ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಂತಿನಗರ ಮತ್ತು ನಾಗರತ್ನಮ್ಮ ಬಡಾವಣೆಯಲ್ಲಿ ನೂತನ ಅಂಗನವಾಡಿ ಕಟ್ಟಡ ಹಾಗೂ 40 ಲಕ್ಷ ರೂ.ಗಳ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಈಶ್ವರಪ್ಪ MLA Eshwarappa ಗುದ್ದಲಿ ಪೂಜೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಶಾಂತಿನಗರದಲ್ಲಿ ಗ್ರಂಥಾಲಯ ನಿರ್ಮಾಣ ಮಾಡಲು ಜಾಗ ಮಂಜುರಾತಿ ಪತ್ರವನ್ನು ಶಾಸಕರು ಗ್ರಂಥಾಲಯ ಅಧಿಕಾರಿಗಳಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಮಹಾಪೌರರಾದ ಶಿವಕುಮಾರ್, ಸೂಡಾ ಅಧ್ಯಕ್ಷ ನಾಗರಾಜ್, ಪಾಲಿಕೆ ಸದಸ್ಯರು ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಧೀರರಾಜ್ ಹೊನ್ನವಿಲೆ, ಪಾಲಿಕೆ ಸದಸ್ಯರಾದ ವಿಶ್ವನಾಥ್, ಸಿಡಿಪಿಒ ಚಂದ್ರಪ್ಪ, ಶಕ್ತಿ ಕೇಂದ್ರದ ಅಧ್ಯಕ್ಷ ಗಾರೆ ನಾಗಣ್ಣ, ಪ್ರಧಾನ ಕಾರ್ಯದರ್ಶಿ ಬಸವರಾಜ್, ವಾರ್ಡ್ ಅಧ್ಯಕ್ಷ ನಾಗರಾಜ್, ಹರೀಶ್, ಸರ್ವೇಯರ್ ಗೋವಿಂದಪ್ಪ, ಗ್ರಾಮ ಲೆಕ್ಕಾಧಿಕಾರಿ ಹಾಲೇಶ್, ಅಂಗನವಾಡಿ ಕಾರ್ಯಕರ್ತೆಯರಾದ ಅರ್ಶಿನ್ ತಾಜ್, ಇಂದಿರಾ ಪ್ರಿಯದರ್ಶಿನಿ, ಕುಸುಮಾ, ಸುಮಾ, ಸ್ಥಳೀಯ ಮುಖಂಡರಾದ ಜಯದೇವಪ್ಪ, ಶ್ರೀಧರ್, ಜಗದೀಶ್, ಬಸವರಾಜ್, ಪ್ರಸಾದ್, ಕೃಷ್ಣಮೂರ್ತಿ ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
Also read: ಕೂಡಲೇ ಗಣಿಗಾರಿಕೆ ನಿಲ್ಲಿಸಿ: ಗ್ರಾಮಸಭೆಯಲ್ಲಿ ಬಸ್ತಿಕೊಪ್ಪ ಗ್ರಾಮಸ್ಥರ ಆಗ್ರಹ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post