ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ MP B Y Raghavendra ಅವರು 2026-27ನೇ ಸಾಲಿಗೆ ಲೋಕಸಭೆಯ ಅತ್ಯಂತ ಮಹತ್ವದ ಸಾರ್ವಜನಿಕ ಉದ್ಯಮಗಳ ಸಮಿತಿ’ಯ ಸದಸ್ಯರಾಗಿ ಮರುಆಯ್ಕೆಯಾಗಿದ್ದಾರೆ.
ಸತತ ಮೂರನೇ ಬಾರಿಗೆ ಈ ಪ್ರತಿಷ್ಠಿತ ಸಮಿತಿಗೆ ಅವರು ಆಯ್ಕೆಯಾಗಿರುವುದು ವಿಶೇಷವಾಗಿದೆ.
ಈ ಸಮಿತಿಯ ಅಧ್ಯಕ್ಷರಾಗಿ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರೂ ಆಗಿರುವ ಸಂಸದ ಬೈಜಯಂತ ಪಾಂಡಾ ಅವರನ್ನು ನೇಮಕ ಮಾಡಲಾಗಿದೆ.
ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳ ಕಾರ್ಯಕ್ಷಮತೆ, ಹಣಕಾಸು ಶಿಸ್ತು, ಪಾರದರ್ಶಕತೆ ಹಾಗೂ ಆಡಳಿತಾತ್ಮಕ ಸುಧಾರಣೆಗಳನ್ನು ಪರಿಶೀಲಿಸುವ ಪ್ರಮುಖ ವೇದಿಕೆ ಇದಾಗಿದೆ.
ಈ ಸಮಿತಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಮರುನೇಮಕ ಮಾಡಿರುವುದು ಅವರ ಸಂಸದೀಯ ಕಾರ್ಯವೈಖರಿಯ ಮೇಲಿರಿಸಿದ ವಿಶ್ವಾಸದ ಸಂಕೇತವಾಗಿದೆ. ಈ ನೇಮಕಾತಿಯು ರಾಜ್ಯದ ಹಿತಾಸಕ್ತಿಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಸಮರ್ಥವಾಗಿ ಪ್ರತಿಪಾದಿಸಲು ಮತ್ತಷ್ಟು ಸಹಕಾರಿಯಾಗಲಿದೆ.
ತಮ್ಮ ನೇಮಕದ ಕುರಿತು ಪ್ರತಿಕ್ರಿಯಿಸಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಸತತ ಮೂರನೇ ಬಾರಿ ಈ ಮಹತ್ವದ ಸಮಿತಿಗೆ ನನ್ನನ್ನು ಆಯ್ಕೆ ಮಾಡಿ ಜವಾಬ್ದಾರಿ ನೀಡಿದ ನಾಯಕತ್ವಕ್ಕೆ ಕೃತಜ್ಞನಾಗಿದ್ದೇನೆ ಎಂದಿದ್ದಾರೆ.
ನನ್ನ ಮೇಲೆ ಇರಿಸಿರುವ ನಂಬಿಕೆ ಹಾಗೂ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೇನೆ. ಸಾರ್ವಜನಿಕ ಕ್ಷೇತ್ರದ ಸಂಸ್ಥೆಗಳ ಸುಧಾರಣೆ ಹಾಗೂ ಜನಹಿತದ ವಿಚಾರಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಲು ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















