ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕಾಗಿ 5 ಸಾವಿರ ಎಕರೆ ಜಾಗಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯಲ್ಲಿ ನಿರ್ವಹಣಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿವಮೊಗ್ಗದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕಾಗಿ 5 ಎಕರೆ ಜಾಗಕ್ಕಾಗಿ ಹಾಗೂ ಜಿಲ್ಲೆಯಲ್ಲಿ ಇನ್ನೊಂದು ಕೇಂದ್ರೀಯ ವಿದ್ಯಾಲಯಕ್ಕಾಗಿ ಪ್ರಸ್ತಾವನೆಯನ್ನೂ ಸಹ ಸಲ್ಲಿಸಲಾಗಿದೆ ಎಂದರು.
ಸಂಸದನಾಗಿ ವಿವಿಧ ಅಭಿವೃದ್ಧಿಗೆ ಕಾರ್ಯಗತವಾಗಿದ್ದು, ಅಟಲ್ ಜೀ ಶಾಲೆ, ಡಿಆರ್’ಡಿ ಒ ಘಟಕ, ಪ್ರತಿ ಶನಿವಾರ ಭಾನುವಾರ ಜೋಗ್ ಜಲಪಾತ ಮೈದುಂಬಿ ಹರಿಯುವಂತೆ ಮಾಡಲಾಗುವ ಕೆಲಸಗಳು ನಡೆಯುತ್ತಿವೆ. ಶಿವಮೊಗ್ಗ-ಶಿಕಾರಿಪುರ-ರಾಣೇಬೆನ್ನೂರು ರೈಲ್ವೆ ಸಂಪರ್ಕ ಹಾಗೂ ಮೊದಲಾದ ಕೆಲಸ ಮಾಡಲಾಗುತ್ತಿದೆ ಎಂದರು.
ಗ್ರಾಮ ಪಂಚಾಯತಿ ಚುನಾವಣೆ ವಾರ್ ರೂಂ ನ್ನು ಪ್ರತಿ ಮಂಡಲಕ್ಕೂ ವಿಸ್ತರಿಸಬೇಕು. ಅಭಿವೃದ್ಧಿ ಕುರಿತು ಸಾರ್ವಜನಕರಲ್ಲಿ ಅರಿವು ಮೂಡಿಸಲು ಸಂಸದರು ಕರೆ ನೀಡಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ಇನ್ನು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಸಂಸದರು, ಒಂದು ಕಾಲದಲ್ಲಿ ಸಂಸತ್’ನ ಮೂರನೆಯ ಒಂದು ಭಾಗದಷ್ಟು ಸದಸ್ಯರು ಕಾಂಗ್ರೆಸ್’ನಿಂದ ಗೆದ್ದು ಬರುತ್ತಿದ್ದರು. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಪ್ರತಿಪಕ್ಷ ನಾಯಕರೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಟಕಿಯಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ನಟರಾಜ್, ಶಾಸಕರಾದ ಕುಮಾರ್ ಬಂಗಾರಪ್ಪ, ಆರ್ಯ ವ್ಯಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಕುಮಾರ್, ಸೂಡಾ ಅಧ್ಯಕ್ಷ ಎಸ್. ಜ್ಯೋತಿಪ್ರಕಾಶ್, ಸೂಡಾ ಮಾಜಿ ಅಧ್ಯಕ್ಷ ಎಸ್. ದತ್ತಾತ್ರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಧರ್ಮ ಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ಬಿ.ಆರ್. ಮಧುಸೂಧನ್, ಜಿಲ್ಲಾ ಕಾರ್ಯದರ್ಶಿ ಹೃಷಿಕೇಶ್ ಪೈ, ಮಲೆನಾಡು ಅಭಿವೃದ್ಧಿ, ನಿಗಮ ಮಂಡಳಿಯ ಅಧ್ಯಕ್ಷ ಗುರುಮೂರ್ತಿ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಪುರುಷೋತ್ತಮ, ಆರ್.ಕೆ. ಸಿದ್ದರಾಮಣ್ಣ, ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಚನ್ನಬಸಪ್ಪ, ಜಿಲ್ಲಾ ಕಾರ್ಯಕಾರಣಿ ಸದಸ್ಯರು, ಜಿಲ್ಲಾ ಪಂಚಾಯತ್ ಸದಸ್ಯರು, ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















