ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ದೇಶಕ್ಕೆ ಸ್ವಾತಂತ್ರ್ಯ ಬಂದಿರುವುದು ಸಂತೋಷದ ದಿನ ಆದರೂ ಕೂಡ, ಒಂದು ದಿನ ಹಿಂದೆ ಅಖಂಡ ಭಾರತ ಭೌಗೊಳಿಕವಾಗಿ ವಿಭಜನೆಗೊಂಡಿತು, ಇದರ ಮಾಹಿತಿ ಜನರಿಗೆ ತಲುಪುವ ಉದ್ದೇಶದಿಂದ ಕೇಂದ್ರದ ವಿವಿಧ ಇಲಾಖೆಯಲ್ಲಿ ದೇಶ ವಿಭಜನೆಯ ಛಾಯಾಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಹೇಳಿದರು.
ಶಿವಮೊಗ್ಗದ ರೈಲ್ವೇ ನಿಲ್ದಾಣದಲ್ಲಿ ದೇಶ ವಿಭಜನೆಯ ಕರಾಳತೆ ಪ್ರತಿಬಿಂಬಿಸುವ ಛಾಯಾಚಿತ್ರ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸಂಘಟನೆಯು ಕೂಡ 14ರಂದು ದೇಶಾದ್ಯಂತ ಮೌನ ಮೆರವಣಿಗೆ ಹಮ್ಮಿಕೊಂಡಿದೆ. ಇನ್ನು 3 ದಿನಗಳ ಕಾಲ ಈ ಪ್ರದರ್ಶನವಿದ್ದು ಸಾರ್ವಜನಿಕರು ವೀಕ್ಷಿಸಿ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ಮನವಿ ಮಾಡಿದರು.
Also read: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಾಯಕ ಶಿವಮೊಗ್ಗ ಸುಬ್ಬಣ್ಣ ವಿಧಿವಶ
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, D S Arun ಬಿಜೆಪಿ ನಗರ ಅಧ್ಯಕ್ಷ ಜಗದೀಶ್, ವಾರ್ತಾ ಇಲಾಖೆಯ ಅಧಿಕಾರಿಗಳು, ರೈಲ್ವೆ ಅಧಿಕಾರಿಗಳು ಮತ್ತಿರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post