Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ವಿಶ್ವಕಂಡ ಬಹುದೊಡ್ಡ ಶಿವಶರಣೆ ಅಕ್ಕಮಹಾದೇವಿ ಜೀವನ ಮೌಲ್ಯ ಆದರ್ಶವಾಗಲಿ | ಡಾ.ಸೋಮಶೇಖರ್

ಶಿಕಾರಿಪುರ | ಮೈತ್ರಾದೇವಿ ಯಡಿಯೂರಪ್ಪ ದತ್ತಿ ಕಾರ್ಯಕ್ರಮ

March 5, 2025
in Small Bytes, ಶಿಕಾರಿಪುರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ವಿಶ್ವ ಕಂಡ ಬಹುದೊಡ್ಡ ಶಿವಶರಣೆ ಬದುಕಿನ ಮೌಲ್ಯಗಳನ್ನು ಜೀವನದಲ್ಲಿ ಆದರ್ಶವಾಗಿಟ್ಟುಕೊಂಡು ಸಾಗಿದ ಮಹಾನ್ ಚಿಂತಕಿ ಅಕ್ಕಮಹಾದೇವಿ #Akkamahadevi ಅವರ ಜೀವನ ಮೌಲ್ಯಗಳು ಎಲ್ಲರಿಗೂ ಆದರ್ಶವಾಗಲಿ ಎಂದು ನಿವೃತ್ತ ಐಎಎಸ್ ಅಧಿಕಾರಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಬೆಂಗಳೂರು ಅಧ್ಯಕ್ಷರಾದ ಡಾ.ಸಿ. ಸೋಮಶೇಖರ್ ಕರೆ ನೀಡಿದರು.

ಮೈಸೂರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಶಿವಮೊಗ್ಗ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಶಿಕಾರಿಪುರ #Shikaripura ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು, ಶಿಕಾರಿಪುರ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಹಾಗೂ ಕುಮದ್ವತಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಶರಣೆ ಮೈತ್ರಾದೇವಿ ಬಿ.ಎಸ್. ಯಡಿಯೂರಪ್ಪ ದತ್ತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Also Read>> ಮಾರ್ಚ್ 6 | ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

ವಿಶ್ವ ಕಂಡ ಬಹುದೊಡ್ಡ ಶಿವಶರಣೆ ಬದುಕಿನ ಮೌಲ್ಯಗಳನ್ನು ಜೀವನದಲ್ಲಿ ಆದರ್ಶವಾಗಿಟ್ಟುಕೊಂಡು ಸಾಗಿದ ಮಹಾನ್ ಚಿಂತಕಿ ಅಕ್ಕಮಹಾದೇವಿ. 12ನೇ ಶತಮಾನದಲ್ಲಿ ಪುರುಷ ಸಮಾಜದ ಅಸಮಾನತೆಯ ವಿರುದ್ಧ ಜನಮಾನಸದಲ್ಲಿ ಆಂದೋಲನವನ್ನು ನಡೆಸಿದ ಅಕ್ಕ ಬದುಕಿದ ಜೀವನವೇ ಒಂದು ಮಹಾನ್ ಪವಾಡ ಎಂದು ಆಶಿಸಿದರು.
ಜೀವನದಲ್ಲಿ ದೈಹಿಕ ತೃಷೆಗಾಗಿ ವ್ಯಾಮೋಹಗೊಳ್ಳದೇ, ಜೀವನದ ಮೌಲ್ಯಗಳೊಂದಿಗೆ ಆದರ್ಶಗಳನ್ನು ಇಟ್ಟುಕೊಂಡು ಬೆಳೆದವರು ಅಕ್ಕ. ಪ್ರಕೃತಿಯೊಂದಿಗೆ ಅನುಸಂಧಾನವನ್ನು ಮಾಡಿಕೊಳ್ಳುತ್ತಾ, ತನ್ನ ವಚನದ ಮೂಲಕ ಅತ್ಯಂತ ಕೆಳಮಟ್ಟದ ಜನರ ಹೃದಯವನ್ನು ಮುಟ್ಟುವ ಕೆಲಸ ಮಾಡಿದಳು. ಸ್ಥಿತ ಸಂವೇದನೆಯನ್ನು ಮೊಟ್ಟಮೊದಲು 12ನೇ ಶತಮಾನದಲ್ಲಿ ಹುಟ್ಟು ಹಾಕಿದರೂ 21ನೇ ಶತಮಾನದಲ್ಲಿಂದು ಹೆಮ್ಮರವಾಗಿ ಬೆಳವಣಿಗೆಯಾಗಲು ನಾಂದಿ ಹಾಡಿದವರೇ ಅಕ್ಕಮಹಾದೇವಿ. ತನ್ನ ದೇಹದಿಂದ ಇತರರಿಗೆ ನೋವಾದೀತು ಎಂದು ತನ್ನ ದೇಹವನ್ನು ಕೇಶದಿಂದ ಮುಚ್ಚಿಕೊಳ್ಳುತ್ತಾ ಅನುಭವ ಮಂಟಪದತ್ತ ಸಾಗಿದ ಮಹಾನ್ ತ್ಯಾಗಿ ಐಹಿಕ ಸುಖ-ಬೋಗದಿಂದ ಮುಕ್ತಿಯಾಗಿ, ಚನ್ನಮಲ್ಲಿಕಾರ್ಜುನನೇ ಎನ್ನ ಪತಿ, ದೈವ ಎಂದು ಸಾರುತ್ತಾ ಕೊನೆಗೂ ಅದರಂತೆ ಬದುಕಿದ ವೈರಾಗಿ. ಅಕ್ಕ ಈ ಜಗತ್ತಿಗೆ ಒಂದು ಅಚ್ಚರಿ, ಅದ್ಭುತ, ಆದರ್ಶಗಳನ್ನು ಇಟ್ಟುಕೊಂಡು ನಡೆ-ನುಡಿಗಳಲ್ಲಿ ತಾನೇ ಮುಳುಗಿ ನಡೆದುಕೊಂಡವರು. ನಡೆ-ನುಡಿ, ತನು-ಮನ, ಭಾವ-ಮತಗಳಿಂದ ದೂರವಿದ್ದು ಪಂಚೇಅದ್ರೀಯಗಳ ನಿಗ್ರಹದೊಂದಿಗೆ ಶರಣ ಸತಿ ಲಿಂಗ ಪತಿ’ ಎಂಬ ಮಾತುಗಳಿಗೆ ಸಾಕ್ಷಿಯಾಗಿ ಬದುಕಿ ತೋರಿಸಿದ ಮಹಾನ್ ಚಿಂತಕಿ ಎಂದರು.

ತನು, ಮನ, ಭಾವ ಧ್ವನಿ, ಶೃತಿ ಶುದ್ಧಿಯಾಗಿ ಬದುಕಿದ ಅಕ್ಕ ಕೇವಲ ಕರ್ನಾಟಕಕ್ಕೆ ಸೀಮಿತವಲ್ಲ, ಪ್ರಪಂಚಕ್ಕೆ ಒಂದು ಹೆಣ್ಣಿಗಿರುವ ಸಮಾನ ಅವಕಾಶಗಳನ್ನು ಪ್ರಚುರಪಡಿಸಿದ ಮಹಾನ್ ಚಿಂತಕಿ. ತನ್ನ ಬದುಕನ್ನೇ ಒಂದು ದಾರಿದೀಪಯಾಗಿಸಿಕೊಂಡು ಬೆಳೆದು ಸಮಾಜಕ್ಕೆ ಆದರ್ಶ ಜೀವನಕ್ಕೆ ಮುನ್ನುಡಿ ಬರೆದವರು ಅಕ್ಕ ನಮ್ಮ ಶಿಕಾರಿಪುರದವಳು ಎಂದು ಹೇಳುವುದೇ ನಮಗೆ ಗರ್ವ, ಶಿಕಾರಿಪುರ ಇಂತಹ ಅನೇಕ ವಚನಕಾರರನ್ನು ಜಗತ್ತಿಗೆ ನೀಡಿ ಅನೇಕರ ಜೀವನಾದರ್ಶಗಳಿಗೆ ಮುನ್ನುಡಿ ಬರೆದದ್ದು ನಮ್ಮ ಶಿಕಾರಿಪುರದವರು, ಜೀವನದಲ್ಲಿ ಗಳಿಸಿದ ಸಂಪಾದನೆಯಲ್ಲಿ ಒಂದು ಭಾಗವನ್ನು ಸಮಾಜಕ್ಕೆ ನೀಡುವ ಮನೋಭಾವವನ್ನು ರೂಢಿಸಿಕೊಳ್ಳೋಣ ನಾವು ಮುಂದಿನ ದಿನಗಳಲ್ಲಿ ಇಂತಹ ಚಿಂತನೆಗಳತ್ತ ಆಲೋಚನೆ ಮಾಡೋಣ ಎಂದು ಆಶಿಸಿದರು.
ಬೆಂಗಳೂರು ದಿಶಾ ಸಮಿತಿ ಸದಸ್ಯರಾದ ಕೆ.ಎಸ್. ಗುರುಮೂರ್ತಿ, ಶಿಕಾರಿಪುರ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಪ್ರತಿನಿಧಿಗಳೂ ಆದ ಡಾ. ಜಿ.ಎಸ್. ಶಿವಕುಮಾರ್, ಮೈಸೂರು ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದ ಪ್ರಧಾನ ಕಾರ್ಯದರ್ಶಿಗಳಾದ ಸೋಮಶೇಖರ್ ಘಾಂಜಿ ಉಪಸ್ಥಿತರಿದ್ದರು.

Also Read>> ಮಾರ್ಷಲ್ ಆರ್ಟ್ಸ್ | ಪ್ರಣತಿಗೆ ರಾಷ್ಟ್ರಮಟ್ಟದ ಅತಿ ಕಿರಿಯ ವಯಸ್ಸಿನ ಪದಕ ವಿಜೇತೆ ಹೆಗ್ಗಳಿಕೆ

ಶಿವಮೊಗ್ಗ ವಚನ ಮಂಟಪ ಸಂಚಾಲಕರಾದ ಬಸವನಗೌಡ ಮಾಳಗಿ ಅವರು ದತ್ತಿ ದಾನಿಗಳ ಪರಿಚಯ ಮಾಡಿಕೊಟ್ಟರು. ಶರಣ ಸಾಹಿತ್ಯ ಪರಿಷತ್ ಶಿವಮೊಗ್ಗ ಅಧ್ಯಕ್ಷರಾದ ಎಚ್.ಎನ್. ಮಹಾರುದ್ರ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸುಷ್ಮಾ ದೀಕ್ಷಿತ್ ಮತ್ತು ತಂಡದವರಿAದ ವಚನ ನೃತ್ಯವನ್ನು ಏರ್ಪಡಿಸಲಾಗಿತ್ತು. ಪ್ರಶಿP್ಷÀಣಾರ್ಥಿಗಳಾದ ಎಸ್. ಕಲ್ಪನಾ, ರಕ್ಷಿತಾರು ಅಕ್ಕನ ವಚನಗಳನ್ನು ಹಾಡುವುದರೊಂದಿಗೆ ತಾತ್ಪರ್ಯವನ್ನು ಅರ್ಥೈಸಿದರು.

ಡಿ. ಪ್ರೇಕ್ಷಾ ಹಾಗೂ ತಂಡದವರು ವಚನ ಗಾಯನದ ಪ್ರಾರ್ಥನೆ ಮಾಡಿದರು. ಶರಣ ಸಾಹಿತ್ಯ ಪರಿಷತ್ ಶಿಕಾರಿಪುರ ಅಧ್ಯಕ್ಷ ಎಂ.ಕೆ. ಶಶಿಧರ ಸ್ವಾಮಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಿಷತ್ ನಿಕಟಪೂರ್ವ ಅಧ್ಯಕ್ಷರಾದ ಸುಭಾಷ್ ಚಂದ್ರ ಸ್ಥಾನಿಕ್ ವಂದನಾರ್ಪಣೆ ಮಾಡಿದರು. ಕುಮದ್ವತಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಆರ್. ಕೋಟೋಜಿರಾವ್ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada News Websitekumadvathi pu college shikaripuraLatest News KannadaLocal NewsMalnad NewsShikaripuraShimogaShivamoggaShivamogga Newsಅಕ್ಕಮಹಾದೇವಿಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಶರಣ ಸಾಹಿತ್ಯ ಪರಿಷತ್ತುಶಿಕಾರಿಪುರ
Previous Post

ಮಾರ್ಚ್ 6 | ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜೆಡಿಎಸ್ ಬೃಹತ್ ಪ್ರತಿಭಟನೆ

Next Post

ಶಿವಮೊಗ್ಗ | ಮಾರ್ಚ್ 7 | ಬ್ರಾಹ್ಮಿನ್ ಆರ್ಗನೈಸೇಷನ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ಉದ್ಘಾಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಮಾರ್ಚ್ 7 | ಬ್ರಾಹ್ಮಿನ್ ಆರ್ಗನೈಸೇಷನ್ ಆಫ್ ಇಂಡಿಯಾ ಜಿಲ್ಲಾ ಸಮಿತಿ ಉದ್ಘಾಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!