No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿಮಾನ ನಿಲ್ದಾಣ ಸಂತ್ರಸ್ತ ರೈತರಿಗೆ ಭೂಮಿ ನೀಡದಿದ್ದಲ್ಲಿ ಬೃಹತ್ ಹೋರಾಟ: ವೇದಾ ವಿಜಯಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2023
in ಶಿವಮೊಗ್ಗ
0
ವಿಮಾನ ನಿಲ್ದಾಣ ಸಂತ್ರಸ್ತ ರೈತರಿಗೆ ಭೂಮಿ ನೀಡದಿದ್ದಲ್ಲಿ ಬೃಹತ್ ಹೋರಾಟ: ವೇದಾ ವಿಜಯಕುಮಾರ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಫೆ. 5ರೊಳಗೆ ನಿವೇಶನ ನೀಡದಿದ್ದರೆ, ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತರ ಪರವಾಗಿ ಮಾತನಾಡಿ, ವಿಮಾನ ನಿಲ್ದಾಣಕ್ಕಾಗಿ ಸುಮಾರು 305 ಕ್ಕೂ ಹೆಚ್ಚು ರೈತರಿಗೆ ನಿವೇಶನ ಹಂಚಿಕೆಯಾಗಬೇಕಾಗಿದೆ. ಹಾಗೆಯೇ ವಿನಾಯಕ ನಗರದ 51 ಮಂದಿ ಬಗರ್ ಹುಕುಂ ಸಾಗುವಳಿದಾರರಿಗೆ ಸಾಗುವಳಿ ಚೀಟಿ ನೀಡಿ ಈಗ ಅದನ್ನು ವಜಾ ಮಾಡಲಾಗಿದೆ. ಇದರ ವಿರುದ್ಧ ಫೆ.5ರ ನಂತರ ವಿಮಾನ ನಿಲ್ದಾಣದ ಮುಂಭಾಗ ಸಂತ್ರಸ್ತ ರೈತರು, ರೈತ ಮುಖಂಡರು, ಮಾಜಿ ಸಭಾಪತಿ ಕಾಗೋಡು ತಿಮ್ಮಪ್ಪ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
2007 ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ವಿಮಾನ ನಿಲ್ದಾಣಕ್ಕಾಗಿ ಸೋಗಾನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಾರು ರೈತರ ಮನವೊಲಿಸಿ, ಸಂತ್ರಸ್ತರಿಗೆ ಉದ್ಯೋಗ, ನಿವೇಶನ ನೀಡುವುದಾಗಿ ತಿಳಿಸಿ ಭೂಮಿ ವಶಪಡಿಸಿಕೊಂಡಿದ್ದರು. ಈಗ 15 ವರ್ಷ ಕಳೆದರೂ ಕೂಡ ಯಾವುದೇ ಸಂತ್ರಸ್ತರ ನೆರವಿಗೆ ಬಂದಿಲ್ಲ. ನಿವೇಶನ ನೀಡಿಲ್ಲ. ಕೊಟ್ಟ ಮಾತನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
Also read: ವಿಐಎಸ್ಎಲ್ ಕಾರ್ಖಾನೆ ಸ್ಥಗಿತದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಏನು? ಇಲ್ಲಿದೆ ಮಾಹಿತಿ
ಗ್ರಾಮಾಂತರ ಶಾಸಕರು ಈ ಹಿಂದೆ ವಿಮಾನ ನಿಲ್ದಾಣದ ಮುಂಭಾಗದಲ್ಲಿ ಸಂತ್ರಸ್ತರು ಪ್ರತಿಭಟನೆ ಹಮ್ಮಿಕೊಂಡಿದ್ದಾಗ ಬಂದು 20 ದಿನಗಳೊಳಗೆ ನಿವೇಶನ ನೀಡುವುದಾಗಿ ಭರವಸೆ ಕೊಟ್ಟಿದ್ದರು. ಆದರೆ, ಅವರೂ ಕೂಡ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಭೂಮಿ ಕಳೆದುಕೊಂಡ 305 ರೈತರಿಗೆ ನಿವೇಶನ ಹಂಚಿಕೆ ಮಾಡಬೇಕು. ಸಾಗುವಳಿ ಚೀಟಿ ನೀಡಿರುವ ರೈತರಿಗೆ ಪಹಣಿ ಏರಿಸಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ ಎಂದರು.
ಪಿ.ಎಲ್.ಡಿ. ಬ್ಯಾಂಕ್ ಉಪಾಧ್ಯಕ್ಷ ಆರ್. ವಿಜಯಕುಮಾರ್(ದನಿ) ಮಾತನಾಡಿ, ನಾವು ಅಭಿವೃದ್ಧಿಯ ವಿರೋಧಿಗಳಲ್ಲ, ನಮ್ಮ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿರುವುದು ಹೆಮ್ಮೆಯ ವಿಷಯವೇ ಸರಿ. ಆದರೆ, ಇದಕ್ಕಾಗಿ ತ್ಯಾಗ ಮಾಡಿದ ರೈತರನ್ನು ಸರ್ಕಾರ ಮರೆಯಬಾರದು. ವಿಮಾನ ನಿಲ್ದಾಣ ಉದ್ಘಾಟನೆಗೆ ತಡೆಯೊಡ್ಡುವುದು ನಮ್ಮ ಉದ್ದೇಶವಲ್ಲ. ನಮಗೆ ಬರಬೇಕಾದ ಪರಿಹಾರವನ್ನು ಪಡೆದುಕೊಳ್ಳುವುದಷ್ಟೇ ಎಂದರು.

ರನ್ ವೇ ಗೆ ಜಾಗ ಕಡಿಮೆಯಾದಾಗ ಶಾಸಕರ ನೇತೃತ್ವದಲ್ಲಿ ಸಭೆ ನಡೆದು ಸುಮಾರು 24 ಎಕರೆ ಭೂಮಿಯನ್ನು 13 ಜನರಿಂದ ವಶಪಡಿಸಿಕೊಳ್ಳಲಾಯಿತು. ಆಗ ಎಕರೆಗೆ 40 ಲಕ್ಷ ರೂ. ಕೊಡುವುದಾಗಿ ಸರ್ಕಾರದ ಪರವಾಗಿ ಶಾಸಕರು ಭರವಸೆ ನೀಡಿದ್ದರು. ಅದರಂತೆ ರೈತರು ಭೂಮಿ ಬಿಟ್ಟು ಕೊಟ್ಟರು ಎಂದರು.
ಆದರೆ, ಮುಂದೆ ಆಗಿದ್ದೇ ಬೇರೆ. ಸರ್ಕಾರದಿಂದ ಸುಮಾರು 10 ಕೋಟಿ ರೂ. ಜಿಲ್ಲಾಧಿಕಾರಿಗಳ ಖಾತೆಗೆ ವರ್ಗಾವಣೆಯಾಗಿದ್ದು, ಈ ಸಂದರ್ಭದಲ್ಲಿ ಸರ್ಕಾರ ಉಪ ವಿಭಾಗಾಧಿಕಾರಿಗಳನ್ನು ಬಳಸಿಕೊಂಡು ಬಗರ್ ಹುಕುಂ ಜಮೀನು ನೀಡಿದ್ದೀರಿ. ನಿಮಗೆ ಪಹಣಿಯೆಲ್ಲ ತಪ್ಪಾಗಿ ಕೊಡಲಾಗಿದೆ. ಆದ್ದರಿಂದ ಪರಿಹಾರ ನೀಡಲು ಆಗುವುದಿಲ್ಲ ಎಂದು ಕ್ಯಾತೆ ತೆಗೆದಿದ್ದಾರೆ. ರೈತರಿಗೆ ಖಾತೆಯಾಗಿದ್ದರೂ, ಪಹಣಿ ಇದ್ದರೂ, ಅದರ ಮೇಲೆ ಸಾಲ ಪಡೆದಿದ್ದರೂ ಈ ರೀತಿ ರೈತರನ್ನು ವಂಚಿಸಿ ಈಗ ಅವರಿಗೆ ಪರಿಹಾರ ಕೊಡಲು ಆಗುವುದಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಅದಲ್ಲದೇ, 304 ಜನರಿಗೆ ನಿವೇಶನ ನೀಡುವ ಭರವಸೆ ಕೂಡ ಹಾಗೆಯೇ ಉಳಿದಿದೆ. ಗೃಹ ಮಂಡಳಿಯವರು 25 ಕೋಟಿ ರೂ. ಕಟ್ಟಿದರೆ ನಿಮಗೆಲ್ಲರಿಗೂ ನಿವೇಶನ ನೀಡುತ್ತೇವೆ ಎಂದು ಹೇಳುತ್ತಾರೆ. ಸರ್ಕಾರ ತಕ್ಷಣವೇ ಅವರಿಗೆ ಹಣ ನೀಡಿ ರೈತರಿಗೆ ನಿವೇಶನ ನೀಡಿ ಸೋಗಾನೆ ರೈತರನ್ನು ನೆಮ್ಮದಿಯಾಗಿರಲು ಬಿಡಬೇಕು. ಇಲ್ಲದಿದ್ದರೆ ಬೃಹತ್ ಹೋರಾಟ ಅನಿವಾರ್ಯ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂತ್ರಸ್ತರಾದ ರಂಗಪ್ಪ, ರಮೇಶ್, ಶಿವಕುಮಾರ್, ಗಣೇಶ್, ಬಸವರಾಜ್, ಸಿದ್ಧಯ್ಯ, ಅರುಣ್, ಅನಿಲ್, ಪುಟ್ಟರಾಜು, ಮಾರುತಿ, ಪೆರಿಸ್ವಾಮಿ, ಮಂಜಣ್ಣ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಐಎಸ್ಎಲ್ ಕಾರ್ಖಾನೆ ಸ್ಥಗಿತದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಏನು? ಇಲ್ಲಿದೆ ಮಾಹಿತಿ

Next Post

ಜ.22ರಂದು ಶಿವಮೊಗ್ಗ ಜಿಲ್ಲಾಮಟ್ಟದ ಎನ್‌ಪಿಎಸ್ ನೌಕರರ ಸಮಾವೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜ.22ರಂದು ಶಿವಮೊಗ್ಗ ಜಿಲ್ಲಾಮಟ್ಟದ ಎನ್‌ಪಿಎಸ್ ನೌಕರರ ಸಮಾವೇಶ

ಜ.22ರಂದು ಶಿವಮೊಗ್ಗ ಜಿಲ್ಲಾಮಟ್ಟದ ಎನ್‌ಪಿಎಸ್ ನೌಕರರ ಸಮಾವೇಶ

Leave a Reply Cancel reply

Your email address will not be published. Required fields are marked *

No Result
View All Result
66% of Indians Face Health & Wellness Scams: McAfee Report Raises Alarm
English Articles

66% of Indians Face Health & Wellness Scams: McAfee Report Raises Alarm

by ಕಲ್ಪ ನ್ಯೂಸ್
June 25, 2026
0

Kalpa Media House  |  New Delhi | A new report by McAfee has revealed a sharp rise in health and...

Read moreDetails
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL