No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ ಕುಲಪತಿಗಳಿಗೆ ಶಾಸಕ ಡಿ.ಎಸ್. ಅರುಣ್ ಬಹಿರಂಗ ಪತ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 3, 2025
in ಶಿವಮೊಗ್ಗ
0
ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆತಂಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲೆನಾಡಿನ ಹೆಮ್ಮೆಯ ಪ್ರತಿರೂಪವಾಗಿ ಮೂಡಿಬಂದಿರುವ ಕುವೆಂಪು ವಿಶ್ವವಿದ್ಯಾನಿಲಯದ #Kuvempu University ಸ್ಥಾಪನೆ, ಬೆಳವಣಿಗೆ ಹಾಗೂ ಯಶಸ್ಸಿನ ಹಿಂದೆ ನೂರಾರು ಹಿರಿಯರ ಪರಿಶ್ರಮ ಮತ್ತು ತ್ಯಾಗವಿದ್ದು, ಈ ವಿಶ್ವವಿದ್ಯಾನಿಲಯದ ಸ್ಥಾಪನೆಯ ಮೂಲಕ ಮಲೆನಾಡಿನ ಮತ್ತು ಸುತ್ತಮುತ್ತಲಿನ ಜಿಲ್ಲೆಯ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಹಿಂದುಳಿದ ಹಾಗೂ ರೈತಾಪಿ ಮೂಲದ ಕುಟುಂಬಗಳ ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶ ದೊರೆತಿರುವುದು ಹೆಮ್ಮೆಯಾಗಿದ್ದು, ಜುಲೈ 2 ರಂದು ಕುವೆಂಪು ವಿಶ್ವವಿದ್ಯಾಲಯದ ಸಂಸ್ಥಾಪನಾ ದಿನವಾಗಿದ್ದು, ಇದರ ಅಭಿವೃದ್ಧಿಗೆ ಕಾರಣರಾದ ಎಲ್ಲರಿಗೂ ನಮಿಸುತ್ತಾ ವಿವಿ ಕುಲಪತಿಗಳಿಗೆ ಶಾಸಕ ಡಿ.ಎಸ್. ಅರುಣ್ #D S Arun ಕೆಲವೊಂದು ಪ್ರಶ್ನೆಗಳನ್ನು ಪತ್ರ ಮುಖೇನ ಕೇಳಿದ್ದಾರೆ.

ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಸಾಮಾನ್ಯ ಶೈಕ್ಷಣಿಕ ವೇಳಾಪಟ್ಟಿಯನ್ನು ಅನುಸರಿಸಬೇಕೆಂದು ನಿರ್ಧರಿಸಿ, ಕಳೆದ ಫೆಬ್ರವರಿ 10 ರಂದು ಪ್ರಾರಂಭಗೊಂಡ ಸಮ ಸೆಮಿಸ್ಟರ್‍ಗಳನ್ನು ಕೇವಲ 90 ದಿನಗಳಲ್ಲೇ ಪೂರ್ಣಗೊಳಿಸಿ, ಮೇ 15ರೊಳಗೆ ಶೈಕ್ಷಣಿಕ ವರ್ಷವನ್ನು ಮುಕ್ತಾಯಗೊಳಿಸಲು ತ್ವರಿತ ಕ್ರಮವನ್ನು ತೆಗೆದುಕೊಂಡದ್ದು ಯಾಕೆ ? ಈ ಹಿನ್ನೆಲೆಯಲ್ಲಿ ದಿನಕ್ಕೆ ಮೂರು ಪರೀಕ್ಷೆಗಳಂತೆ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು, ಪರೀಕ್ಷಾ ಸಿಬ್ಬಂದಿ ಹಾಗೂ ಮೇಲ್ವಿಚಾರಕರಿಗೆ ಅತಿಯಾದ ಒತ್ತಡವನ್ನು ಹೇರುವ ಪರಿಸ್ಥಿತಿ ನಿರ್ಮಾಣವಾಗಿದೆ. ನಮ್ಮ ವಿಶ್ವವಿದ್ಯಾನಿಲಯದ ಪರೀಕ್ಷಾ ವೇಳಾಪಟ್ಟಿಯು ಇತರ ವಿಶ್ವವಿದ್ಯಾನಿಲಯಗಳ ವೇಳಾಪಟ್ಟಿಯೊಂದಿಗೆ ಹೋಲಿಸಿದರೆ ಈ ಅನಿವಾರ್ಯ ಕ್ರಮದ ಅಗತ್ಯತೆ ಇತ್ತೆ ? ಈ ತ್ವರಿತ ಕ್ರಮದಿಂದ ವಿದ್ಯಾರ್ಥಿಗಳಿಗೆ ಪಾಠ ಪ್ರವಚನಗಳಿಂದ ವಂಚನೆ ಆಗಲಿಲ್ಲವೇ ಅಥವಾ ಪಾಠ ಪ್ರವಚನಗಳನ್ನು ಬೇಗ ಬೇಗ ಮುಗಿಸುವ ಒತ್ತಡಕ್ಕೆ ಅಧ್ಯಾಪಕರು ಒಳಗಾಗಲಿಲ್ಲವೇ?
ಶೈಕ್ಷಣಿಕ ವೇಳಾಪಟ್ಟಿಯಂತೆ ಜೂನ್ 13ರಂದು ಎಲ್ಲಾ ಪದವಿ ಪರೀಕ್ಷೆಗಳು ಮುಗಿದರೂ, ಅಂತಿಮ ವರ್ಷದ ಪರೀಕ್ಷೆಗಳು ಜೂನ್ 4ರಂದೇ ಪೂರ್ಣಗೊಂಡರೂ ಮೌಲ್ಯಮಾಪನ ಕಾರ್ಯವನ್ನು ಇನ್ನೂ ಪ್ರಾರಂಭಿಸದಿರುವುದು ಎಂತಹ ನಿರ್ಲಕ್ಷ್ಯ? ಮೌಲ್ಯಮಾಪನವನ್ನು ನಡೆಸದ ಮೇಲೆ ಅತಿ ತುರ್ತಾಗಿ ಪರೀಕ್ಷೆಗಳನ್ನು ಏಕೆ ನಡೆಸಲಾಯಿತು. ಕೆಲವು ಬೋರ್ಡಿನ ಪ್ರಾಧ್ಯಾಪಕರು ಈಗಾಗಲೇ ಮೌಲ್ಯಮಾಪನವನ್ನು ಬಹಿಷ್ಕರಿಸಿದ್ದಾರೆ. ಇದರ ಬಗ್ಗೆ ತಮಗೆ ಮಾಹಿತಿ ಇದೆಯೇ? ತಮಗೆ ನೀಡಿರುವ ಮನವಿಯ ಪ್ರತಿಯನ್ನು ನನಗೂ ನೀಡಿದ್ದಾರೆ. ಇದರ ಬಗ್ಗೆ ತಾವು ತೆಗೆದುಕೊಂಡಿರುವ ನಿರ್ಧಾರವೇನು? ಇದರ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಸಭೆಯನ್ನು ಏಕೆ ಕರೆದಿಲ್ಲ? ಈ ತೊಂದರೆಯ ನಿವಾರಣೆ ಬಗ್ಗೆ ವಿಶ್ವವಿದ್ಯಾನಿಲಯದ ನಿಲುವೇನು ವಿಶ್ವವಿದ್ಯಾನಿಲಯದ ಮೌನಕ್ಕೆ ಕಾರಣವೇನು?

ಅಂತಿಮ ವರ್ಷದ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸ ಅಥವಾ ಉದ್ಯೋಗದ ಆಸೆಯೊಂದಿಗೆ ತಮ್ಮ ಫಲಿತಾಂಶಕ್ಕಾಗಿ ಇನ್ನೆಷ್ಟು ದಿನ ನಿರೀಕ್ಷಿಸುತ್ತಾ ಕೂರಬೇಕು? ಈ ವಿಳಂಬವು ಅವರ ಭವಿಷ್ಯಕ್ಕೆ ದೊಡ್ಡ ತೊಂದರೆಯನ್ನುಂಟುಮಾಡು ವುದಿಲ್ಲವೇ? ವಿದ್ಯಾರ್ಥಿಗಳಿಗೆ ಒಂದೇ ಒಂದು ಸೆಮಿಸ್ಟರ್ ನ ಅಂಕಪಟ್ಟಿಗಳು ಸಿಕ್ಕಿರುವುದಿಲ್ಲ. ಫಲಿತಾಂಶ ಪ್ರಕಟವಾದರೆ ವಿದ್ಯಾರ್ಥಿಗಳಿಗೆ ಕೆಲವು ವಿಷಯಗಳಲ್ಲಿ ವಿನಾಕಾರಣ ಅನುತ್ತೀರ್ಣ ಅಥವಾ ಕೆಲವು ವಿಷಯಗಳ ಫಲಿತಾಂಶವೇ ಪ್ರಕಟವಾಗಿರುವುದಿಲ್ಲ. ಇದಕ್ಕಾಗಿ ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯವನ್ನು ಅಲೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ; ಇದಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳಿಗೆ ಕೇಳಿದರೆ ಸ್ಟೇಟ್ಮೆಂಟ್ ಆಫ್ ಮಾಕ್ರ್ಸ್ ಕೊಡುವುದನ್ನು ನಿಲ್ಲಿಸಿಯೇ ಬಿಡುತ್ತೇವೆಂದು ಪತ್ರಿಕಾ ಹೇಳಿಕೆ ನೀಡುವಷ್ಟು ಅಧಿಕಾರಿಗಳು ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಯಾವುದೇ ಕ್ರಮವನ್ನು ನಾವು ಸ್ವಾಗತಿಸುತ್ತೇವೆ ಆದರೆ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನಾನುಕೂಲವನ್ನು ನಾವು ಪ್ರತಿಭಟಿಸದೆ ಬಿಡುವುದಿಲ್ಲ.
ಮೌಲ್ಯಮಾಪನದ ಬೋರ್ಡಿನ ಮುಖ್ಯಸ್ಥರು ಡಿಎ ಹಾಗೂ ಟಿಎ ಸಂಭಾವನೆ ಸಂಬಂಧಿತ ವಿಷಯದಲ್ಲಿ ಗೊಂದಲಗಳಿವೆ. ಇತರ ವಿಶ್ವವಿದ್ಯಾನಿಲಯಗಳ ಪರೀಕ್ಷಾ ಶುಲ್ಕದೊಂದಿಗೆ ಹೋಲಿಸಿದರೆ, ನಮ್ಮ ವಿಶ್ವವಿದ್ಯಾನಿಲಯದ ಶುಲ್ಕ ಹೆಚ್ಚಾಗಿರುವುದಲ್ಲದೆ; ಮೌಲ್ಯಮಾಪಕರ ಸಂಭಾವನೆಯನ್ನು ಕಡಿತಗೊಳಿಸಿರುವುದರ ಹಿನ್ನೆಲೆ ಏನು? ಬೇರೆ ಯಾವ ಯಾವ ವಿಶ್ವವಿದ್ಯಾನಿಲಯದಲ್ಲಿ ಮೌಲ್ಯಮಾಪನದ ಸಂಭಾವನೆಯನ್ನು ಕಡಿತಗೊಳಿಸಿದ್ದಾರೆ? ಮೌಲ್ಯಮಾಪನಕ್ಕೆ ಸಂಬಂಧಪಟ್ಟ ಬೋರ್ಡಿನ ಮುಖ್ಯಸ್ಥರು ಮೌಲ್ಯಮಾಪನದ ಕೊ-ಆರ್ಡಿನೇಟರ್ ಗಳು ಮೌಲ್ಯಮಾಪನದ ಕುಲಸಚಿವರು ಮೌಲ್ಯಮಾಪನದ ತಾಂತ್ರಿಕ ಮುಖ್ಯಸ್ಥರು ಇವರೆಲ್ಲರ ಸಂಭಾವನೆಯೂ ಕಡಿಮೆಯಾಗಿದೆಯೇ ಅಥವಾ ಕೇವಲ ಮೌಲ್ಯಮಾಪಕರ ಸಂಭಾವನೆ ಕಡಿತಗೊಳಿಸಲಾಗಿದೆಯೇ? ಡಿಜಿಟಲ್ ಮೌಲ್ಯಮಾಪನವು ಕೇವಲ ಪದವಿ ಪರೀಕ್ಷೆಗಳಿಗೆ ಸೀಮಿತವಾಗಿರುವುದು ಏಕೆ? ಪೋಸ್ಟ್ ಗ್ರಾಜುಯೇಷನ್ ಕೋರ್ಸ್ ಗಳಿಗೆ ಡಿಜಿಟಲ್ ಮೌಲ್ಯಮಾಪನವನ್ನು ಏಕೆ ಅಳವಡಿಸಿಲ್ಲ? ಪರಿಷ್ಕೃತ ಸಂಭಾವನೆಯನ್ನು ಅವರಿಗೂ ಅಳವಡಿಸಲಾಗಿದೆಯೇ?

ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆಯನ್ನು ಜಾರಿಗೊಳಿಸಿ, ಮೌಲ್ಯಮಾಪಕರಿಗೆ ಎಲ್ಲೆಂದರಲ್ಲಿ ಮತ್ತು ಯಾವಾಗ ಬೇಕಾದರೂ ಮೌಲ್ಯಮಾಪನ ಮಾಡಲು ಅವಕಾಶ ನೀಡಿರುವುದರಿಂದ ಮೌಲ್ಯಮಾಪನದ ಗುಣಮಟ್ಟ, ಗೌಪ್ಯತೆ ಹಾಗೂ ಶ್ರೇಷ್ಠತೆ ಮೇಲೆ ಯಾವುದೇ ಹಾನಿಯಾಗುವುದಿಲ್ಲವೇ? ಈ ರೀತಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವ ಇತರ ವಿಶ್ವವಿದ್ಯಾನಿಲಯಗಳ ಉದಾಹರಣೆಗಳನ್ನು ನೀಡಲು ಸಾಧ್ಯವೇ? ಉದಾಹರಣೆಗೆ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಲ್ಲಿ ಇಂಜಿನಿಯರಿಂಗ್ ಪಠ್ಯ ವಿಷಯಗಳ ಮೌಲ್ಯಮಾಪನವನ್ನು ಶಿಕ್ಷಣ ಕ್ಷೇತ್ರದ ಪರಿಣಿತರನ್ನು ಮೌಲ್ಯಮಾಪನ ಕೇಂದ್ರಗಳಿಗೆ ಕರೆಯುವ ಮೂಲಕ ನೇರವಾಗಿ ನಡೆಸಲಾಗುತ್ತಿದೆ. ಈ ವೇಳೆ, ಮೌಲ್ಯಮಾಪನ ಕೇಂದ್ರಗಳನ್ನೇ ನಿರ್ಲಕ್ಷ್ಯ ಮಾಡಿ ಎಲ್ಲೆಂದರಲ್ಲಿ ಮೌಲ್ಯಮಾಪನ ಮಾಡುವ ನಿಮ್ಮ ಹೊಸ ಕ್ರಮವು ನ್ಯಾಯಸಮ್ಮತವಾಗಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತಿದೆ.
ಇವೆಲ್ಲ ಪ್ರಶ್ನೆಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ವಿಶ್ವವಿದ್ಯಾನಿಲಯದ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕೇಳುತ್ತಿರುವೆ ಎಂದು ಮನಗಂಡು ಸಮರ್ಪಕ ಉತ್ತರ ನೀಡುವಂತೆ ವಿನಂತಿಸುತ್ತೇನೆ. ತಾವುಗಳು ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳನ್ನು ಅರ್ಥ ಮಾಡಿಕೊಂಡು ಆದಷ್ಟು ಬೇಗ ತ್ವರಿತ ಗತಿಯಲ್ಲಿ ಮೌಲ್ಯಮಾಪನವನ್ನು ಪ್ರಾರಂಭಿಸಿ ಫಲಿತಾಂಶವನ್ನು ನೀಡಬೇಕೆಂದು ಡಿ.ಎಸ್. ಅರುಣ್ ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: D S ArunKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempu UniversityLatestNewsKannadaLocalNewsMalnadNewsNews_in_KannadaNews_KannadaShimogaShivamoggaShivamoggaNewsಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಬಿ.ಪಿ. ವೀರಭದ್ರಪ್ಪಡಿ.ಎಸ್. ಅರುಣ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

‘ವಿಧಿ’ಯಾಟದ ವಿರುದ್ಧ ‘ಪ್ರೀತಿ’ಯ ಹೋರಾಟ; ಬರ್ತಿದೆ ಹೊಚ್ಚ ಹೊಸ ಧಾರಾವಾಹಿ ‘ಕರ್ಣ’ ಜೀ಼ ಕನ್ನಡ ವಾಹಿನಿಯಲ್ಲಿ!

Next Post

ವ್ಯಕ್ತಿತ್ವ ವಿಕಸನಕ್ಕೆ ವಿದ್ಯಾರ್ಥಿ ಜೀವನ ಪರಿಣಾಮಕಾರಿ: ನ್ಯಾ. ಸಂತೋಷ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವ್ಯಕ್ತಿತ್ವ ವಿಕಸನಕ್ಕೆ ವಿದ್ಯಾರ್ಥಿ ಜೀವನ ಪರಿಣಾಮಕಾರಿ: ನ್ಯಾ. ಸಂತೋಷ್ ಅಭಿಪ್ರಾಯ

ವ್ಯಕ್ತಿತ್ವ ವಿಕಸನಕ್ಕೆ ವಿದ್ಯಾರ್ಥಿ ಜೀವನ ಪರಿಣಾಮಕಾರಿ: ನ್ಯಾ. ಸಂತೋಷ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
South Western Railway Gears Up for Safe Monsoon Operations

ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

June 22, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
MODEL DEMOCRACY AT KRCS

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

June 22, 2026
ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL