ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ತೆರಳಿದ ವೇಳೆ ನಾಗರಿಕರೊಬ್ಬರು ಅವಾಚ್ಯ ಶಬ್ದಗಳನ್ನು ಪ್ರಯೋಗ ಮಾಡಿದ ಹಿನ್ನೆಲೆಯಲ್ಲಿ ಶಾಸಕ ಚನ್ನಬಸಪ್ಪ(ಚೆನ್ನಿ) MLA Channabasappa ಅವರು ಸಿಟ್ಟಿಗೆದ್ದು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಇಂದು ಮುಂಜಾನೆ ಪುರಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕರು ಆಗಮಿಸಿದ್ದರು. ಸಮಸ್ಯೆಗಳ ವೀಕ್ಷಣೆಗೆ ಶಾಸಕರು ನಿವಾಸಿಗಳ ಜೊತೆ ತೆರಳುತ್ತಿದ್ದ ವೇಳೆ, ವ್ಯಕ್ತಿಯೋರ್ವರು ಅವ್ಯಾಚ್ಯ ಶಬ್ದ ಪ್ರಯೋಗ ಮಾಡಿ ಆಕ್ರೋಶ ಹೊರಹಾಕಿದ್ದಾರೆ ಎಂದು ಹೇಳಲಾಗಿದೆ.
ಈ ಪ್ರಯೋಗದಿಂದ ಸಿಟ್ಟಿಗೆದ್ದ ಶಾಸಕರು ಪದ ಬಳಸಿದ ವ್ಯಕ್ತಿಯನ್ನು ತರಾಟೆ ತೆಗೆದುಕೊಂಡಿದ್ದಾರೆ. ನನ್ನ ಹತ್ತಿರ ಸರಿಯಾಗಿ ಮಾತನಾಡಬೇಕು. ಇಲ್ಲದಿದ್ದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಗರಂ ಆಗಿದ್ದಾರೆ ಎಂದು ವರದಿಯಾಗಿದೆ.
Also read: ಹಿರಿಯ ನಟ ಬ್ಯಾಂಕ್ ಜನಾರ್ಧನ್’ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಸದರಿ ವ್ಯಕ್ತಿಯು ಕೂಡ ಶಾಸಕರ ಜೊತೆ ಏರು ಧ್ವನಿಯಲ್ಲಿ ಪ್ರತ್ಯುತ್ತರ ನೀಡಲಾರಂಭಿಸಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ಏರ್ಪಟ್ಟಿದೆ. ಇದರಿಂದ ಸ್ಥಳದಲ್ಲಿ ಕೆಲ ಸಮಯ ಕಾವೇರಿದ ವಾತಾವರಣ ಸೃಷ್ಟಿಯಾಗಿತ್ತು. ತತಕ್ಷಣವೇ ಸ್ಥಳದಲ್ಲಿದ್ದವರು ಶಾಸಕರನ್ನು ಸಮಾಧಾನಪಡಿಸಿ, ಆ ವ್ಯಕ್ತಿಯನ್ನು ಅಲ್ಲಿಂದ ಬೇರೆಡೆ ಕಳುಹಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಇನ್ನು, ಶಾಸಕರ ಭೇಟಿಯ ವೇಳೆ ಸ್ಥಳೀಯರು ಹಲವು ಸಮಸ್ಯೆಗಳ ಸರಮಾಲೆಯನ್ನೇ ಬಿಚ್ಚಿಟ್ಟಿದ್ದಾರೆ. ಮೂಲಸೌಕರ್ಯಗಳ ಕೊರತೆಯ ಅಳಲು ತೋಡಿಕೊಂಡ ಸ್ಥಳೀಯರು, ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಚರಂಡಿಗಳ ಸ್ವಚ್ಛತೆಯಿಲ್ಲ. ಯುಜಿಡಿ ಅವ್ಯವಸ್ಥೆಯಿದೆ ಎಂಬ ದೂರುಗಳನ್ನು ತೋಡಿಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಸಂಬಂಧಿಸಿದ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಜೊತೆಯಲ್ಲಿ ಚರ್ಚಿಸಿ, ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post