಕೂಟ ಛಿದ್ರವಾಗಿ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ: ಈಶ್ವರಪ್ಪ ವಿಶ್ವಾಸ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL