ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಸಾಗರ ತಾ. ಕಟ್ಟಿನಕಾರು ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಶಾಸಕ ಹೆಚ್. ಹಾಲಪ್ಪ ಅವರು, ಬಸ್ ವ್ಯವಸ್ಥೆ ಕಲ್ಪಿಸಲು ಈ ಹಿಂದೆ ಸಾರಿಗೆ ಮತ್ತು ಕೆಎಸ್ಆರ್ಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ್ದರು. ಮಾರ್ಚ್ 1ರಿಂದ ಬಸ್ ಸೇವೆ ಪ್ರಾರಂಭಿಸುವ ಬಗ್ಗೆ ಅಧಿಕಾರಿಗಳು ಭರವಸೆ ನೀಡಿದ್ದರು.
ಆದರೆ, ಇಂದು ಬಸ್ ಸಂಚಾರ ಪ್ರಾರಂಭಿಸದೆ 10 ದಿನಗಳ ಕಾಲಾವಕಾಶ ಬೇಕು ಎಂದು ಉದಾಸೀನ ತೋರಿರುವ ವಿಷಯ ಗಮನಕ್ಕೆ ಬಂದ ತಕ್ಷಣ ಶಾಸಕರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಾರಿಗೆ ಸಚಿವರಿಗೆ ಕರೆ ಮಾಡಿ ಮಾತನಾಡಿ, ಬಸ್ ಸಂಚಾರ ಪ್ರಾರಂಭಿಸುವಂತೆ ಹಾಗೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ಬಸ್ ಸಂಚಾರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ನಂತರ ಕಟ್ಟಿನಕಾರು ಭಾಗದ ಬಸ್ ಸಂಚಾರ ಪ್ರಾರಂಭಗೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post