ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಪರಿಸರ ವಿಜ್ಞಾನ ವಿಷಯ ಬಹು ಬೇಡಿಕೆಯ ವಿಷಯವಾಗಿದ್ದು, ವಿಷಯದ ಆಳ ಅಧ್ಯಯನ ಮಾಡಿದವರಿಗೆ ವಿಫುಲ ಅವಕಾಶಗಳಿದ್ದು, ತಾವುಗಳು ಸದರಿ ಅವಕಾಶಗಳನ್ನು ಉಪಯೋಗಿಸಿಕೊಂಡು ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ನಾಗರಾಜ್ ಪರಿಸರ ಅಭಿಪ್ರಾಯಪಟ್ಟರು.
ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಪರಿಸರ ವಿಜ್ಞಾನ ವಿಷಯವನ್ನು ಓದಿದ ತಾವುಗಳು ಪರಿಸರ ಸಮತೋಲನ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜೀವನ ಪರ್ಯಂತ ಕಾರ್ಯ ಪ್ರವೃತ್ತರಾಗಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರುಗಳಾದ ಡಾ. ಪುರುಶೋತ್ತಮ್, ಪ್ರೇಮ, ಡಾ. ಮಂಜುನಾಥ್, ಡಾ. ಗಿರಿಜಾ, ಜಯಂತ್ ಬಾಬು ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post