ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಿಶ್ಚಿತ ಗೌರವ ಧನವು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರಿದ್ದಾರೆ. ಹಗಲಿರುಳು ದುಡಿಯುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದರು. ಆಗ ವಿಶ್ವ ಆರೋಗ್ಯ ಸಂಸ್ಥೆಯಿಂದ ಹಿಡಿದು ಎಲ್ಲರು ಶ್ಲಾಘನೆ ಮಾಡಿದ್ದರು. ಆದರೆ ಈಗ ನಮ್ಮನ್ನು ಕೇಳುವವರೇ ಇಲ್ಲವಾಗಿದೆ ಎಂದರು.
Also read: ಬಿಜೆಪಿ ಪಕ್ಷ ಸಂಘಟನೆಗೆ ಶಕ್ತಿ ಕಂಡುಕೊಳ್ಳಲು ಡಿ.ಎಸ್. ಅರುಣ್ ಕರೆ
ಆಶಾ ಕಾರ್ಯಕರ್ತೆಯರು ಹಲವು ವರ್ಷಗಳಿಂದ ಕೆಲಸ ಮಾಡುತ್ತ ಬಂದಿದ್ದಾರೆ. ಮಾಡಿದ ಕೆಲಸಕ್ಕೆ ಸರಿಯಾದ ವೇತನ ಸಿಗುತ್ತಿಲ್ಲ, ಹಲವು ಬಾರಿ ಮನವಿ ಕೂಡ ಮಾಡಿದ್ದೇವೆ ಎಂದರು.
ಈಗಿರುವ ಗೌರವ ಧನವನ್ನು 15 ಸಾವಿರಕ್ಕೆ ಹೆಚ್ಚಿಸಬೇಕು. 2 ಸಾವಿರ ರೂ. ಪ್ರೋತ್ಸಾಹ ಧನ ನೀಡಬೇಕು. ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಬೇಕು. ಪಶ್ಚಿಮ ಬಂಗಾಳದಲ್ಲಿ ಇರುವಂತೆ ನಿವೃತ್ತಿ ಆದವರಿಗೆ 5 ಲಕ್ಷ ರೂ. ನೀಡಬೇಕು. ಆರೋಗ್ಯ ಸೌಲಭ್ಯ ಒದಗಿಸಬೇಕು. ಉಚಿತ ಚಿಕಿತ್ಸೆ ನೀಡಬೇಕು. 2024ರ ಏಪ್ರಿಲ್ ನಿಂದ ಆಶಾ ಸುಗಮಕಾರರಿಗೆ 7,500 ಗೌರವಧನ ನೀಡಿ ಹಲವಾರು ಜಿಲ್ಲೆಗಳಲ್ಲಿ ಬಾಕಿ ಉಳಿದಿರುವ ಸುಗಮಕಾರರಿಗೆ ಗೌರವ ಧನ ನೀಡಬೇಕು. ಪಿ.ಎಫ್. ಗ್ಯಾಚ್ಯುಟಿ ಇಎಸ್ಐ ಸೌಲಭ್ಯಗಳನ್ನು ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ರಾಜೇಶ್ವರಿ, ಪ್ರಮುಖರಾದ ಸರಸ್ವತಿ, ಚಂದ್ರಕಲಾ, ರೇಣುಕಾ, ಪೂರ್ಣಿಮಾ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post