ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸೊರಬ ತಾಲೂಕಿನ ಕುಬಟೂರಿನ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಬೂತ್ ನಲ್ಲಿ ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ #Madhu Bangarappa ಮತ ಚಲಾವಣೆ ಮಾಡಿದರು.
ಮತದಾನ ಮಾಡುವುದಕ್ಕೂ ಮೊದಲು ದೇವಸ್ಥಾನಗಳಿಗೆ ಭೇಟಿ ನೀಡಿದರು. ನಂತರ ಕುಬಟೂರಿನ ಮತಗಟ್ಟೆ 31ರಲ್ಲಿ ಸರತಿ ಸಾಲಿನಲ್ಲಿ ನಿಂತು ಪತ್ನಿ ಅನಿತಾ ಜೊತೆ ಮತದಾನ ಮಾಡುವುದರ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು.

Also read: ಎರಡು ಲಕ್ಷ ಮತಗಳ ಅಂತರದ ಗೆಲುವು ನಿಶ್ಚಿತ: ಮಾಜಿ ಡಿಸಿಎಂ ಈಶ್ವರಪ್ಪ ಭರವಸೆ
ಆರೂವರೆ ಲಕ್ಷ ಮತದಾರರನ್ನು ಭೇಟಿ ಆಗಿದ್ದೇವೆ. ನಮ್ಮ ಅಭ್ಯರ್ಥಿ ಪರವಾಗಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, #Rahul Gandhi ಮಲ್ಲಿಕಾರ್ಜುನ ಖರ್ಗೆ #Mallikarjuna Kharge ಪ್ರಚಾರ ಮಾಡಿದ್ದರು. ವೈಯಕ್ತಿಕ ಟೀಕೆ, ಆರೋಪ ಪ್ರತ್ಯಾರೋಪ ಪ್ರತಿ ಚುನಾವಣೆಯಲ್ಲಿ ಇರುತ್ತದೆ. ವೈಯಕ್ತಿಕ ಟೀಕೆ, ಟಿಪ್ಪಣಿ ಹತೋಟಿಯಲ್ಲಿದ್ದರೆ ಒಳ್ಳೆಯದು. ಟೀಕೆ ಟಿಪ್ಪಣಿಗಳಿಂದ ಯಾರ ಮನಸ್ಸಿಗೂ ನೋವು ಉಂಟಾಗಬಾರದು ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ #Prajwal Revanna ಪ್ರಕರಣ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾನೂನು ಇದೆ. ಕಾನೂನು ಎಲ್ಲವನ್ನು ನೋಡಿಕೊಳ್ಳುತ್ತದೆ. ಕಾನೂನು ವ್ಯಾಪ್ತಿಯಲ್ಲಿ ಶಿಕ್ಷೆ ಆಗುತ್ತದೆ. ಸಂತ್ರಸ್ಥರಿಗೆ ನೂರಕ್ಕೆ ನೂರು ನ್ಯಾಯ ಕೊಡಿಸುತ್ತೇವೆ. ಸಂತ್ರಸ್ಥರಿಗೆ ರಕ್ಷಣೆ ಕೊಡಬೇಕು. ಆ ಕೆಲಸ ಸರ್ಕಾರದಿಂದ ಆಗುತ್ತದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















Discussion about this post