ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಬರಿಮಲೈ ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ (SASS) ಜಿಲ್ಲಾ ಘಟಕ ಶಿವಮೊಗ್ಗ, ಶಿವಮೊಗ್ಗ ಜಿಲ್ಲೆ ವತಿಯಿಂದ ಹಮ್ಮಿಕೊಂಡಿದ್ದ ಶಿವಮೊಗ್ಗ ನಗರದ ಪ್ರತಿ ಮನೆ-ಮನೆಯಲ್ಲಿ ಒಂದು ಮುಷ್ಠಿ ಅಕ್ಕಿ ಸಂಗ್ರಹ ಅಭಿಯಾನ ಕಾರ್ಯಕ್ರಮವು ಸಂಪನ್ನಗೊಂಡಿದ್ದು, ಸಾವಿರಾರು ಮನೆಗಳಿಂದ 35 ಸಾವಿರ ಕೆ.ಜಿ. ಅಕ್ಕಿ ಹಾಗೂ ಇತರೆ ಬೆಳೆ, ಬೆಲ್ಲ ಸಮಾಗ್ರಿ ಸೇರಿ 40 ಸಾವಿರ ಕೆ.ಜಿ. ಸಂಗ್ರಹಗೊಂಡಿದೆ.
ಶಿವಮೊಗ್ಗ ನಗರದ ಶುಭಮಂಗಳ ಸಮುದಾಯಭವನದ ಆವರಣದಲ್ಲಿ ಸಂಗ್ರಹ ಅಭಿಯಾನದ ಸಮಾರೋಪ ಸಮಾರಂಭ ನಡೆಯಿತು. ಶಬರಿಮಲೈ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಅನ್ನ ಸಂತರ್ಪಣೆಗೆ 2 ಲಾರಿಗಳಲ್ಲಿ ಅಕ್ಕಿ ಹಾಗೂ ಇತರೆ ಸಾಮಾಗ್ರಿಗಳ ಸಮರ್ಪಿಸಲಾಯಿತು.
ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಅವರ ಅಧ್ಯಕ್ಷತೆಯಲ್ಲಿ, ಅವದೂತ ಶ್ರೀ ವಿನಯ ಗುರೂಜಿ, ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಧರ್ಮದರ್ಶಿ ಭೀಮೇಶ್ವರ ಜೋಷಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.
ಆರ್.ಎಸ್.ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯನಿವಾಹಕ ಪಟ್ಟಾಭಿರಾಮ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ, ರಾಷ್ಟ್ರೀಯ ಅಧ್ಯಕ್ಷ ಶೇಖರ್ ಸ್ವಾಮಿ, ಶಬರಿಮಲೈ ಅಯ್ಯಪ್ಪ ಸ್ವಾಮಿ ಸೇವಾ ಸಮಾಜಂ ರಾಜ್ಯಾಧ್ಯಕ್ಷ ಜಯರಾಂ ಸ್ವಾಮಿ, ರಾಷ್ಟ್ರೀಯ ಅನ್ನದಾನ ಸಮಿತಿ ಕಾರ್ಯದರ್ಶಿ ಕೃಷ್ಣಪ್ಪ ಸ್ವಾಮಿ, ರಾಷ್ಟ್ರೀಯ ಅನ್ನದಾನ ಸಮಿತಿ ಸದಸ್ಯರು ಕೆ.ಈ ಕಾಂತೇಶ್, ಜಿಲ್ಲಾಧ್ಯಕ್ಷರಾದ ಕೆ.ಎಸ್. ಸಂತೋಷ್, ಜಿಲ್ಲಾ ಪ್ರಮುಖರಾದ ಪಿ. ಶಂಕರ್, ಎ. ಶಿವಕುಮಾರ್, ಜಿ. ಮಂಜುನಾಥ್, ಪ್ರದೀಪ್ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post