ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಇಲ್ಲಿನ ಧರ್ಮ, ಸಂಸ್ಕೃತಿ, ಸಂಪ್ರದಾಯ, ಭಾಷೆಗಳು ಪ್ರದೇಶದಿಂದ ಪ್ರದೇಶಕ್ಕೆ ವಿಭಿನ್ನವಾಗಿದೆ. ವಿವಿಧತೆಯಲ್ಲಿ ಏಕತೆ, ಒಗ್ಗಟ್ಟನ್ನು ಕಾಪಾಡಿಕೊಂಡು ಹೋಗುವುದು ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಸಮಾಜ ವಿಜ್ಞಾನ ವಿಭಾಗದ ಶಿಕ್ಷಕ ಧರ್ಮಪ್ರಭು ಎಂದು ತಿಳಿಸಿದರು.
ಪಿಇಎಸ್ ಪಬ್ಲಿಕ್ ಶಾಲಾ ಆವರಣದಲ್ಲಿ ನಡೆದ ಸರ್ದಾರ್ ವಲ್ಲಭಬಾಯಿ ಪಟೇಲರ 148 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ದಾರ್ ಪಟೇಲರು ಏಕತೆಗೆ ಯಾವ ರೀತಿಯ ಕೊಡುಗೆ ನೀಡಿದ್ದಾರೆ ಎಂಬುದನ್ನು ಇಂದಿನ ಜನಾಂಗಕ್ಕೆ ಅರಿವು ಮೂಡಿಸುವ ಉದ್ದೇಶದಿಂದ ರಾಷ್ಟ್ರೀಯ ಏಕತಾ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಟ್ಟರು.
10ನೇ ತರಗತಿ ವಿದ್ಯಾರ್ಥಿನಿ ನಂದಿತಾ ಪಟೇಲ್ ಮಾತನಾಡಿ, ಭಾರತದ ಏಕತೆಗಾಗಿ ಶ್ರಮಿಸಿದವರು. ಸ್ವಾತಂತ್ರ್ಯ ಸಿಕ್ಕಿದ ಮೇಲು ಕೆಲವೊಂದು ಭೂಪ್ರದೇಶಗಳು ಪರಕೀಯರ ವಶದಲ್ಲಿದ್ದವು. ಇದನ್ನು ವಶಪಡಿಸಿಕೊಂಡು ಭವ್ಯ ಭಾರತ ನಿರ್ಮಾಣಕ್ಕೆ ಕಾರಣರಾದವರು ಎಂದು ಪಟೇಲ್ ಅವರ ವ್ಯಕ್ತಿತ್ವ ಹಾಗೂ ಸಾಧನೆಯನ್ನು ಕೊಂಡಾಡಿದರು.
Also read: ರಾಜ್ಯಮಟ್ಟದ ವೇದಗಣಿತ ಹಾಗೂ ಅಬಾಕಸ್ ಸ್ಪರ್ಧೆ: 26 ಮಕ್ಕಳಿಗೆ ಬಹುಮಾನ
ಸಮಾಜ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಂಜಪ್ಪ ರಾಷ್ಟ್ರೀಯ ಏಕತಾ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶಾಲಾ ಪ್ರಾಂಶುಪಾಲರು, ಸಂಯೋಜಕರು, ಶಿಕ್ಷಕ ವೃಂದದವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ರಾಷ್ಟ್ರೀಯ ಏಕತಾ ದಿನಾಚರಣೆಯ ಪ್ರಯುಕ್ತ ರಾಷ್ಟ್ರೀಯ ಏಕತಾ ಓಟವನ್ನು ಆಯೋಜಿಸಲಾಗಿತ್ತು. ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post