No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕ, ಹೂವು, ಸಿಹಿ ನೀಡಿ ಸ್ವಾಗತಿಸಿದ ಶಿಕ್ಷಣ ಸಚಿವರು

kalpa News by kalpa News
October 25, 2021
in ಶಿವಮೊಗ್ಗ
0
ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕ, ಹೂವು, ಸಿಹಿ ನೀಡಿ ಸ್ವಾಗತಿಸಿದ ಶಿಕ್ಷಣ ಸಚಿವರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೊರೋನ ಸೋಂಕಿನ ಕಾರಣದಿಂದಾಗಿ ಬಹುದಿನಗಳಿಂದ ಸ್ಥಗಿತಗೊಂಡಿದ್ದ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳು ಹಂತಹಂತವಾಗಿ ಆರಂಭಗೊಳ್ಳುತ್ತಿವೆ. ಇಂದಿನಿಂದ ರಾಜ್ಯದಾದ್ಯಂತ 1ರಿಂದ 5ನೇ ತರಗತಿಗಳು ಆರಂಭಗೊಂಡಿದ್ದು, ಸಹಜವಾಗಿ ಮಕ್ಕಳು, ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರಲ್ಲಿ ಸಂಭ್ರಮದ ವಾತಾವರಣದ ಮನೆಮಾಡಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದರು.

ಅವರು ಇಂದು ಶಿವಮೊಗ್ಗ ಸಮೀಪದ ಮಲವಗೊಪ್ಪದ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲಾ ಆರಂಭದ ಕ್ಷಣಕ್ಕೆ ಸಾಕ್ಷಿಯಾದರು. ಈ ಸಂದರ್ಭದಲ್ಲಿ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕ, ಹೂವು ಹಾಗೂ ಸಿಹಿ ನೀಡಿ ಸ್ವಾಗತಿಸಿ, ಮಾತನಾಡಿದರು. ಪೋಷಕರು ತಮ್ಮ ಒಪ್ಪಿಗೆಯ ಪತ್ರದೊಂದಿಗೆ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಎಂದಿನಂತೆ ಸಹಜವಾಗಿದೆ ಎಂದರು.

ತಜ್ಞರ ಸಲಹೆಯಂತೆ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳನ್ನು ಪ್ರತಿನಿತ್ಯ ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದ ಅವರು, ಇಂದಿನಿಂದ ನವೆಂಬರ್ 1ರವರೆಗೆ ಮಧ್ಯಾಹ್ನದವರೆಗೆ ಮಾತ್ರ ಶಾಲೆಗಳು ನಡೆಯಲಿವೆ. ಮಕ್ಕಳ ಮಾನಸಿಕ ಸ್ಥಿತಿಯನ್ನು ಶಾಲೆಯೆಡೆಗೆ ಸೆಳೆಯುವ ನಿಟ್ಟಿನಲ್ಲಿ ಆರಂಭ ಹಂತವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ನವೆಂಬರ್ 1ರ ನಂತರ ಶಾಲೆಗಳು ಮೊದಲಿನಂತೆ ಬೆಳಿಗಿನಿಂದ ಸಂಜೆಯವರೆಗೆ ನಡೆಯಲಿವೆ. ಅಂದಿನಿಂದಲೇ ಮಧ್ಯಾಹ್ನದ ಅಕ್ಷರ ದಾಸೋಹ ಮುಂದುವರೆಯಲಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಅವಧಿಗೆ ಪಠ್ಯದಲ್ಲಿ ಯಾವುದೇ ಕಡಿತ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಾದ್ಯಂತ ಸುಮಾರು 48,000ಪ್ರಾಥಮಿಕ ಶಾಲೆಗಳಿವೆ. ಅವುಗಳಲ್ಲಿ 29,000ಶಾಲೆಗಳಲ್ಲಿ ಪೂರ್ಣಪ್ರಮಾಣದ ವ್ಯವಸ್ಥೆ ಒದಗಿಸಲಾಗಿದೆ. ಅವುಗಳನ್ನು ಶ್ರೇಣಿಗಳಾಗಿ ವಿಂಗಡಿಸಲಾಗಿದೆ. 7,000ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ನ್ಯೂನತೆಗಳಿರುವುದನ್ನು ಗಮನಿಸಲಾಗಿದೆ. ಅವುಗಳನ್ನು ಆದ್ಯತೆಯ ಮೇರೆಗೆ ಇತ್ಯರ್ಥಪಡಿಸಲು ಆಯಾ ವಿಧಾನ ಸಭಾ ಕ್ಷೇತ್ರದ ಶಾಸಕರಿಗೆ ನಿರ್ವಹಣೆಯ ಜವಾಬ್ದಾರಿಯನ್ನು ನೀಡಲಾಗಿದೆ. ಸ್ಥಳೀಯವಾಗಿರುವ ದಾನಿಗಳ ಸಹಕಾರವನ್ನು ಪಡೆದು, ಶಾಲೆಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಅನೇಕ ಜನ ದಾನಿಗಳು ಆಸಕ್ತಿ ತೋರಿಸಿದ್ದಾರೆ ಎಂದರು.

ಶಾಲಾ ದಿನಗಳಲ್ಲಿ ಸರ್ಕಾರವು ಹೊರಡಿಸಿರುವ ಕೊರೋನ ನಿಯಮನ್ನು ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶಿಸಲಾಗಿದೆ. ಕೊರೋನ ಅವಧಿಯಲ್ಲಿ ಮಕ್ಕಳ ಶೈಕ್ಷಣಿಕ ಪಠ್ಯ ಚಟುವಟಿಕೆಗಳಿಂದ ವಿಮುಖರಾಗಿರಬಹುದಾಗಿದ್ದು, ಅವರನ್ನು ಶಿಕ್ಷಣದ ಕಲಿಕೆಗೆ ಕರೆತರಲು ವಿಶೇಷ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ. ಅದಕ್ಕಾಗಿ ರಾಜ್ಯದ ಎಲ್ಲಾ ಶಿಕ್ಷಕರನ್ನು ವಿಶ್ವಾಸಕ್ಕೆ ಪಡೆದು ಕ್ರಮವಹಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ಶಾಲೆಯ ಸರ್ವಾಂಗೀಣ ವಿಕಾಸಕ್ಕಾಗಿ ನನ್ನ ಶಾಲೆ, ನನ್ನ ಕೊಡುಗೆ ಎಂಬ ಹೊಸ ಪರಿಕಲ್ಪನೆಯ ಆಪ್ ಒಂದನ್ನು ವಿನ್ಯಾಸಗೊಳಿಸಲಾಗುತ್ತಿದೆ. ಇದರಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು, ಶಿಕ್ಷಣಾಸಕ್ತರು, ಊರಿನ ಹಿರಿಯರು ಭಾಗವಹಿಸಿ ಶಾಲೆಯನ್ನು ಅಭಿವೃದ್ದಿಪಡಿಸಿ, ಶಾಲಾ ವಾತಾವರಣ ಸುಂದರವಾಗಿರುವಂತೆ ನೋಡಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.


ಶಿಕ್ಷಕರ ಪದೋನ್ನತಿ ಕುರಿತಂತೆ ಶಿಕ್ಷಕರು ಹಾಗೂ ಸರ್ಕಾರದ ನಡುವೆ ಜಿಜ್ಞಾಸೆಗಳಿವೆ. ಪರೀಕ್ಷೆ ಮುಖಾಂತರ ಪದೋನ್ನತಿ ನೀಡಬೇಕೆಂಬುದು ಇಲಾಖೆಯ ಆಶಯ. ಆದರೆ ಶಿಕ್ಷಕರು ಪರೀಕ್ಷೆ ಇಲ್ಲದೆಯೆ ಪದೋನ್ನತಿ ಬಯಸುತ್ತಿದ್ದಾರೆ. ವಿವಿಧ ಕಾರಣಗಳಿಂದಾಗಿ ಬಹು ದಿನಗಳಿಂದ ನೆನೆಗುದಿಗೆ ಬಿದ್ದದ್ದ ಶಿಕ್ಷಕರ ವರ್ಗಾವಣೆಗೆ ಅವರ ಕೋರಿಕೆಯಂತೆ ವರ್ಗಾವಣೆ ಪ್ರಕ್ರಿಯೆ ಪುನರ್ ಆರಂಭಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ರುದ್ರೇಗೌಡರು, ಆರ್ಯವೈಶ್ಯ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷ ಡಿ.ಎಸ್.ಅರುಣ್, ಚೆನ್ನಬಸಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್, ಡಯಟ್ ಪ್ರಾಚಾರ್ಯ ಬಸವರಾಜಪ್ಪ ಸೇರಿದಂತೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister NageshNews in KannadaNews KannadaShimogaShivamoggaShivamogga Newsಕೊರೋನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಬಿ.ಸಿ ನಾಗೇಶ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅ.28ರಂದು ತಮ್ಮ ಜನ್ಮದಿನ ಆಚರಿಸಿಕೊಳ್ಳದಿರಲು ಶಾಸಕ ಸಂಗಮೇಶ್ವರ್ ನಿರ್ಧರಿಸಿದ್ದೇಕೆ?

Next Post

ರೈತರು ಪ್ರಬುದ್ಧರಾಗಿ ಹಕ್ಕು ಚಲಾಯಿಸಬೇಕು: ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅಭಿಪ್ರಾಯ

kalpa News

kalpa News

Next Post
ರೈತರು ಪ್ರಬುದ್ಧರಾಗಿ ಹಕ್ಕು ಚಲಾಯಿಸಬೇಕು: ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅಭಿಪ್ರಾಯ

ರೈತರು ಪ್ರಬುದ್ಧರಾಗಿ ಹಕ್ಕು ಚಲಾಯಿಸಬೇಕು: ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL