No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮತಾಂಧರ ಚಟುವಟಿಕೆಗಳನ್ನು ಸಮರ್ಪಕವಾಗಿ ಹತ್ತಿಕ್ಕುವಲ್ಲಿ ಮೋದಿ ಸರ್ಕಾರ ಯಶಸ್ವಿ: ಶಾಸಕ ಈಶ್ವರಪ್ಪ

kalpa News by kalpa News
October 8, 2022
in ಶಿವಮೊಗ್ಗ
0
ಮತಾಂಧರ ಚಟುವಟಿಕೆಗಳನ್ನು ಸಮರ್ಪಕವಾಗಿ ಹತ್ತಿಕ್ಕುವಲ್ಲಿ ಮೋದಿ ಸರ್ಕಾರ ಯಶಸ್ವಿ: ಶಾಸಕ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಶಿವಮೊಗ್ಗ ನಗರದ ಸ್ಮಾರ್ಟ್‌ಸಿಟಿ ಹಾಗೂ ಸ್ವಚ್ಛತೆ ವಿಚಾರದಲ್ಲಿ ಆಗಿರುವ ಕೆಲಸದ ಬಗ್ಗೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ MLA Eshwarappa ಸಂತಸ ವ್ಯಕ್ತಪಡಿಸಿ ಇದರಲ್ಲಿ ಅಧಿಕಾರಿಗಳು, ನೌಕರರು, ಹಾಗೂ ಅಷ್ಟೇ ಪ್ರಮಾಣದಲ್ಲಿ ಶಿವಮೊಗ್ಗ ನಗರದ ನಾಗರೀಕರು ಸ್ಪಂದಿಸಿದ್ದಾರೆ ಎಂದು ಹೇಳಿದರು.

ಅವರು ಇಂದು ಬೆಳಗ್ಗೆ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಈಗ ನಡೆಯುತ್ತಿರುವ ಅಂದರೆ ಇನ್ನೂ ಮುಕ್ತಾಯವಾಗದ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಬಗ್ಗೆ ಆಕ್ಷೇಪ ಬರುತ್ತಿದೆ. ಸಂಪೂರ್ಣವಾಗಿ ಮುಗಿದಿರುವ ಸ್ಮಾರ್ಟ್‌ಸಿಟಿ ಕಾಮಗಾರಿಯಲ್ಲಿ ಯಾವುದಾದರೂ ಲೋಪವಿದ್ದರೆ ಶಿವಮೊಗ್ಗ ಜನ ನೇರವಾಗಿ ನನ್ನನ್ನು ಸಂಪರ್ಕಿಸಿ. ನಾನು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರೊಂದಿಗೆ ಅಲ್ಲಿಗೆ ಬರುತ್ತೇನೆ. ಆ ಸಮಸ್ಯೆಯನ್ನು ಸರಿಪಡಿಸಲು ಸೂಚಿಸುತ್ತೇನೆ. ಗುತ್ತಿಗೆದಾರರಿಗೆ ಇನ್ನೂ ಸಂಪೂರ್ಣ ಹಣ ನೀಡಿಲ್ಲ ಎಂದು ಹೇಳಿದರು.
ವಿದ್ಯುತ್, ನೀರು ಹಾಗೂ ರಸ್ತೆ ಕಾಮಗಾರಿಗಳು ಬೇರೆ ವಿಭಾಗದಿಂದ ನಡೆಯಬೇಕಾಗಿರುವುದರಿಂದ ಅಲ್ಲಿ ಸಮನ್ವಯತೆ ಕಷ್ಟ. ಕೆಲವು ಇಲಾಖೆಗಳಲ್ಲಿ ಅನುಮತಿ ಪಡೆಯುವುದರಲ್ಲಿ ತುಂಬಾ ಸಮಯ ಬೇಕಾಗುತ್ತದೆ ಎಂದರು.

ಸ್ವಚ್ಛತೆ ವಿಚಾರದಲ್ಲಿ ದೇಶದಲ್ಲೆ ಉನ್ನತ ಸ್ಥಾನ ಪಡೆದಿರುವುದು ಹಾಗೂ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುವುದು ಗಮನಿಸಿದ್ದೀರಿ. ಅತಿಹೆಚ್ಚಾಗಿ ಬೆಳೆಯುತ್ತಿರುವ ಶಿವಮೊಗ್ಗ ನಗರದ ನಾಗರೀಕರ ಸೌಕರ್ಯಗಳನ್ನು ಸರಿಪಡಿಸುವಷ್ಟು ಪೌರಕಾರ್ಮಿಕರನ್ನು ನೇಮಿಸಿಕೊಂಡಿಲ್ಲ. ಇದು ರಾಜ್ಯದ ಸಮಸ್ಯೆ, ಯಂತ್ರಗಳನ್ನು ಹಾಗೂ ವಾಹನಗಳನ್ನು ಬಳಸುವ ಮೂಲಕ ಸರಿಪಡಿಸುವ ಕೆಲಸವಾಗುತ್ತಿದೆ. ಮನೆ-ಮನೆ ಕಸ ಸಂಗ್ರಹದಲ್ಲಿ ನಾಗರೀಕರ ಸ್ಪಂದನೆ ಗಮನೀಯವಾದುದು ಅವರಿಗೆ ಅಭಿನಂದನೆಗಳು ಎಂದರು.
ಭಾರತ ವಿಶ್ವಗುರುವಾಗುವ ದಿನ ಬಂದಿದೆ. ಇಡೀ ವಿಶ್ವ ನಮ್ಮತ್ತ ನೋಡುತ್ತಿದೆ. ನೈತಿಕತೆ, ಧಾರ್ಮಿಕತೆ ನೆಲೆಯಲ್ಲಿ ಮೋದಿ ಅವರ ನೇತೃತ್ವದ ಸರ್ಕಾರ ಮತಾಂದರ ಚಟುವಟಿಕೆಗಳನ್ನು ಸಮರ್ಪಕವಾಗಿ ಹತ್ತಿಕ್ಕುತ್ತಿದೆ. ಇದು ವಿಶ್ವದಲ್ಲೇ ಮಾದರಿ ಎಂದರು.

ಮುಸ್ಲಿಂ ಹಿರಿಯರಿಗೆ ಈಗಲೂ ಹೇಳುತ್ತಿದ್ದೇನೆ. ನಿಮ್ಮ ನಿಮ್ಮ ಮಕ್ಕಳನ್ನು ಪಿಎಫ್‌ಐನಂತಹ ಸಂಘಟನೆಗಳ ಜೊತೆ ಸೇರಲು ಬಿಡಬೇಡಿ. ಇದರಿಂದ ನಿಮ್ಮ ಕುಟುಂಬಕ್ಕೆ, ಜಿಲ್ಲೆಗೆ, ರಾಜ್ಯಕ್ಕೆ ದೇಶಕ್ಕೆ ದೊಡ್ಡ ದ್ರೋಹವಾಗುತ್ತದೆ. ಅವರನ್ನು ಸರಿಯಾಗಿ ಬೆಳಸಿ. ಶಿವಮೊಗ್ಗದಲ್ಲಿ ಇಂತಹ ಗಲಭೆಗಳನ್ನು ಸಮರ್ಪಕವಾಗಿ ಹತ್ತಿಕ್ಕಿದ ಪೊಲೀಸರಿಗೆ ಅಭಿನಂದನೆಗಳು.
-ಈಶ್ವರಪ್ಪ, ಶಾಸಕರು.     

Also read: ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಶಿವಮೊಗ್ಗದಲ್ಲಿ ಸ್ಥಾಪಿಸಿ: ಶಾಸಕ ಡಿ.ಎಸ್. ಅರುಣ್ ಮನವಿ

ಪಂಚಮಸಾಲಿ, ಕುರುಬ ಸಮಾಜ ಸೇರಿದಂತೆ ಮೀಸಲಾತಿಯ ಬಗ್ಗೆ ಕೇಳಿದ ಎಲ್ಲರ ವರದಿಗಳು ಈಗ ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದ್ದು, ಇದರ ವರದಿ ನಂತರ ನಿರ್ಧಾರ ಕೈಗೊಂಡು ಅನುಕೂಲವನ್ನು ರಾಜ್ಯ ಸರ್ಕಾರ ಮಾಡಿಕೊಡುತ್ತದೆ. ದಲಿತರಿಗೆ ಮೀಸಲಾತಿ ನೀಡಿ, 10 ವರ್ಷಗಳಲ್ಲಿ ಅವರು ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ಎಲ್ಲ ಸಮುದಾಯದ ಸರಿಸಮಕ್ಕೆ ಬರಬೇಕು ಎನ್ನುವುದು ಅಂಬೇಡ್ಕರ್ ಅವರ ಆಸೆಯಾಗಿತ್ತು. ಆದರೆ, ಸ್ವಾತಂತ್ರ ಬಂದು 75 ವರ್ಷವಾದರೂ ಅದು ಈಡೇರಿಲ್ಲ. ಇಂದಿಗೂ ಬಹಳಷ್ಟು ದಲಿತರಿಗೆ ಶಿಕ್ಷಣವಿಲ್ಲ, ಉದ್ಯೋಗವಿಲ್ಲ, ಆಹಾರವಿಲ್ಲ. ಹೀಗಾಗಿ, ಇದನ್ನು ಸಕಾರಗೊಳಿಸುವ ಭಾಗವಾಗಿ ರಾಜ್ಯ ಸರ್ಕಾರ ನಿನ್ನೆ ಮೀಸಲಾತಿ ಹೆಚ್ಚಿಸಿದ್ದು, ಈ ನಿರ್ಧಾರ ಸ್ವಾಗತಾರ್ಹ ಎಂದರು.
ಬರುವ ಅ.30ರಂದು ಕಲಬುರ್ಗಿಯಲ್ಲಿ ನಡೆಯಲಿರುವ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ ನಡೆಯಲಿದೆ. ಶಿವಮೊಗ್ಗದಲ್ಲಿ ಬರುವ ಜನವರಿ ತಿಂಗಳು ಇಂತಹ ಸಮಾವೇಶ ನಡೆಯಲಿದ್ದು, ಸಾರ್ವಜನಿಕ ಸ್ಪಂದನೆಗಾಗಿ ನಡೆಸುತ್ತಿರುವ ಇಂತಹ ಸಮಾವೇಶಗಳು ರಾಜ್ಯವ್ಯಾಪಿ ನಡೆಯುತ್ತವೆ ಎಂದರು.

ಸಂವಾದದಲ್ಲಿ ಟ್ರಸ್ಟ್ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ನೇರಿಗೆ, ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ, ಗೌರವಾಧ್ಯಕ್ಷ ಎಸ್. ಚಂದ್ರಕಾಂತ್ ಉಪಸ್ಥಿತರಿದ್ದರು. ಗೋ.ವಾ.ಮೋಹನ್ ಸರ್ವರನ್ನು ಸ್ವಾಗತಿಸಿ ವಂದಿಸಿದರು.
ಶಿವಮೊಗ್ಗದ ಯಾವೊಬ್ಬ ಹಿಂದೂ ಗೂಂಡಾ ಅಲ್ಲ!
2008ರಿಂದ ಆರಂಭಗೊಂಡ ಹಿಂದೂ-ಮುಸ್ಲಿಂ ಗಲಾಟೆ ವಿಷಯಕ್ಕೆ ಸಂಬಂಧಪಟ್ಟಂತೆ ಯಾವುದೇ ಒಬ್ಬನೇ ಒಬ್ಬ ಹಿಂದೂ ರೌಡಿಯಲ್ಲ, ಗೂಂಡಾ ಅಲ್ಲ. ನಾನು ಮುಸ್ಲಿಂ ಗೂಂಡಾಗಳು ಎಂದು ಪದ ಬಳಸಿದ್ದೇನೆ. ಮುಸ್ಲಿಂರಲ್ಲೂ ರಾಷ್ಟ್ರಭಕ್ತರು, ದೇಶಪ್ರೇಮಿಗಳು, ವಿಚಾರವಂತರೂ ಇದ್ದಾರೆ ಆದರೆ ಕೆಲ ಮುಸ್ಲಿಂ ಗೂಂಡಾಗಳ ವರ್ತನೆ ಹಿಂದೂಗಳ ಕೊಲೆಗೆ ಕಾರಣವಾಗಿತ್ತು. ಹಾಗಾಗೀ ಈ ಪದ ಬಳಸಿದ್ದೇ. ಶಿವಮೊಗ್ಗದಲ್ಲಿ ಆ ಪದವನ್ನು ಹಿಂದೂ ಹಾಗೂ ಕ್ರೈಸ್ತರಿಗೆ ಹೇಗೆ ಬಳಸಲಿ ಅಂತಹ ಯಾವ ಕಾರ್ಯ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMLA EshwarappaNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಶಿವಮೊಗ್ಗದಲ್ಲಿ ಸ್ಥಾಪಿಸಿ: ಶಾಸಕ ಡಿ.ಎಸ್. ಅರುಣ್ ಮನವಿ

Next Post

ಭಾರತೀಯ ವಾಯುಸೇನೆ ದಿನಾಚರಣೆ: ಮಾಜಿ ಸೈನಿಕರಿಗೆ ಶಿವಮೊಗ್ಗದಲ್ಲಿ ಸನ್ಮಾನ

kalpa News

kalpa News

Next Post
ಭಾರತೀಯ ವಾಯುಸೇನೆ ದಿನಾಚರಣೆ: ಮಾಜಿ ಸೈನಿಕರಿಗೆ ಶಿವಮೊಗ್ಗದಲ್ಲಿ ಸನ್ಮಾನ

ಭಾರತೀಯ ವಾಯುಸೇನೆ ದಿನಾಚರಣೆ: ಮಾಜಿ ಸೈನಿಕರಿಗೆ ಶಿವಮೊಗ್ಗದಲ್ಲಿ ಸನ್ಮಾನ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL