No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕೃತಿ ಕಲಿಸುವ ಅತ್ಯುತ್ತಮ ಸಂಸ್ಥೆ ನವೋದಯ: ಜಿಲ್ಲಾಧಿಕಾರಿ ಸೆಲ್ವಮಣಿ

ಗಾಜನೂರಿನ ನವೋದಯ ಶಾಲೆಯಲ್ಲಿ ಬೆಳ್ಳಿ ಹಬ್ಬದ ಸಂಭ್ರಮ

kalpa News by kalpa News
December 23, 2023
in ಶಿವಮೊಗ್ಗ
0
ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕೃತಿ ಕಲಿಸುವ ಅತ್ಯುತ್ತಮ ಸಂಸ್ಥೆ ನವೋದಯ: ಜಿಲ್ಲಾಧಿಕಾರಿ ಸೆಲ್ವಮಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ನವೋದಯ ಶಾಲೆಗಳು, ಗ್ರಾಮೀಣ ಭಾಗದ  ವಿದ್ಯಾರ್ಥಿಗಳನ್ನು ಆರಿಸಿ, ಅವರಲ್ಲಿ ಅಡಗಿದ್ದ ಸುಪ್ತ ಪ್ರತಿಭೆ ಗಳನ್ನು ಗುರುತಿಸಿ, ಒಳ್ಳೆಯ ಸಂಸ್ಕೃತಿ ಕಲಿಸಿ, ದೇಶಕ್ಕೆ ಉತ್ತಮ ನಾಗರಿಕರನ್ನಾಗಿಸುವ ಒಂದು ಅತ್ಯುತ್ತಮ ಸಂಸ್ಥೆಯಾಗಿ ಬೆಳೆದಿದೆ ಎಂದು ಜಿಲ್ಲಾಧಿಕಾರಿ ಸೆಲ್ವಮಣಿ ಹೇಳಿದರು.

ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ “ಹಳೆ ವಿದ್ಯಾರ್ಥಿಗಳ ಮಿಲನ” ಮತ್ತು “13ನೇ ಬ್ಯಾಚ್ ವತಿಯಿಂದ ಬೆಳ್ಳಿಹಬ್ಬ ಸಂಭ್ರಮ” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ ರೀತಿಯ ಕಾರ್ಯಕ್ರಮಗಳು ನವೋದಯ ಶಾಲೆಯ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಒಂದು ಸ್ಪೂರ್ತಿ. ಇದರಿಂದ ಮುಂದಿನ ದಿನಗಳಲ್ಲಿ ಯಾವ ಕ್ಷೇತ್ರ ಆರಿಸಿಕೊಂಡರೆ ತಮಗೆ ಉತ್ತಮ ಭವಿಷ್ಯ ಇದೆ ಎಂಬ ಕಲ್ಪನೆ ಬರಲಿದೆ ಎಂದರು.
ಕುವೆಂಪು ವಿವಿ Kuvempu VV ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಮಾತನಾಡಿ, ಮಾನವ ಮತ್ತು ಪರಿಸರ ಒಂದು ಅವಿನಾಭವ ಸಂಬಂಧ ಹೊಂದಿದ್ದು, ಈ ನಿಟ್ಟಿನಲ್ಲಿ ಪರಿಸರವನ್ನು ಪೋಷಿಸಿ ಬೆಳಸುವ ಗುಣ ಮಕ್ಕಳಲ್ಲಿ ಬೆಳೆಯಬೇಕು..ಗಾಜನೂರಿನ ನವೋದಯ ಶಾಲೆ ಪ್ರಕೃತಿಯ ಮಡಿಲಲ್ಲಿ ಇದ್ದು, ಇಲ್ಲಿನ ಮಕ್ಕಳು ಗಿಡಗಳನ್ನು ಬೆಳೆಸಿ, ಪರಿಸರವನ್ನು ಸ್ವಚ್ಛವಾಗಿ ಇಟ್ಟು, ಮುಂದಿನ ಪೀಳಿಗೆಗೆ ಮಾದರಿ ಆಗಲಿ ಎಂದು ಹರಸಿದರು.

ಕಾರ್ಯಕ್ರಮದಲ್ಲಿ  ಜವಾಹಾರ್ ನವೋದಯ ವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ರವಿ, ಉಪ ಪ್ರಾಂಶುಪಾಲ ಜಾನ್ಸನ್ ಪಿ ಜೇಮ್ಸ್ ಅವರುಗಳು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ಗಾಜನೂರು ನವೋದಯದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ವಿದ್ಯಾರ್ಥಿಗಳನ್ನು ಉನ್ನತ ಮಟ್ಟಕ್ಕೆ ಬೆಳೆಯುವುದಕ್ಕೆ ಪ್ರೆರೇಪಿಸಿದ ಹಳೆ ಶಿಕ್ಷಕರ ವೃಂದಕ್ಕೆ, ಅವರ ಕಾರ್ಯವನ್ನು ಶ್ಲಾಘಿಸಿ, ನೆನಪಿನ ಕಾಣಿಕೆ ನೀಡಿ, ಸನ್ಮಾನಿಸಲಾಯಿತು. ಜೊತೆಗೆ ಪ್ರಸಕ್ತ ಸಾಲಿನಲ್ಲಿ ನವೋದಯದಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ಶಿಕ್ಷಕ ಬಳಗ ಮತ್ತು ಇತರೆ ಸಹೋದ್ಯೋಗಿಗಳಿಗೆ ಕೃತಜ್ಞತೆಯ ಸಂಕೇತ ನೀಡಿ, ಅಭಿನಂದನೆಗಳನ್ನು ಸಲ್ಲಿಸಲಾಯಿತು. ನಂತರ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮಗಳು ನಡೆದವು.

ಈ ವರ್ಷದ ಬೆಳ್ಳಿ ಹಬ್ಬವನ್ನು ಆಚರಿಸಿದ 13ನೇ ಬ್ಯಾಚ್ ವಿದ್ಯಾರ್ಥಿಗಳು ತಮ್ಮ ಮೆಚ್ಚಿನ ಶಾಲೆಗೆ 1.10 ಲಕ್ಷ ರೂ ವ್ಯಯಿಸಿ ಎರಡು ಶಾಲಾ ಕೊಠಡಿಗಳಿಗೆ ಚಾವಣಿಯ ಒಳಮೈ (ಸೀಲಿಂಗ್) ನಿರ್ಮಾಣಕ್ಕೆ ಸಹಕರಿಸಿದರು. ಹಳೆ ವಿದ್ಯಾರ್ಥಿಗಳ ಈ ಕೊಡುಗೆಗೆ, ಪ್ರಾಂಶುಪಾಲರಾದ ಜಿ ವಲ್ಲಿಯಮೈ ಅವರು 13ನೇ ಬ್ಯಾಚ್ ಕಾರ್ಯವನ್ನು ಶ್ಲಾಘಿಸಿದರು. ಜೊತೆಗೆ ಬೆಂಗಳೂರಿನ ಖ್ಯಾತ ಪಾದಗಳ ಆರೈಕೆಯ ಸಂಸ್ಥೆಯಾದ – ಆಪ್ಟ್ ಫುಟ್ ಸೆಕ್ಯೂರ್ (Apta Foot Secure) ವತಿಯಿಂದ ಉಚಿತವಾಗಿ ಪಾದಗಳ ತಪಾಸಣೆ, ಅದರ ನಿರ್ವಹಣೆ ಮತ್ತು ಸಮಗ್ರ ಆರೈಕೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

Also read: ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನ: ಪ್ರವೀಣ್ ಉಡುಪ ಅಭಿಪ್ರಾಯ

ಕಾರ್ಯಕ್ರಮದಲ್ಲಿ ನವೋದಯ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕ ವೃಂದದ ವಿ ಎಸ್ ಹೆಗಡೆ, ಮನೋಜ್ ಪವಾಸ್ಕರ್, ರಾಜಕುಮಾರ್ ಕಡೆಮನಿ, ಸುರೇಶ್, ಹಳೆ ವಿದ್ಯಾರ್ಥಿ ಸಂಘ ಮಿಲನದ ಅಧ್ಯಕ್ಷರಾದ ತಾರಾನಾಥ್, ಅರುಣ್ ಕುಮಾರ್, ಡಾ. ಸುನಿಲ್ ಕುಮಾರ್, ಎಂ ಪಿ ನವೀನ್ ಕುಮಾರ್, ಪ್ರಕಾಶ್ ಜೋಯ್ಸ್  ಮತ್ತು ಗಾಜನೂರು ನವೋದಯ ಶಾಲೆಯ ಹಳೆ ವಿದ್ಯಾರ್ಥಿಗಳು ಹಾಜರಿದ್ದರು.
ಕಾರ್ಯಕ್ರಮ ಯಶಸ್ವಿಯಾಗಲು ಮಿಲನ ತಂಡದವರ ಜೊತೆಗೆ ಸಹಕರಿಸಿದ13ನೆ ಬ್ಯಾಚ್ ನ ವಿದ್ಯಾರ್ಥಿಗಳಾದ ಪ್ರದೀಪ್, ವಿಶ್ವಚೇತನ, ಹನುಮಂತ, ಪ್ರಜ್ವಲ್ ಜೈನ್, ರಶ್ಮಿ ಬಿ.ಕೆ, ಗಣೇಶ್ ಹಾಗೂ ಶ್ವೇತ ಮತ್ತಿತರರಿಗೆ ಅಭಿನಂದನೆ ಸಲ್ಲಿಸಲಾಯಿತು.

ಗಾಜನೂರು ಹಳೆ ನವೋದಯ ವಿದ್ಯಾರ್ಥಿಗಳ ಸಾಧನೆ :

  • ಸಮಾಜದ ಪ್ರಮುಖ ಕ್ಷೇತ್ರಗಳಾದ ಮೆಡಿಸಿನ್, ಇಂಜಿನಿಯರಿಂಗ್ , ಡಿಫೆಂನ್ಸ್ ಸರ್ವಿಸ್ , ಲೀಗಲ್ ಸರ್ವಿಸ್ , ಚಾರ್ಟೆಡ್ ಅಕೌಂಟ್, ಶಿಕ್ಷಣ ಸಂಸ್ಥೆಗಳಲ್ಲಿ ಪ್ರೊಫೆಸರ್, ಲೆಕ್ಚರರ್, ಟೀಚರ್, ಕೃಷಿ ಮತ್ತು ತೋಟಗಾರಿಕೆ ಗಳಲ್ಲಿ ವಿಜ್ಞಾನಿ, ರಾಜಕೀಯ, ಬ್ಯಾಂಕಿಂಗ್, ಕ್ರೀಡೆ, ಸಂಗೀತ ಪ್ರತಿಯೊಂದು  ಕ್ಷೇತ್ರಗಳಲ್ಲಿ ತಮ್ಮ ಚಾಪು ಮೂಡಿಸಿದ್ದಾರೆ.
  • ರಾಜ್ಯಾದ್ಯಂತ ಸೀಡ್‌ಬಾಲ್ (ಬೀಜದ ಉಂಡೆ) ನಿಸರ್ಗವನ್ನು ಹಸಿರಾಗಿಸುವ ಒಂದು ಯೋಜನೆ ಮಾಡಿ,  ಕಾರ್ಯಾಗಾರದ ಅರಿವು ಮೂಡಿಸಿ, ಪರಿಸರದ ಬಗ್ಗೆ ಕಾಳಜಿ ವಹಿಸಿದ್ದು ಇನ್ಫಿನಿಟಿ ಕಾರ್ತಿಕ್ – ಬ್ರೈನ್ ಸೈಂಟಿಸ್ಟ್
  • ಡಾ. ಚಿನ್ನಬಾಬು ಸಿಇಓ – ಗ್ರೇಸ್ ಕ್ಯಾನ್ಸರ್ ಫೌಂಡೇಶನ್ ಅವರಿಂದ  ಶಿವಮೊಗ್ಗ ನವೋದಯಲ್ಲಿ, ಕಳೆದ ವರ್ಷ ಗ್ರಾಮೀಣ ಭಾಗದವರಿಗೆ ಉಚಿತವಾಗಿ ಕ್ಯಾನ್ಸರ್ ತಪಾಸಣೆ ಮತ್ತು ವೈದ್ಯಕೀಯ ಸೌಲಭ್ಯ ನೀಡಲಾಯಿತು
  • ಕನ್ನಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರನ್ನು ಒಂದು ಚೌಕಟ್ಟಿನಲ್ಲಿ ಹೊಂದುವ ಆಶಯದೊಂದಿಗೆ ಜೆಎನ್‌ವಿ ಶಿವಮೊಗ್ಗದಲ್ಲಿ “ಕವಿ ವನ” ನಿರ್ಮಿಸಲಾಗಿದೆ. ಇಲ್ಲಿ ಕನ್ನಡದ 8 ಜ್ಞಾನಪೀಠ ಪ್ರಶಸ್ತಿ ಪಡೆದ ಸಾಹಿತಿಗಳ ಮೂರ್ತಿ ನಿರ್ಮಿಸಿ, ಅವರ ನುಡಿಗಳನ್ನು ಕೆತ್ತಲಾಗಿದೆ.
  • ನವೋದಯ ದಿನಗಳ ನಂತರ ಹೊರಬಂದ ಹಲವು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ, ಅವರಿಗೆ ಶೈಕ್ಷಣಿಕ ಬೆಂಬಲವಾಗಿ ಪ್ರತಿವರ್ಷ 2ರಿಂದ 3ಲಕ್ಷ ಅನುದಾನ ಮೀಸಲಿಟ್ಟು, ತಮ್ಮ ಜೀವನವನ್ನು ನೀರೂಪಿಸುತ್ತಿರುವ ಕಾರ್ಯ ಮಾಡುತ್ತಿದ್ದಾರೆ ಈ ಶಾಲೆಯ ಆಲೂಮ್ನಿ ಬಳಗ.
  • ನವೋದಯ ಮತ್ತು ಮೊರಾರ್ಜಿ ಪರೀಕ್ಷೆಗಳಿಗೆ, ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಕಳೆದ ಮೂರು ವರ್ಷಗಳಿಂದ ಉಚಿತ ತರಬೇತಿ ಶಿಬಿರ (4 ತಿಂಗಳು) ನಡೆಸಲಾಗುತ್ತಿದೆ. ಈ ಶಿಬಿರಕ್ಕೆ 149 ವಿದ್ಯಾರ್ಥಿಗಳು ಭಾಗವಹಿಸಿದ್ದು, ಇಲ್ಲಿಯವರೆಗೆ 4 ವಿದ್ಯಾರ್ಥಿಗಳು ನವೋದಯ ಮತ್ತು 26 ಮಕ್ಕಳು ಮೊರಾರ್ಜಿ ಶಾಲೆಗಳಿಗೆ ತೇರ್ಗಡೆ ಆಗಿದ್ದು, 76.4 ಲಕ್ಷ ಶೈಕ್ಷಣಿಕ ಉಪಯೋಗ ಪಡೆದಿದ್ದಾರೆ. ಈ ಶಿಬಿರ ಶಿವಮೊಗ್ಗ ಜಿಲ್ಲೆಯ ಹುಂಚ, ನೆಲವಾಗಿಲು ಮತ್ತು ಕೋಣಂದೂರು ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ.

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
      

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKuvempu VVLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಕುವೆಂಪು ವಿವಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಯೋಗಾತ್ಮಕ ಕಲಿಕೆಯಿಂದ ಮಾತ್ರ ನಿಜವಾದ ಜ್ಞಾನದ ವಿಕಸನ: ಪ್ರವೀಣ್ ಉಡುಪ ಅಭಿಪ್ರಾಯ

Next Post

ಹಿಜಾಬ್ ವಿಷಯ ಪ್ರಸ್ತಾಪದಿಂದ ರಾಜ್ಯದಲ್ಲಿ ಗೊಂದಲ ವಾತಾವರಣ ಸೃಷ್ಠಿ: ಮಾಜಿ ಡಿಸಿಎಂ ಈಶ್ವರಪ್ಪ

kalpa News

kalpa News

Next Post
ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಂತೋಷ್ ಆರೋಪದ ಅಮೂಲಾಗ್ರ ತನಿಖೆಗೆ ಸಚಿವ ಈಶ್ವರಪ್ಪ ಒತ್ತಾಯ

ಹಿಜಾಬ್ ವಿಷಯ ಪ್ರಸ್ತಾಪದಿಂದ ರಾಜ್ಯದಲ್ಲಿ ಗೊಂದಲ ವಾತಾವರಣ ಸೃಷ್ಠಿ: ಮಾಜಿ ಡಿಸಿಎಂ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL