Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ ಕುಲಪತಿಗಳಿಗೆ ಶಾಸಕ ಡಿ.ಎಸ್. ಅರುಣ್ ಬಹಿರಂಗ ಪತ್ರ

July 3, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲೆನಾಡಿನ ಹೆಮ್ಮೆಯ ಪ್ರತಿರೂಪವಾಗಿ ಮೂಡಿಬಂದಿರುವ ಕುವೆಂಪು ವಿಶ್ವವಿದ್ಯಾನಿಲಯದ #Kuvempu University ಸ್ಥಾಪನೆ, ಬೆಳವಣಿಗೆ ಹಾಗೂ ಯಶಸ್ಸಿನ ಹಿಂದೆ ನೂರಾರು ಹಿರಿಯರ ಪರಿಶ್ರಮ ಮತ್ತು ತ್ಯಾಗವಿದ್ದು, ಈ ವಿಶ್ವವಿದ್ಯಾನಿಲಯದ ಸ್ಥಾಪನೆಯ ಮೂಲಕ ಮಲೆನಾಡಿನ ಮತ್ತು ಸುತ್ತಮುತ್ತಲಿನ ಜಿಲ್ಲೆಯ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಹಿಂದುಳಿದ ಹಾಗೂ ರೈತಾಪಿ ಮೂಲದ ಕುಟುಂಬಗಳ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶ ದೊರೆತಿರುವುದು ಹೆಮ್ಮೆಯಾಗಿದ್ದು, ಜುಲೈ 2 ರಂದು ಕುವೆಂಪು ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನವಾಗಿದ್ದು, ಇದರ ಅಭಿವೃದ್ಧಿಗೆ ಕಾರಣರಾದ ಎಲ್ಲರಿಗೂ ನಮಿಸುತ್ತಾ ವಿವಿ ಕುಲಪತಿಗಳಿಗೆ ಶಾಸಕ ಡಿ.ಎಸ್. ಅರುಣ್ #D S Arun ಕೆಲವೊಂದು ಪ್ರಶ್ನೆಗಳನ್ನು ಪತ್ರ ಮುಖೇನ ಕೇಳಿದ್ದಾರೆ.

ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಸಾಮಾನ್ಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅನುಸರಿಸಬೇಕೆಂದು ನಿರ್ಧರಿಸಿ, ಕಳೆದ ಫೆಬ್ರವರಿ 10 ರಂದು ಪ್ರಾರಂಭಗೊಂಡ ಸಮ ಸೆಮಿಸ್ಟರ್‍ಗಳನ್ನು ಕೇವಲ 90 ದಿನಗಳಲ್ಲೇ ಪೂರ್ಣಗೊಳಿಸಿ, ಮೇ 15ರೊಳಗೆ ಶೈಕ್ಷಣಿಕ ವರ್ಷವನ್ನು ಮುಕ್ತಾಯಗೊಳಿಸಲು ತ್ವರಿತ ಕ್ರಮವನ್ನು ತೆಗೆದುಕೊಂಡದ್ದು ಯಾಕೆ ? ಈ ಹಿನ್ನೆಲೆಯಲ್ಲಿ ದಿನಕ್ಕೆ ಮೂರು ಪರೀಕ್ಷೆಗಳಂತೆ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು, ಪರೀಕ್ಷಾ ಸಿಬ್ಬಂದಿ ಹಾಗೂ ಮೇಲ್ವಿಚಾರಕರಿಗೆ ಅತಿಯಾದ ಒತ್ತಡವನ್ನು ಹೇರುವ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ವಿಶ್ವವಿದ್ಯಾನಿಲಯದ ಪರೀಕ್ಷಾ ವೇಳಾಪಟ್ಟಿಯು ಇತರ ವಿಶ್ವವಿದ್ಯಾನಿಲಯಗಳ ವೇಳಾಪಟ್ಟಿಯೊಂದಿಗೆ ಹೋಲಿಸಿದರೆ ಈ ಅನಿವಾರ್ಯ ಕ್ರಮದ ಅಗತ್ಯತೆ ಇತ್ತೆ ? ಈ ತ್ವರಿತ ಕ್ರಮದಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳಿಂದ ವಂಚನೆ ಆಗಲಿಲ್ಲವೇ ಅಥವಾ ಪಾಠ ಪ್ರವಚನಗಳನ್ನು ಬೇಗ ಬೇಗ ಮುಗಿಸುವ ಒತ್ತಡಕ್ಕೆ ಅಧ್ಯಾಪಕರು ಒಳಗಾಗಲಿಲ್ಲವೇ?
ಶೈಕ್ಷಣಿಕ ವೇಳಾಪಟ್ಟಿಯಂತೆ ಜೂನ್ 13ರಂದು ಎಲ್ಲಾ ಪದವಿ ಪರೀಕ್ಷೆಗಳು ಮುಗಿದರೂ, ಅಂತಿಮ ವರ್ಷದ ಪರೀಕ್ಷೆಗಳು ಜೂನ್ 4ರಂದೇ ಪೂರ್ಣಗೊಂಡರೂ ಮೌಲ್ಯಮಾಪನ ಕಾರ್ಯವನ್ನು ಇನ್ನೂ ಪ್ರಾರಂಭಿಸದಿರುವುದು ಎಂತಹ ನಿರ್ಲಕ್ಷ್ಯ? ಮೌಲ್ಯಮಾಪನವನ್ನು ನಡೆಸದ ಮೇಲೆ ಅತಿ ತುರ್ತಾಗಿ ಪರೀಕ್ಷೆಗಳನ್ನು ಏಕೆ ನಡೆಸಲಾಯಿತು. ಕೆಲವು ಬೋರ್ಡಿನ ಪ್ರಾಧ್ಯಾಪಕರು ಈಗಾಗಲೇ ಮೌಲ್ಯಮಾಪನವನ್ನು ಬಹಿಷ್ಕರಿಸಿದ್ದಾರೆ. ಇದರ ಬಗ್ಗೆ ತಮಗೆ ಮಾಹಿತಿ ಇದೆಯೇ? ತಮಗೆ ನೀಡಿರುವ ಮನವಿಯ ಪ್ರತಿಯನ್ನು ನನಗೂ ನೀಡಿದ್ದಾರೆ. ಇದರ ಬಗ್ಗೆ ತಾವು ತೆಗೆದುಕೊಂಡಿರುವ ನಿರ್ಧಾರವೇನು? ಇದರ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಸಭೆಯನ್ನು ಏಕೆ ಕರೆದಿಲ್ಲ? ಈ ತೊಂದರೆಯ ನಿವಾರಣೆ ಬಗ್ಗೆ ವಿಶ್ವವಿದ್ಯಾನಿಲಯದ ನಿಲುವೇನು ವಿಶ್ವವಿದ್ಯಾನಿಲಯದ ಮೌನಕ್ಕೆ ಕಾರಣವೇನು?

ಅಂತಿಮ ವರ್ಷದ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸ ಅಥವಾ ಉದ್ಯೋಗದ ಆಸೆಯೊಂದಿಗೆ ತಮ್ಮ ಫಲಿತಾಂಶಕ್ಕಾಗಿ ಇನ್ನೆಷ್ಟು ದಿನ ನಿರೀಕ್ಷಿಸುತ್ತಾ ಕೂರಬೇಕು? ಈ ವಿಳಂಬವು ಅವರ ಭವಿಷ್ಯಕ್ಕೆ ದೊಡ್ಡ ತೊಂದರೆಯನ್ನುಂಟುಮಾಡು ವುದಿಲ್ಲವೇ? ವಿದ್ಯಾರ್ಥಿಗಳಿಗೆ ಒಂದೇ ಒಂದು ಸೆಮಿಸ್ಟರ್ ನ ಅಂಕಪಟ್ಟಿಗಳು ಸಿಕ್ಕಿರುವುದಿಲ್ಲ. ಫಲಿತಾಂಶ ಪ್ರಕಟವಾದರೆ ವಿದ್ಯಾರ್ಥಿಗಳಿಗೆ ಕೆಲವು ವಿಷಯಗಳಲ್ಲಿ ವಿನಾಕಾರಣ ಅನುತ್ತೀರ್ಣ ಅಥವಾ ಕೆಲವು ವಿಷಯಗಳ ಫಲಿತಾಂಶವೇ ಪ್ರಕಟವಾಗಿರುವುದಿಲ್ಲ. ಇದಕ್ಕಾಗಿ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯವನ್ನು ಅಲೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ; ಇದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ಕೇಳಿದರೆ ಸ್ಟೇಟ್ಮೆಂಟ್ ಆಫ್ ಮಾಕ್ರ್ಸ್ ಕೊಡುವುದನ್ನು ನಿಲ್ಲಿಸಿಯೇ ಬಿಡುತ್ತೇವೆಂದು ಪತ್ರಿಕಾ ಹೇಳಿಕೆ ನೀಡುವಷ್ಟು ಅಧಿಕಾರಿಗಳು ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಯಾವುದೇ ಕ್ರಮವನ್ನು ನಾವು ಸ್ವಾಗತಿಸುತ್ತೇವೆ ಆದರೆ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನಾನುಕೂಲವನ್ನು ನಾವು ಪ್ರತಿಭಟಿಸದೆ ಬಿಡುವುದಿಲ್ಲ.
ಮೌಲ್ಯಮಾಪನದ ಬೋರ್ಡಿನ ಮುಖ್ಯಸ್ಥರು ಡಿಎ ಹಾಗೂ ಟಿಎ ಸಂಭಾವನೆ ಸಂಬಂಧಿತ ವಿಷಯದಲ್ಲಿ ಗೊಂದಲಗಳಿವೆ. ಇತರ ವಿಶ್ವವಿದ್ಯಾನಿಲಯಗಳ ಪರೀಕ್ಷಾ ಶುಲ್ಕದೊಂದಿಗೆ ಹೋಲಿಸಿದರೆ, ನಮ್ಮ ವಿಶ್ವವಿದ್ಯಾನಿಲಯದ ಶುಲ್ಕ ಹೆಚ್ಚಾಗಿರುವುದಲ್ಲದೆ; ಮೌಲ್ಯಮಾಪಕರ ಸಂಭಾವನೆಯನ್ನು ಕಡಿತಗೊಳಿಸಿರುವುದರ ಹಿನ್ನೆಲೆ ಏನು? ಬೇರೆ ಯಾವ ಯಾವ ವಿಶ್ವವಿದ್ಯಾನಿಲಯದಲ್ಲಿ ಮೌಲ್ಯಮಾಪನದ ಸಂಭಾವನೆಯನ್ನು ಕಡಿತಗೊಳಿಸಿದ್ದಾರೆ? ಮೌಲ್ಯಮಾಪನಕ್ಕೆ ಸಂಬಂಧಪಟ್ಟ ಬೋರ್ಡಿನ ಮುಖ್ಯಸ್ಥರು ಮೌಲ್ಯಮಾಪನದ ಕೊ-ಆರ್ಡಿನೇಟರ್ ಗಳು ಮೌಲ್ಯಮಾಪನದ ಕುಲಸಚಿವರು ಮೌಲ್ಯಮಾಪನದ ತಾಂತ್ರಿಕ ಮುಖ್ಯಸ್ಥರು ಇವರೆಲ್ಲರ ಸಂಭಾವನೆಯೂ ಕಡಿಮೆಯಾಗಿದೆಯೇ ಅಥವಾ ಕೇವಲ ಮೌಲ್ಯಮಾಪಕರ ಸಂಭಾವನೆ ಕಡಿತಗೊಳಿಸಲಾಗಿದೆಯೇ? ಡಿಜಿಟಲ್ ಮೌಲ್ಯಮಾಪನವು ಕೇವಲ ಪದವಿ ಪರೀಕ್ಷೆಗಳಿಗೆ ಸೀಮಿತವಾಗಿರುವುದು ಏಕೆ? ಪೋಸ್ಟ್ ಗ್ರಾಜುಯೇಷನ್ ಕೋರ್ಸ್ ಗಳಿಗೆ ಡಿಜಿಟಲ್ ಮೌಲ್ಯಮಾಪನವನ್ನು ಏಕೆ ಅಳವಡಿಸಿಲ್ಲ? ಪರಿಷ್ಕೃತ ಸಂಭಾವನೆಯನ್ನು ಅವರಿಗೂ ಅಳವಡಿಸಲಾಗಿದೆಯೇ?

ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯನ್ನು ಜಾರಿಗೊಳಿಸಿ, ಮೌಲ್ಯಮಾಪಕರಿಗೆ ಎಲ್ಲೆಂದರಲ್ಲಿ ಮತ್ತು ಯಾವಾಗ ಬೇಕಾದರೂ ಮೌಲ್ಯಮಾಪನ ಮಾಡಲು ಅವಕಾಶ ನೀಡಿರುವುದರಿಂದ ಮೌಲ್ಯಮಾಪನದ ಗುಣಮಟ್ಟ, ಗೌಪ್ಯತೆ ಹಾಗೂ ಶ್ರೇಷ್ಠತೆ ಮೇಲೆ ಯಾವುದೇ ಹಾನಿಯಾಗುವುದಿಲ್ಲವೇ? ಈ ರೀತಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವ ಇತರ ವಿಶ್ವವಿದ್ಯಾನಿಲಯಗಳ ಉದಾಹರಣೆಗಳನ್ನು ನೀಡಲು ಸಾಧ್ಯವೇ? ಉದಾಹರಣೆಗೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಲ್ಲಿ ಇಂಜಿನಿಯರಿಂಗ್ ಪಠ್ಯ ವಿಷಯಗಳ ಮೌಲ್ಯಮಾಪನವನ್ನು ಶಿಕ್ಷಣ ಕ್ಷೇತ್ರದ ಪರಿಣಿತರನ್ನು ಮೌಲ್ಯಮಾಪನ ಕೇಂದ್ರಗಳಿಗೆ ಕರೆಯುವ ಮೂಲಕ ನೇರವಾಗಿ ನಡೆಸಲಾಗುತ್ತಿದೆ. ಈ ವೇಳೆ, ಮೌಲ್ಯಮಾಪನ ಕೇಂದ್ರಗಳನ್ನೇ ನಿರ್ಲಕ್ಷ್ಯ ಮಾಡಿ ಎಲ್ಲೆಂದರಲ್ಲಿ ಮೌಲ್ಯಮಾಪನ ಮಾಡುವ ನಿಮ್ಮ ಹೊಸ ಕ್ರಮವು ನ್ಯಾಯಸಮ್ಮತವಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತಿದೆ.
ಇವೆಲ್ಲ ಪ್ರಶ್ನೆಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ವಿಶ್ವವಿದ್ಯಾನಿಲಯದ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕೇಳುತ್ತಿರುವೆ ಎಂದು ಮನಗಂಡು ಸಮರ್ಪಕ ಉತ್ತರ ನೀಡುವಂತೆ ವಿನಂತಿಸುತ್ತೇನೆ. ತಾವುಗಳು ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳನ್ನು ಅರ್ಥ ಮಾಡಿಕೊಂಡು ಆದಷ್ಟು ಬೇಗ ತ್ವರಿತ ಗತಿಯಲ್ಲಿ ಮೌಲ್ಯಮಾಪನವನ್ನು ಪ್ರಾರಂಭಿಸಿ ಫಲಿತಾಂಶವನ್ನು ನೀಡಬೇಕೆಂದು ಡಿ.ಎಸ್. ಅರುಣ್ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: D S ArunKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempu UniversityLatestNewsKannadaLocalNewsMalnadNewsNews_in_KannadaNews_KannadaShimogaShivamoggaShivamoggaNewsಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಬಿ.ಪಿ. ವೀರಭದ್ರಪ್ಪಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

‘ವಿಧಿ’ಯಾಟದ ವಿರುದ್ಧ ‘ಪ್ರೀತಿ’ಯ ಹೋರಾಟ; ಬರ್ತಿದೆ ಹೊಚ್ಚ ಹೊಸ ಧಾರಾವಾಹಿ ‘ಕರ್ಣ’ ಜೀ಼ ಕನ್ನಡ ವಾಹಿನಿಯಲ್ಲಿ!

Next Post

ವ್ಯಕ್ತಿತ್ವ ವಿಕಸನಕ್ಕೆ ವಿದ್ಯಾರ್ಥಿ ಜೀವನ ಪರಿಣಾಮಕಾರಿ: ನ್ಯಾ. ಸಂತೋಷ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವ್ಯಕ್ತಿತ್ವ ವಿಕಸನಕ್ಕೆ ವಿದ್ಯಾರ್ಥಿ ಜೀವನ ಪರಿಣಾಮಕಾರಿ: ನ್ಯಾ. ಸಂತೋಷ್ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

July 4, 2025

ತುಮಕೂರು-ಶಿವಮೊಗ್ಗ ಮೆಮು, ತಾಳಗುಪ್ಪ-ಬೆಂಗಳೂರು ರೈಲುಗಳ ಬಿಗ್ ಲೇಟೆಸ್ಟ್ ಅಪ್ಡೇಟ್

July 4, 2025

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

July 4, 2025

ಹಿರಿಯ ಜೀವಿಗಳು ಪರಂಪರೆಯ ಹರಿವಿನ ಕೊಂಡಿಗಳು

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

July 4, 2025

ತುಮಕೂರು-ಶಿವಮೊಗ್ಗ ಮೆಮು, ತಾಳಗುಪ್ಪ-ಬೆಂಗಳೂರು ರೈಲುಗಳ ಬಿಗ್ ಲೇಟೆಸ್ಟ್ ಅಪ್ಡೇಟ್

July 4, 2025

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!