ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಸೋಗಾನೆಯಲ್ಲಿರುವ ಜೈಲಿನ ಬಳಿ ಆಟೋರಿಕ್ಷಾದಲ್ಲಿ ಬಾಳೆಗೊನೆಗಳಲ್ಲಿ ಗಾಂಜಾ #Marijuana ತುಂಬಿ ತಂದು ಗೇಟಿನ ಬಳಿ ಇಟ್ಟು ಹೋದ ಘಟನೆ ಬುಧವಾರ ನಡೆದಿದೆ.
ಮದ್ಯಾಹ್ನ 02:15 ಗಂಟೆ ಸಮಯಕ್ಕೆ ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಆಟೋದಲ್ಲಿ 05 ಬಾಳೆಗೊನೆಗಳನ್ನು ಆಟೋ ಚಾಲಕನು ಕಾರಾಗೃಹದ ಮುಂಭಾಗಕ್ಕೆ ತಂದು ಕ್ಯಾಂಟೀನ್ ರವರ ಸೂಚನೆ ಮೇರೆಗೆ ತಂದಿರುವುದಾಗಿ ತಿಳಿಸಿ ಗೇಟಿನ ಹತ್ತಿರ ಇಟ್ಟು ತೆರಳಿದ್ದಾನೆ.

ಈ ಬಗ್ಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ರಂಗನಾಥ್ ರವರ ದೂರಿನ ಮೇರೆಗೆ ಪ್ರಕರಣ ದಾಖಲಾಗಿದ್ದು, 123 ಗ್ರಾಂ ಗಾಂಜಾ ಮತ್ತು ಒಟ್ಟು 40 ಸಿಗರೇಟ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ರಂಗನಾಥ್ (ಮುಖ್ಯ ಅಧೀಕ್ಷಕ ಕೇಂದ್ರ ಕಾರಾಗೃಹ) ರವರ ದೂರಿನ ಮೇರೆಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಈ ಪ್ರಕರಣದಲ್ಲಿ 170 ಗ್ರಾಂ ಮಾದಕ ವಸ್ತು ಗಾಂಜಾವನ್ನು ವಶಪಡಿಸಿಕೊಂಡು ಆರೋಪಿ ಸಾತ್ವಿಕ್ ನನ್ನು ಬಂಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post