No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೊರೋನ ಸೋಂಕು ನಿಯಂತ್ರಿಸಲು ಲಸಿಕೆ ಪಡೆಯಲು ಸಂಸದ ರಾಘವೇಂದ್ರ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 15, 2021
in Small Bytes, ಶಿವಮೊಗ್ಗ
0
ಶಿವಮೊಗ್ಗವನ್ನು ಮಾದರಿ ಜಿಲ್ಲೆಯಾಗಿಸುವುದೇ ನಮ್ಮ ಗುರಿ: ಸಂಸದ ರಾಘವೇಂದ್ರ

File image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಾರಣಾಂತಿಕ ಕೊರೋನ ಸೋಂಕಿನಿಂದ ರಕ್ಷಣೆ ಪಡೆಯಲು ಲಸಿಕೆ ಪಡೆಯುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಅವರು ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಭಾರತ ಸೇರಿದಂತೆ ಜಗತ್ತಿನ ಅನೇಕ ರಾಷ್ಟ್ರಗಳು ಸಂಕಷ್ಟಕ್ಕೆ ಸಿಲುಕಿವೆ ಮಾತ್ರವಲ್ಲ ಆರ್ಥಿಕವಾಗಿ ನಲುಗಿ ಹೋಗಿವೆ. ಕೆಲವು ರಾಷ್ಟ್ರಗಳು ಅನೇಕ ಸವಾಲುಗಳನ್ನು ಎದುರಿಸಬೇಕಾಗಿರುವುದು ಬೇಸರದ ಸಂಗತಿ ಎಂದರು.

ಇಂತಹ ಸಂದಿಗ್ಧ ಸಂದರ್ಭದಲ್ಲಿ ಅನೇಕ ರಾಷ್ಟ್ರಗಳಲ್ಲಿ ಸೋಂಕನ್ನು ನಿಯಂತ್ರಿಸುವ ಲಸಿಕೆ ಕಂಡುಹಿಡಿಯಲು ಅವಿರತವಾಗಿ ಶ್ರಮಿಸಿದವು. ವಿಶೇಷವಾಗಿ ನಮ್ಮ ದೇಶದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಕಡಿಮೆ ವೆಚ್ಚದ ಔಷಧವನ್ನು ದೇಶದ ಜನತೆಗೆ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಈ ಕಾರ್ಯಕ್ರಮದ ಮೊದಲ ಹಂತವಾಗಿ ದೇಶದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ, ಕೊರೋನ ಸೋಂಕಿನ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಕೊರೋನ ವಾರಿಯರ್ಸ್‌ಗಳಿಗೆ ಈಗಾಗಲೇ ಮೊದಲ ಹಂತದಲ್ಲಿ ಲಸಿಕೆ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಈವರೆಗೆ 14246 ಆರೋಗ್ಯ ಸಿಬ್ಬಂದಿಗಳಿಗೆ ಲಸಿಕೆ ಹಾಕಲಾಗಿದ್ದು ಗುರಿ ಮೀರಿದ ಸಾಧನೆ ಮಾಡಲಾಗಿದೆ ಎಂದರು.
ಕಾರ್ಯಕ್ರಮದ ಎರಡನೇ ಹಂತವಾಗಿ 60ವರ್ಷ ಮೇಲ್ಪಟ್ಟ ಎಲ್ಲರಿಗೂ ಹಾಗೂ ವಿವಿಧ ಕಾಯಿಲೆಗಳಿಂದ ಬಾಧಿತರಾಗಿರುವ 45ವರ್ಷ ಮೇಲ್ಪಟ್ಟವರು ತಮ್ಮ ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯಬಹುದಾಗಿದೆ. ಈ ಲಸಿಕೆಯು ಜಿಲ್ಲೆಯ ಆಯ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಬ್ಯವಿದ್ದು, ಸ್ಥಳದಲ್ಲಿಯೇ ಹೆಸರು ನೋಂದಾಯಿಸಿ ಲಸಿಕೆ ಪಡೆಯಬಹುದಾಗಿದೆ ಎಂದರು.


ಮುಂದಿನ ಕೆಲವೇ ದಿನಗಳಲ್ಲಿ ದೇಶದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಲಸಿಕೆ ತಲುಪಿಸಲು ಯತ್ನಿಸಲಾಗುವುದು. ಜಿಲ್ಲೆಯಲ್ಲಿ ಲಸಿಕೆ ವಿತರಿಸುವಲ್ಲಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಶ್ರಮವನ್ನು ಅವರು ಶ್ಲಾಘಿಸಿದರು.

ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆಗಳಲ್ಲೊಂದಾಗಿರುವ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಯತ್ನಿಸಲಾಗಿದ್ದು, ಈ ಸಂಬಂಧ ಇತ್ತೀಚಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾತಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗಿದ್ದು ಸಚಿವರು ಪೂರಕವಾಗಿ ಸ್ಪಂದಿಸಿರುವುದಾಗಿ ತಿಳಿಸಿದರು.


ಚಿತ್ರದುರ್ಗ – ಶಿವಮೊಗ್ಗ (ರಾ.ಹೆ.13) ಬಾಕಿ ಉಳಿದ ರಸ್ತೆ ನಿರ್ಮಾಣ ಕಾಮಗಾರಿಗೆ 516ಕೋಟಿ, ವಿದ್ಯಾನಗರದ ಬಳಿ ಮೇಲ್ಸೇತುವೆ ನಿರ್ಮಾಣಕ್ಕೆ 44ಕೋಟಿ, ತೀರ್ಥಹಳ್ಳಿ – ಕೊಪ್ಪ – ಶೃಂಗೇರಿ ದ್ವಿಪಥದ ರಸ್ತೆ ನಿರ್ಮಾಣಕ್ಕೆ 96ಕೋಟಿ, ಶಿವಮೊಗ್ಗ ನಗರದ ಬೈಪಾಸ್ ರಸ್ತೆಯ ತುಂಗಾ ನದಿಯ ಸೇತುವೆ ಪಕ್ಕದಲ್ಲಿ ಮತ್ತೊಂದು ಸೇತುವೆ ನಿರ್ಮಾಣಕ್ಕೆ 20ಕೋಟಿ, ನಿಟ್ಟೂರು ಮತ್ತು ಹೊಸನಗರ ಭಾಗದ ಶರಾವತಿ ಹಿನ್ನೀರಿನ ಜೊತೆ ಸಂಪರ್ಕವಿರುವ ಶಿಥಿಲಗೊಂಡಿರುವ ಸೇತುವೆಗಳಿಗೆ ಪರ್ಯಾಯವಾಗಿ 7 ಸೇತುವೆಗಳ ನಿರ್ಮಾಣಕ್ಕೆ 20ಕೋಟಿ, ನಾಗೋಡಿ ಬಳಿಯ ಘಾಟಿ ತಿರುವಿನಲ್ಲಿ ಗೇಬಿಯನ್ ತಡೆಗೋಡೆ ಹಾಗೂ ರಸ್ತೆ ನಿರ್ಮಾಣಕ್ಕೆ 4022ಕೋಟಿ, ಸಾಗರ ನಗರ ವ್ಯಾಪ್ತಿಯಲ್ಲಿ ಚತುಷ್ಫಥ ರಸ್ತೆ ನಿರ್ಮಾಣಕ್ಕೆ 77.19ಕೋಟಿ, ತೀರ್ಥಹಳ್ಳಿ ಪಟ್ಟಣದಲ್ಲಿ ಧ್ವಿಪಥದ ಬೃಹತ್ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಾಣಕ್ಕೆ 55.62ಕೋಟಿ, ರೂ.ಗಳಿಗೆ ಮಂಜೂರಾತಿ ದೊರೆತಿದೆ ಎಂದು ವಿವರಿಸಿದರು.

ವಿಶೇಷವಾಗಿ ಜಿಲ್ಲೆ ಹಾಗೂ ನೆರೆಯ ಜಿಲ್ಲೆಗಳ ರಸ್ತೆ ಸುಗಮ ಸಂಚಾರಕ್ಕಾಗಿ ಕೇಂದ್ರ ಭೂಸಾರಿಗೆ ಮಂತ್ರಾಲಯದಿಂದ ಈಗಾಗಲೇ ಮಂಜೂರಾಗಿ ಮುಕ್ತಾಯ ಹಂತದಲ್ಲಿರುವ ತುಮಕೂರು – ಶಿವಮೊಗ್ಗ, ಚಿತ್ರದುರ್ಗ – ಶಿವಮೊಗ್ಗ ಚತುಷ್ಪಥ ರಸ್ತೆ ಯೋಜನೆಗಳಲ್ಲದೆ ಹೊಸದಾದ 10ಕ್ಕೂ ಹೆಚ್ಚಿನ ಸಹಸ್ರಾರು ಕೋಟಿ ರೂ.ಗಳ ವೆಚ್ಚದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮಂಜೂರಾತಿ ದೊರೆತಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿವೆ ಎಂದರು.


ಸಾಗರದಿಂದ ಮರಕುಟಕವರೆಗಿನ ರಸ್ತೆಯನ್ನು ದ್ವಿಪಥದ ರಸ್ತೆಯನ್ನಾಗಿ ಹೆದ್ದಾರಿ ಮಾನದಂಡಗಳಿಗೆ ಅನುಗುಣವಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್ ತಯಾರಿಸುವ ಕೆಲಸ ಪ್ರಗತಿಯಲ್ಲಿದೆ. ಸಿಗಂಧೂರು ಬಳಿ ಶರಾವತಿ ಹಿನ್ನೀರಿಗೆ ಆಧುನಿಕ ತಂತ್ರಜ್ಞಾನದಿಂದ ಕೂಡಿದ ಕೇಬಲ್ ಅಳವಡಿಸಿ ನಿರ್ಮಾಣ ಮಾಡುವ ವಿನೂತನ ವಿನ್ಯಾಸದ ಆಕರ್ಷಣೀಯ ಸೇತುವೆ ನಿರ್ಮಾಣಕ್ಕಾಗಿ 423.15ಕೋಟಿ, ಶಿವಮೊಗ್ಗ ನಗರದ ಸಂದೇಶ್ ಮೋಟಾರ್ಸ್ ನಿಂದ ಹರಕೆರೆವರೆಗೆ 4ಪಥದ ರಸ್ತೆ ನಿರ್ಮಾಣ ಕಾಮಗಾರಿಗೆ 54.58ಕೋಟಿ ಹಾಗೂ ಬೈಂದೂರು – ರಾಣಿಬೆನ್ನೂರು ರಸ್ತೆಯಲ್ಲಿ ದ್ವಿಪಥದ ರಸ್ತೆ ನಿರ್ಮಾಣ ಕಾಮಗಾರಿಗೆ 310ಕೋಟಿ ರೂ.ಗಳ ಕಾಮಗಾರಿಗೆ ಅನುಮೋದನೆ ದೊರೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜ್ಯೋತಿಪ್ರಕಾಶ್, ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಡಾ.ರಾಜೇಶ್ ಸುರಗೀಹಳ್ಳಿ ಮುಂತಾದವರು ಉಪಸ್ಥಿತರಿದ್ದರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Corona VaccineCorona WarriorsCOVID 19Kannada News WebsiteLatest News KanandaLocal NewsMP BY RaghavendraNational HighwayNirmala SeetharamanShimogaShivamoggaShivamogga NewsVISLಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Previous Post

ಗೂಂಡಾಗಿರಿಗೆ ನಮ್ಮ ಅವಧಿಯಲ್ಲಿ ಅವಕಾಶವಿಲ್ಲ: ಸಿಎಂ ಪುತ್ರ ವಿಜಯೇಂದ್ರ ಎಚ್ಚರಿಕೆ

Next Post

ಈಗ ನಾನು ಕಾಂಗ್ರೆಸ್ ಸದಸ್ಯ ಇದರಲ್ಲಿ ಯಾವುದೇ ಅನುಮಾನ ಬೇಡ: ಮಧು ಬಂಗಾರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಈಗ ನಾನು ಕಾಂಗ್ರೆಸ್ ಸದಸ್ಯ  ಇದರಲ್ಲಿ ಯಾವುದೇ ಅನುಮಾನ ಬೇಡ: ಮಧು ಬಂಗಾರಪ್ಪ

ಈಗ ನಾನು ಕಾಂಗ್ರೆಸ್ ಸದಸ್ಯ ಇದರಲ್ಲಿ ಯಾವುದೇ ಅನುಮಾನ ಬೇಡ: ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL