ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿಪ್ರ ಸ್ನೇಹ ಬಳಗ (40ಕ್ಕೂ ಹೆಚ್ಚು ಬ್ರಾಹ್ಮಣ ಸಂಘ-ಸಂಸ್ಥೆಗಳ ಒಕ್ಕೂಟ)ವತಿಯಿಂದ ಮಾ.9ರಂದು ಸಂಜೆ 6.30ಕ್ಕೆ ಗಾಯಿತ್ರಿ ಮಾಂಗಲ್ಯ ಮಂದಿರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ B Y Raghavendra ಅವರನ್ನು ಸನ್ಮಾನಿಸಲಾಗುವುದು ಎಂದು ಜಿಲ್ಲಾ ಬ್ರಾಹ್ಮಣ ಸಮಾಜದ ಅಧ್ಯಕ್ಷ ನಟರಾಜ್ ಭಾಗವತ್ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿ.ಎಸ್.ಯಡಿಯೂರಪ್ಪ B S Yadiyurappa ಮತ್ತು ಬಿ.ವೈ.ರಾಘವೇಂದ್ರ ಅವರು ಈ ಜಿಲ್ಲೆಯ ಅಭಿವೃದ್ಧಿ ಹರಿಕಾರರಾಗಿದ್ದಾರೆ. ಹಾಗಾಗಿ ಇಬ್ಬರನ್ನೂ ಕೂಡ ವಿಪ್ರ ಸ್ನೇಹ ಬಳಗದ ವತಿಯಿಂದ ಸನ್ಮಾನಿಸಲಾಗುತ್ತದೆ ಎಂದರು.
ಅಭಿನಂದನಾ ಸಮಾರಂಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅಖಿಲಾ ಕರ್ನಾಟಕ ಬ್ರಾಹ್ಮಣ ಮಹಾಸಭದ ಅಧ್ಯಕ್ಷ ಅಶೋಕ್ ಹಾರ್ನಹಳ್ಳಿ, ಶಾಸಕ ಎಸ್.ಎನ್. ಚನ್ನಬಸಪ್ಪ, ಶಿಕ್ಷಣ ತಜ್ಞ ಎ.ಜೆ. ರಾಮಚಂದ್ರ ಮುಂತಾದವರು ಉಪಸ್ಥಿತರಿರುವರು ಎಂದರು.
Also read: ಈ ಚುನಾವಣೆ ಯುವಜನರ ಉಜ್ವಲ ಭವಿಷ್ಯ, ಭವ್ಯ ಭಾರತದ ನಿರ್ಮಾಣಕ್ಕಾಗಿ | ಅಮಿತ್ ಶಾ
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶ್ರೀನಾಥ್ ನಗರಗದ್ದೆ, ಎಂ.ಶಂಕರ್, ವೆಂಕಟೇಶರಾವ್, ಸುಬ್ರಹ್ಮಣ್ಯ ಭಟ್ಟ, ನಾಗೇಶ್, ಬಿ.ಆರ್.ಮಧುಸೂದನ್, ಸುರೇಖಾ ಮುರುಳೀಧರ್, ಎ.ಜೆ. ರಾಮಚಂದ್ರ, ಎಸ್.ಜಿ. ಆನಂದ್ ಮುಂತಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post