No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಕ್ಕುಚ್ಯುತಿಗೆ ಮುಂದಾದ ಸಿದ್ಧರಾಮಯ್ಯಗೆ ಗೌರವಯುತವಾಗಿಯೇ ಕುಟುಕಿದ ಸಚಿವ ಈಶ್ವರಪ್ಪ

ಕಾಂಗ್ರೆಸ್ ಸರ್ಕಾರಕ್ಕೆ ಒಂದು ಸಂವಿಧಾನ, ಬಿಜೆಪಿ ಸರ್ಕಾರಕ್ಕೇ ಬೇರೆ ಸಂವಿಧಾನವೇ? ಕೆಎಸ್‌ಈ ಚಾಟಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 22, 2021
in ಶಿವಮೊಗ್ಗ
0
ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

File Photo

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ : ಸಭೆ ನಡೆಸಲು ಅವಕಾಶ ನೀಡಲಿಲ್ಲ ಎಂದು ಹಕ್ಕುಚ್ಯುತಿ ಮಂಡಿಸುವುದಾಗಿ ತಿಳಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಿದ್ದರಾಮಯ್ಯನವರೇ ಕಾಂಗ್ರೆಸ್ ಸರ್ಕಾರಕ್ಕೊಂದು ಸಂವಿಧಾನ, ಭಾರತೀಯ ಜನತಾ ಪಕ್ಷಕ್ಕೊಂದು ಸಂವಿಧಾನವೇ ? ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪ್ರಶ್ನಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾನು ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕನಾಗಿದ್ದಾಗ ರಾಜ್ಯದಲ್ಲಿದ್ದ ಬರಗಾಲ ಪರಿಸ್ಥಿತಿಯನ್ನು ಚರ್ಚಿಸಲು ಎಲ್ಲ ಜಿಲ್ಲೆಗಳ ಪ್ರವಾಸ ಮಾಡಿ, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದೆ. ನನಗೆ ಆಗ ಎಲ್ಲಾ ಜಿಲ್ಲಾಧಿಕಾರಿಗಳು ಹೇಳಿದ್ದು ಒಂದೇ ಉತ್ತರ. ನೀವು ವಿರೋಧ ಪಕ್ಷದ ನಾಯಕರಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲು ಸರ್ಕಾರದಿಂದ ಅನುಮತಿ ಇಲ್ಲ. ಈ ಕುರಿತು ಸರ್ಕಾರದ ಆದೇಶವಿದೆ ಎಂದು ತಿಳಿಸಿದ್ದರು.

ಆಗ ತಾವೇ ಈ ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಸಮಯ. ಬರಗಾಲದ ಪರಿಸ್ಥಿತಿಯನ್ನು ನಿಭಾಯಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅನುಮತಿ ನೀಡಬೇಕೆಂದು ನಾನು ನಿಮಗೆ ಪತ್ರವನ್ನು ಸಹ ಬರೆದೆ. ಅದರೆ ನಿಮ್ಮಿಂದ ಅದಕ್ಕೆ ಯಾವ ಉತ್ತರವೂ ಬರಲಿಲ್ಲ. ಇದೀಗ ತಮಗೆ ಸಭೆ ನಡೆಸಲು ಅವಕಾಶ ನೀಡಲಿಲ್ಲ ಎಂದು ಆರೋಪ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಹಾಗಾದರೆ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೆ ಒಂದು ಸಂವಿಧಾನ. ಬಿಜೆಪಿ ಸರ್ಕಾರವಿದ್ದರೆ ಬೇರೊಂದು ಸಂವಿಧಾನ ಇದೆಯೇ? ಎಂದು ಸಿದ್ಧರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಲಸಿಕೆ ನೀಡುವ ಮೂಲಕ ಕೊರೋನಾ ತೊಲಗಿಸಲು ಪಣತೊಟ್ಟಿದ್ದಾರೆ. ಆದರೆ, ಕಾಂಗ್ರೆಸ್ ಇದಕ್ಕೆ ಅಪವಾದವೆಂಬಂತೆ ವರ್ತಿಸುತ್ತಿದ್ದಾರೆ. ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ಧರಾಮಯ್ಯರಿಗೆ ಬಹಿರಂಗ ಪತ್ರ ಬರೆಯುತ್ತಿದ್ದೇನೆ. ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಬಾರದೆಂದು ಆದೇಶದ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಹಕ್ಕುಚ್ಯುತಿ ಮಂಡನೆ ಮಾಡಲು ಹೊರಟಿದ್ದಾರೆ. ನಾನು ವಿಪಕ್ಷ ನಾಯಕನಾಗಿದ್ದ ಸಂದರ್ಭದಲ್ಲಿ ಸಿದ್ಧರಾಮಯ್ಯ ಸಿ.ಎಂ. ಆಗಿದ್ದರು. ಆಗ ನನಗೆ, ಬರಗಾಲದ ಸಭೆ ನಡೆಸಲು ಬಿಟ್ಟಿರಲಿಲ್ಲ. ಅಧಿಕಾರಿಗಳಿಂದ ಮಾಹಿತಿ ಪಡೆಯಲು ಅವಕಾಶ ನೀಡಿರಲಿಲ್ಲ. ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲು ತಡೆ ಒಡ್ಡಿದ್ದರು. ಆದರೆ, ಈಗ ಹಕ್ಕುಚ್ಯುತಿ ಮಂಡನೆ ಮಾಡಲು ಹೊರಟಿದ್ದಾರೆ ಎಂದು ಕುಹಕವಾಡಿದರು.

ದೆಹಲಿಯಲ್ಲಿ ಬಡವರ ಮೇಲೆ ಲಸಿಕೆ ಪ್ರಯೋಗ ಮಾಡಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದರು. ಕೋವಿಡ್ ಸಂಕಷ್ಟ ಸಂದರ್ಭದಲ್ಲೂ ಈ ರೀತಿ ರಾಜಕೀಯ ಕಾರಣಕ್ಕಾಗಿ ಆರೋಪ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ವಿರೋಧಪಕ್ಷದ ನಾಯಕರುಗಳು ವ್ಯಾಕ್ಸಿನ್ ಬಗ್ಗೆ ಅಪಪ್ರಚಾರ ಈಗಲಾದರೂ ನಿಲ್ಲಿಸಬೇಕು. ಇಂದು ರಾಜ್ಯದಲ್ಲಿ, ದೇಶದಲ್ಲಿ ಕೊರೋನಾ ಹೆಚ್ಚಾಗಲು ಕಾಂಗ್ರೆಸ್ಸೇ ಕಾರಣ. ಇಂದಿನ ಜನರ ಸಾವಿಗೆ ನೇರವಾಗಿ ಕಾಂಗ್ರೆಸ್ಸೇ ಕಾರಣ. ನೀವು ಆಗ ಸುಮ್ಮನಿದ್ದಿದ್ದರೆ, ಇಷ್ಟೋತ್ತಿಗೆ ವ್ಯಾಕ್ಸಿನ್ ಪಡೆದು, ಜನರು ಬದುಕುತ್ತಿದ್ದರು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕೊರೋನಾ ಹೆಚ್ಚಾಗಲು ಕಾಂಗ್ರೆಸ್ಸೇ ಕಾರಣ. ಜನರು ಕಾಂಗ್ರೆಸ್ ನ ಕುತಂತ್ರದ ರಾಜಕಾರಣ ದಿಂದಾಗಿಯೇ ಸಾಯುತ್ತಿದ್ದಾರೆ. ಲಸಿಕೆ ಬಗ್ಗೆ ಬಹಳ ಅಪಪ್ರಚಾರ ಮಾಡಿದ್ದರು. ಇದರಿಂದಾಗಿಯೇ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕಿದರು. ಪ್ರಧಾನಿ ನರೇಂದ್ರ ಮೋದಿ ಲಸಿಕೆ ಹಾಕಿಸಿಕೊಳ್ಳಿ ಎಂದಾಗ, ಕುತಂತ್ರ ರಾಜಕಾರಣದ ಮೂಲಕ ದೇಶದ ಜನ ಲಸಿಕೆ ಪಡೆಯದ ಹಾಗೆ ಮಾಡಿದಿರಿ. ದ್ವಂದ್ವ ನೀತಿ ಮೂಲಕ ಕುತಂತ್ರ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ಇದಕ್ಕೆ ಉತ್ತರ ನೀಡಬೇಕು ಎಂದು ಸವಾಲು ಹಾಕಿದರು.

ನೀವು ಪತ್ರಿಕೆಗಳಲ್ಲಿ ಹೇಳಿಕೆ ನೀಡಿರುವ ಕಾರಣದಿಂದಾಗಿಯೇ ನಾನು ಬಹಿರಂಗ ಪತ್ರ ಬರೆದಿದ್ದೇನೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಉತ್ತರ ನೀಡಬೇಕು. ಕಾಂಗ್ರೆಸ್‌ಗೆ ಒಂದು ಸಂವಿಧಾನ ಬಿಜೆಪಿ ಅಧಿಕಾರದಲ್ಲಿದ್ದರೆ ಒಂದು ಸಂವಿಧಾನ ಇದೆಯೇ ಎಂಬುದನ್ನು ತಿಳಿಸಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಸ್. ದತ್ತಾತ್ರಿ, ಡಿ.ಎಸ್. ಅರುಣ್, ಎಸ್.ಎನ್. ಚನ್ನಬಸಪ್ಪ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: CoronaD K ShivakumarKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaNews in KannadaNews KannadaShimogaShivamogaShivamogga NewsSiddaramaiahಕೊರೋನಾಡಿ.ಕೆ. ಶಿವಕುಮಾರ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಕೆ.ಎಸ್.ಈಶ್ವರಪ್ಪಸಿದ್ದರಾಮಯ್ಯ
Share199Tweet123Send
Previous Post

ಕೋವಿಡ್ ಹಾಗೂ ಬ್ಲ್ಯಾಕ್‌ಫಂಗಸ್ ಬಗ್ಗೆ ಆತಂಕಪಡದೆ ಜಾಗೃತರಾಗಿರಿ: ಸಚಿವ ಬಿ.ಸಿ. ಪಾಟೀಲ್

Next Post

ಅಕ್ರಮ ಆಮ್ಲಜನಕ ಸಿಲಿಂಡರ್ ಮಾರಾಟ: ಇಬ್ಬರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೃತಕ ಆಕ್ಸಿಜನ್ ಮಾರಾಟ: ಪ್ರಕರಣ ದಾಖಲು

ಅಕ್ರಮ ಆಮ್ಲಜನಕ ಸಿಲಿಂಡರ್ ಮಾರಾಟ: ಇಬ್ಬರ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ! ಎಷ್ಟು ದಿನ? ಕಾರಣವೇನು?

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ! ಎಷ್ಟು ದಿನ? ಕಾರಣವೇನು?

May 21, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

2026ರಲ್ಲಿ ವೃತ್ತಿಜೀವನದ ಬೆಳವಣಿಗೆಗೆ ನೆರವಾಗುವ ಬೆಂಗಳೂರಿನ ಪ್ರಮುಖ 10 ಕಂಪನಿಗಳ ಪಟ್ಟಿ ಪ್ರಕಟಿಸಿದ ಲಿಂಕ್ಡ್‌ ಇನ್

May 20, 2026
“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

May 20, 2026
GE Aerospace to Invest ₹100 Crore in Pune Facility, Boosting India Manufacturing

ಪುಣೆಯ 100 ಕೋಟಿ ಹೂಡಿಕೆಯೊಂದಿಗೆ ಭಾರತದಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೇಗಗೊಳಿಸಲು ಮುಂದಾಗಿರುವ GE ಏರೋಸ್ಪೇಸ್

May 20, 2026
ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL