ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಅಭಯ ನೀಡಿದ್ದಾರೆ.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ನಷ್ಟದಲ್ಲಿದ್ದ ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚುವ ನಿರ್ಧಾರ ಕೈಗೊಂಡಿತ್ತು. ಭದ್ರಾವತಿ ಕಾರ್ಖಾನೆ ಸೇರಿದಂತೆ ಹಲವು ಕಾರ್ಖಾನೆಗಳು ಕೂಡ ಈ ಪಟ್ಟಿಯಲ್ಲಿದ್ದವು. ಆದರೆ ಕೇಂದ್ರ ಉಕ್ಕು ಸಚಿವ ಹಾಗೂ ಗೃಹಸಚಿವರು ರಾಜ್ಯಕ್ಕೆ ಬಂದಾಗ ಕಾರ್ಖಾನೆಯನ್ನು ಮುಚ್ಚದಂತೆ ಮನವಿ ಮಾಡಲಾಗಿತ್ತು. ತಾವೂ ಸಹ ಕೇಂದ್ರದ ಮೇಲೆ ಒತ್ತಡ ತಂದು ಕಾರ್ಖಾನೆಯನ್ನು ಮುಚ್ಚಿದರೆ ಸುಮಾರು 10ಸಾವಿರ ಜನರು ಉದ್ಯೋಗ ಕಳೆದುಕೊಳ್ಳುತ್ತಾರೆ. ಹಾಗಾಗಿ ಮುಚ್ಚಬಾರದು ಎಂದು ಮನವಿ ಮಾಡಿದ್ದೆವು. ಹೀಗಾಗಿ ಕೇಂದ್ರ ಸರ್ಕಾರ ಈಗ ವಿಐಎಸ್ಎಲ್ ಕಾರ್ಖಾನೆಯನ್ನು ಸದ್ಯಕ್ಕೆ ಮುಚ್ಚುವ ನಿರ್ಧಾರದಿಂದ ಹಿಂದಕ್ಕೆ ಸರಿದಿದೆ. ಬೀಸುವ ದೊಣ್ಣೆಯಿಂದ ನಾವು ಪಾರಾಗಿದ್ದೇವೆ ಎಂದರು.

Also read: ಸೈಲ್ ಉನ್ನತ ಮಟ್ಟದ ಸಭೆಗೆ ಆಗಮಿಸಿದ್ದ ಅರಬಿಂದೊ ಮಿತ್ರ ಆಕಸ್ಮಿಕ ಸಾವು
ಶಿಕಾರಿಪುರದಲ್ಲಿ ನಡೆದ ಘಟನೆ ಬೇಸರ ತಂದಿದೆ. ಇದು ಮೀಸಲಾತಿ ಹೋರಾಟದ ನೆಪ ಅಷ್ಟೆ. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಮೀಸಲಾತಿ ವಿಷಯವನ್ನು ಚುನಾವಣೆ ಸಂದರ್ಭದಲ್ಲಿ ಬೇಳೆ ಬೇಯಿಸಿಕೊಳ್ಳಲು ಬಳಸಿಕೊಳ್ಳುತ್ತಿದ್ದಾರೆ. ವಿರೋಧ ಪಕ್ಷದ ಪ್ರಾಯೋಜಕತ್ವದಲ್ಲಿ ಪ್ರತಿಭಟನೆಗೆ ಸಿದ್ಧರಿದ್ದಾರೆ. ಇದು ನಡೆಯುವುದಿಲ್ಲ. ಸಹಿಸಿಕೊಳ್ಳಲು ಆಗದ ಕೆಟ್ಟ ಮನಸ್ಸಿನವರು ನಮ್ಮ ಮನೆಮೇಲೆ ಕಲ್ಲು ಹೊಡೆದಿದ್ದಾರೆ ಎಂದರು.












Discussion about this post