No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಪಿಇಎಸ್’ಐಟಿಎಂ ವಿದ್ಯಾಸಂಸ್ಥೆಗೆ ನ್ಯಾಕ್ `A’ ಗ್ರೇಡ್ ಮಾನ್ಯತೆ

ಮಲೆನಾಡಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗೆ ಮತ್ತೊಂದು ಗೌರವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 28, 2023
in ಶಿವಮೊಗ್ಗ
0
ಮಾರ್ಚ್ 9: ಪಿಇಎಸ್ ಕಾಲೇಜಿನಲ್ಲಿ ಟೊಯೋಟಾ ಕಿರ್ಲೋಸ್ಕರ್’ನಿಂದ ಉದ್ಯೋಗಕ್ಕೆ ಸಂದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಮಲೆನಾಡಿನ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಾ ರಾಜ್ಯ ಹಾಗೂ ದೇಶಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಿರುವ ಪ್ರತಿಷ್ಠಿತ ಪಿಇಎಸ್’ಐಟಿಎಂ ವಿದ್ಯಾಸಂಸ್ಥೆಗೆ PESITM Institution ನ್ಯಾಕ್ ಸಂಸ್ಥೆಯಿಂದ `A’ ಗ್ರೇಡ್ ಮಾನ್ಯತೆ ನೀಡಿದೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್(ಯುಜಿಸಿ)ನ ನ್ಯಾಷನಲ್ ಅಸೆಸ್ಮೆಂಟ್ ಅಂಡ್ ಅಕ್ರಿಡಿಟೇಷನ್ ಕೌನ್ಸಿಲ್(ನ್ಯಾಕ್) ಈ ಮೊದಲು ಪಿಇಎಸ್’ಐಟಿಎಂ ವಿದ್ಯಾಸಂಸ್ಥೆಗೆ ಶ್ರೇಷ್ಠ ಗುಣಮಟ್ಟವನ್ನು ಪರಿಶೀಲಿಸಿ B++ ಮಾನ್ಯತೆ ನೀಡಿತ್ತು.
ಆದರೆ, ಈ ಮಾನ್ಯತೆಯನ್ನು ವಿದ್ಯಾಸಂಸ್ಥೆ ಪ್ರಶ್ನಿಸಿತ್ತು. ಆನಂತರ ಮತ್ತೆ ನಡೆದ ಗುಣಮಟ್ಟ ಪರಿಶೀಲನಾ ಪ್ರಕ್ರಿಯೆಯಲ್ಲಿ ಜಯ ಸಾಧಿಸಿ `A` ಗ್ರೇಡ್ ಮಾನ್ಯತೆ ಪಡೆಯುವಲ್ಲಿ ಸಫಲವಾಗಿದೆ.

Also read: ಡಿಸಿಸಿ ಬ್ಯಾಂಕ್ ನಿರ್ದೇಶಕರ ಅವಿಶ್ವಾಸ ನಿರ್ಣಯ: ಪ್ರಭಾರ ಅಧ್ಯಕ್ಷರಾಗಿ ಹೆಚ್.ಎಲ್. ಷಡಕ್ಷರಿ ಆಯ್ಕೆ

ಪಿಇಎಸ್’ಐಟಿಎಂ ಶಿಕ್ಷಣ ಸಂಸ್ಥೆಗೆ ನೀಡಿರುವ `ಎ’ ಗ್ರೇಡ್ ಮಾನ್ಯತೆಯಿಂದ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಉನ್ನತವಾಗಲಿದೆ. ಮೌಲ್ಯಾಧಾರಿತ ಶಿಕ್ಷಣವನ್ನು ಪಡೆಯುವಲ್ಲಿ ಪೂರಕವಾಗುವ ಪರಿಸರವನ್ನು ನಿರ್ಮಿಸುವಲ್ಲಿ ಮತ್ತು ವಿದ್ಯಾರ್ಥಿ ಸಮೂಹದ ಜ್ಞಾನಾರ್ಜನೆ, ಪ್ರಾಯೋಗಿಕ ಕೌಶಲ್ಯಗಳನ್ನು ಆಮೂಲಾಗ್ರವಾಗಿ ವೃದ್ಧಿಸುವಲ್ಲಿ ಈ ಮಾನ್ಯತೆ ಸಹಕಾರಿಯಾಗಲಿದೆ.
ಇನ್ನು, ಈ ಮಾನ್ಯತೆಯು ಪಿಇಎಸ್ ವಿದ್ಯಾಸಂಸ್ಥೆಯಲ್ಲಿ ಪ್ರಸ್ತುತ ಇರುವ ಅದ್ವಿತೀಯ ಬೋಧನಾ ಹಾಗೂ ಕಲಿಕಾ ಗುಣಮಟ್ಟ, ಸಂಶೋಧನಾ ಕ್ಷೇತ್ರದಲ್ಲಿ ಜರುಗುತ್ತಿರುವ ಪ್ರಯತ್ನಗಳ ಪ್ರಸ್ತುತತೆಯನ್ನು ಗುರುತಿಸುವಲ್ಲಿ ಹಾಗೂ ತನ್ಮೂಲಕ ವಿದ್ಯಾರ್ಥಿ ಸಮೂಹವು ಅಸಾಧಾರಣ ಸಂಶೋಧನೆಗಳನ್ನು ಕೊಡುಗೆಗಳಾಗಿ ನೀಡಿ ಮಾನವ ಸಮಾಜದ ಏಳ್ಗೆಗೆ ಶ್ರಮಿಸುವಲ್ಲಿ ಭದ್ರಬುನಾದಿಯನ್ನು ಸೃಷ್ಟಿಸಲಿದೆ. ಪ್ರತಿಷ್ಠಿತ ಕಂಪನಿಗಳಲ್ಲಿ ನೇಮಕಾತಿಗಳ ಸಂಖ್ಯೆ ಹೆಚ್ಚುವಲ್ಲಿ ನ್ಯಾಕ್ ನೀಡಿರುವ ಈ ಮಾನ್ಯತೆಯು ಒಂದು ಭದ್ರಅಡಿಪಾಯವಾಗಿ ರೂಪಿತವಾಗಲಿದೆ ಎನ್ನುವುದರಲ್ಲಿ ಯಾವುದೇ ಸಂದೇಹವಿಲ್ಲ.

ಈ ಕಾರ್ಯದಲ್ಲಿ ಸರ್ವತೋಮುಖ ಸಹಕಾರವನ್ನು ನೀಡಿದ ವಿದ್ಯಾಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ಬೋಧಕ ಬೋಧಕೇತರ ಸಿಬ್ಬಂದಿ ಎಲ್ಲರನ್ನು ಆಡಳಿತ ಮಂಡಳಿ, ಪ್ರಾಚಾರ್ಯ ಡಾ. ಎಂ.ವಿ. ಚೈತನ್ಯ ಕುಮಾರ್ ಹಾಗೂ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ಆರ್. ನಾಗರಾಜ ತುಂಬು ಹೃದಯದಿಂದ ಅಭಿನಂದಿಸಿದ್ದಾರೆ.
ಮಲೆನಾಡಿನ ಹೆಮ್ಮೆ ಪಿಇಎಸ್ ಶಿಕ್ಷಣ ಸಂಸ್ಥೆ
ಮೌಲ್ಯಾಧಾರಿತ ಶಿಕ್ಷಣವನ್ನು ಮಾನವ ಸಮಾಜದ ಎಲ್ಲಾ ಸ್ತರಗಳ ಜನರಿಗೆ ತಲುಪಿಸುವಲ್ಲಿ ಹಾಗೂ ಈ ಮೂಲಕ ಜೀವನಮಟ್ಟವನ್ನು ಸುಧಾರಿಸುವಲ್ಲಿ ಅನುಕೂಲಕರವಾಗುವಂತೆ ಡಾ.ಎಂ.ಆರ್. ದೊರೈಸ್ವಾಮಿ ಮತ್ತು ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಇವರುಗಳ ಸಾಂಘಿಕ ಪ್ರಯತ್ನದ ಫಲಶ್ರುತಿಯಾಗಿ ಶಿವಮೊಗ್ಗ ನಗರದಲ್ಲಿ 2006ರಲ್ಲಿ ಪ್ರೇರಣಾ ಶೈಕ್ಷಣಿಕ ಮತ್ತು ಸಾಮಾಜಿಕ ಟ್ರಸ್ಟ್ ಎಂಬ ಸಂಸ್ಥೆಯನ್ನು ಸ್ಥಾಪಿಸಲಾಯಿತು. ಈ ಸಂಸ್ಥೆಯ ಅಡಿಯಲ್ಲಿ ಮಲೆನಾಡು ಭಾಗದ ವಿದ್ಯಾರ್ಥಿ ಸಮೂಹವು ತಾಂತ್ರಿಕ ಶಿಕ್ಷಣವನ್ನು ಪಡೆಯುವ ಸದವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ 2007ನೆಯ ಇಸವಿಯಲ್ಲಿ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಎಂಬ ತಾಂತ್ರಿಕ ಶಿಕ್ಷಣ ಸಂಸ್ಥೆಯನ್ನು ಶಿವಮೊಗ್ಗ ನಗರದಲ್ಲಿ ಲೋಕಾರ್ಪಣೆ ಮಾಡಲಾಯಿತು.

ಕರ್ನಾಟಕ ರಾಜ್ಯದ ಮಲೆನಾಡು ವಿಭಾಗದ ವಿದ್ಯಾರ್ಥಿ ಸಮೂಹಕ್ಕೆ ಅತ್ಯುತ್ತಮ ಮಟ್ಟದಲ್ಲಿ ತಾಂತ್ರಿಕ ಶಿಕ್ಷವನ್ನು ನೀಡುವ ಸದುದ್ದೇಶದಿಂದ ಸ್ಥಾಪಿತವಾದ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಇನ್ಫರ್ಮೇಷನ್ ಸೈನ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್, ಕಮ್ಯುನಿಕೇಶನ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಸಿವಿಲ್‌ಇಂಜಿನಿಯರಿಂಗ್, ಆರ್ಟಿಫಿಶಿಯಲ್ ಇಂಟಿಲಿಜನ್ಸ್ ಮತ್ತು ಮಷೀನ್ ಲರ್ನಿಂಗ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, (ಡೇಟಾಸೈನ್ಸ್); ಕಂಪ್ಯೂಟರ್ ಸೈನ್ಸ್ ಮತ್ತು ಡಿಸೈನ್ ಹಾಗೂ ಕಂಪ್ಯೂಟರ್ ಇಂಜಿನಿಯರಿಂಗ್ ವಿವಿಧ ಇಂಜಿನಿಯರಿಂಗ್ ಕೋರ್ಸ್’ಗಳ ಜೊತೆಜೊತೆಗೆ ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇನ್, ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ ಎಂಬ ಪಿಜಿ ಕೋರ್ಸ್ ಸಹ ಉಪಲಬ್ಧವಿದೆ.
ವಿದ್ಯಾರ್ಥಿಗಳಲ್ಲಿ ತಾಂತ್ರಿಕ ಹಾಗೂ ಸ್ಪರ್ಧಾತ್ಮಕ ಜಗತ್ತಿನ ಅವಶ್ಯಕತೆಗಳನ್ನು ಈಡೇರಿಸುವಲ್ಲಿ ಪೂರಕವಾಗಿ ಅತ್ಯವಶ್ಯವಿರುವ ಕಲಾಕೌಶಲ್ಯತೆ ಹಾಗೂ ತಾಂತ್ರಿಕ ಚಾಕಚಕ್ಯತೆಗಳನ್ನು ಮೂಡಿಸಿ ವೃದ್ಧಿಸುವಲ್ಲಿ ತನ್ನದೇ ಆದ ವಿನೂತನ ಮಾದರಿಗಳನ್ನು ಪ್ರಾಯೋಗಿಕ ವಾಗಿ ಪ್ರಚುರಪಡಿಸುವಲ್ಲಿ ಪಿಇಎಸ್’ಐಟಿಎಂ ಸದಾ ಕಾಲ ಶ್ರಮಿಸುತ್ತಿದೆ ಎಂಬುದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ.

http://kalpa.news/wp-content/uploads/2023/05/VID-20230516-WA0005.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaPESITM InstitutionShimogaShivamoggaNewsಪಿಇಎಸ್'ಐಟಿಎಂ ವಿದ್ಯಾಸಂಸ್ಥೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share216Tweet123Send
Previous Post

ಡಿಸಿಸಿ ಬ್ಯಾಂಕ್ ನಿರ್ದೇಶಕರ ಅವಿಶ್ವಾಸ ನಿರ್ಣಯ: ಪ್ರಭಾರ ಅಧ್ಯಕ್ಷರಾಗಿ ಹೆಚ್.ಎಲ್. ಷಡಕ್ಷರಿ ಆಯ್ಕೆ

Next Post

ಕುವೆಂಪು ವಿವಿ ಬಿಎ ಪದವಿಯಲ್ಲಿ ಭದ್ರಾವತಿಯ ಪುಷ್ಪಾ ಅವರಿಗೆ ಪ್ರಥಮ ರ‍್ಯಾಂಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕುವೆಂಪು ವಿವಿ ಬಿಎ ಪದವಿಯಲ್ಲಿ ಭದ್ರಾವತಿಯ ಪುಷ್ಪಾ ಅವರಿಗೆ ಪ್ರಥಮ ರ‍್ಯಾಂಕ್

ಕುವೆಂಪು ವಿವಿ ಬಿಎ ಪದವಿಯಲ್ಲಿ ಭದ್ರಾವತಿಯ ಪುಷ್ಪಾ ಅವರಿಗೆ ಪ್ರಥಮ ರ‍್ಯಾಂಕ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

ಚಿಕ್ಕಮಗಳೂರು-ಯಶವಂತಪುರ, ಬೆಂಗಳೂರು-ಹೊಸಪೇಟೆ ಸೇರಿ ಹಲವು ರೈಲುಗಳ ಬಿಗ್ ಅಪ್ಡೇಟ್

June 2, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL