Wednesday, June 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಎಲೆಮರೆಯ ಸಾಧಕರು, ಬಡ ವಿದ್ಯಾರ್ಥಿಗಳನ್ನು ಗೌರವಿಸಿ ಮಾದರಿಯಾದ ಮಾನವಹಕ್ಕುಗಳ ಕಮಿಟಿ

November 23, 2020
in Small Bytes, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಯಾವುದೇ ಪ್ರತಿಫಲಗಳ ಆಕಾಂಕ್ಷೆ ಇಲ್ಲದೆ ಸಮಾಜಸೇವೆ ಮೂಲಕ ತೊಡಗಿಸಿಕೊಂಡ ಸದ್ದು ಮಾಡದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಮಾಡುತ್ತಿರುವ ಮಾನವ ಹಕ್ಕುಗಳ ಕಮಿಟಿಯ ಈ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ಎಂದು ಮೆಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶ್ರೀಧರ್ ಹೇಳಿದರು.

ಅವರು ಶಿವಮೊಗ್ಗ ಕಾಶಿಪುರದಲ್ಲಿರುವ ಮಾನವ ಹಕ್ಕುಗಳ ಕಮಿಟಿಯ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸದ್ದಿಲ್ಲದ ಸಾಧಕರು ಹಾಗೂ ಕನ್ನಡದ ಬಡ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಅತ್ಯಂತ ಅರ್ಥಪೂರ್ಣವಾದ ಹಾಗೂ ಶ್ಲಾಘನೀಯವಾದ ಕಾರ್ಯಕ್ರಮ ಇದಾಗಿದೆ. ಕೊರೋನಾದ ಇಂದಿನ ದಿನಮಾನಗಳಲ್ಲಿ ವೈದ್ಯ ವ್ಯವಸ್ಥೆಯ ನಡುವೆ ಶವಾಗಾರದಲ್ಲಿ ಕಾ ಕಾರ್ಯನಿರ್ವಹಿಸುವ ಬಸವರಾಜ್, ಕುಮಾರಿ ರಂಜಿತ, ರೋಟರಿ ಚಿತಾಗಾರದ ಶ್ರೀಮತಿ ಸವಿತಾ ಹಾಗೂ ಹಿರಿಯ ಪತ್ರಕರ್ತರಾದ ಜೇವಿಯರ್ ಡೇವಿಡ್ ಅವರನ್ನು ಗುರುತಿಸಿ ಗೌರವಿಸುತ್ತಿರುವುದು ಸಂತಸದ ವಿಷಯ ಎಂದರು.


ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ರಾಜ್ಯದಲ್ಲಿ ಒಂದು ಮಾದರಿ ಆಸ್ಪತ್ರೆಯಾಗಿ ರೂಪುಗೊಂಡಿದೆ. ಅಲ್ಲಿನ ನಮ್ಮೆಲ್ಲ ಸಿಬ್ಬಂದಿಗಳು, ವೈದ್ಯ ಸಮೂಹ ಜನರ ಆರೋಗ್ಯ ರಕ್ಷಣೆಗೆ ಸಾಧ್ಯವಾದಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆಸ್ಪತ್ರೆಯ ಸಮಗ್ರ ಸುಧಾರಣೆಯತ್ತ ಗಮನಹರಿಸಿರುವುದು ರಾಜ್ಯದಲ್ಲಿ ಈ ವಿಶೇಷ ಗೌರವವನ್ನು ತಂದುಕೊಟ್ಟಿದೆ ಎಂದು ಹೇಳಿದರು.

ಸದ್ದಿಲ್ಲದ ಸಾಧಕರನ್ನು ಸನ್ಮಾನಿಸಿದ ಪೊಲೀಸ್ ಸರ್ಕಲ್ ಇನ್ಸ್ ಸ್ಪೆಕ್ಟರ್ ಆರ್. ವಸಂತಕುಮಾರ್ ಅವರು ಮಾತನಾಡುತ್ತಾ ಯಾವುದೇ ಸಂಘ ಸಂಸ್ಥೆಗಳು ಬಡವರ ನೊಂದವರ ಸ್ಪಂದಿಸಬೇಕು. ಆಗಮಾತ್ರ ಸಂಘ-ಸಂಸ್ಥೆಗಳು ಹಾಗೂ ಅದರ ಮುಖವಾಣಿಯಾದ ನಾಯಕರುಗಳು ಬೆಳೆಯಲು ಗುರುತಿಸಿಕೊಳ್ಳಲು ಸಾಧ್ಯ. ಮಾನವ ಹಕ್ಕುಗಳ ಕಮಿಟಿ ಇಂತಹ ಕಾರ್ಯ ಕೈಗೊಂಡಿರುವುದು ವಿಶ್ವಾಸ ಹಾಗೂ ನಂಬಿಕೆಯನ್ನು ಹೆಚ್ಚಿಸುವಂತೆ ಮಾಡಿದೆ ಎಂದರು.


ಕಾರ್ಯಕ್ರಮದ ಆರಂಭದಲ್ಲಿ ಕನ್ನಡ ಮಾತೆಗೆ ಪುಷ್ಪಗುಚ್ಚವನ್ನಿರಿಸುವ ಮೂಲಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿದ ಕಮಿಟಿಯ ಸಂಸ್ಥಾಪಕ ಅಧ್ಯಕ್ಷ ಬೈರೇಗೌಡ ಅವರು ಮಾತನಾಡುತ್ತಾ ರಾಜ್ಯಾದ್ಯಂತ ಬಹಿತೇಕ ಜಿಲ್ಲೆಗಳಲ್ಲಿ ಕಮಿಟಿಯ ಶಾಖೆಗಳನ್ನು ಕಟ್ಟಲಾಗಿದೆ. ಶಿವಮೊಗ್ಗ ಕಮಿಟಿ ಹೊಸತನದ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಗೌರವಾನ್ವಿತ ವಾಗಿದೆ ಎಂದರು.

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಶವಾಗಾರ ದಲ್ಲಿರುವ ಶವಾಗಾರ ಸಹಾಯಕ ಬಸವರಾಜ್, ಓದುತ್ತಲೇ ಸುಬ್ಬಯ್ಯ ಆಸ್ಪತ್ರೆಯ ಶವಾಗಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕುಮಾರಿ ರಂಜಿತಾ, ರೋಟರಿ ಚಿತಾಗಾರ ದಿವಂಗತ ಪಾಪನಾಯ್ಕರ ಪತ್ನಿ ಶ್ರೀಮತಿ ಸವಿತಾ ಹಾಗೂ ನಿವೃತ್ತ ಪತ್ರಕರ್ತ ಜೇವಿಯರ್ ಡೇವಿಡ್, ಜಿಲ್ಲೆಯ ಹನ್ನೊಂದು ಸರ್ಕಾರಿ ಶಾಲೆಗಳ ಬಡ ಹಾಗೂ ಪ್ರತಿಭಾನ್ವಿತ ಎಸ್ ಎಸ್ ಎಲ್ ಸಿ ಮಕ್ಕಳಿಗೆ ನಗದು, ಬಟ್ಟೆ ನೀಡುವ ಮೂಲಕ ಗೌರವಿಸಿತು.

ಇದೇ ಸಂದರ್ಭದಲ್ಲಿ ರಪ್ತಾರ್ ಎಲೆಕ್ಟ್ರಿಕಲ್ ಬೈಕ್ ನ ಡಿಸ್ಟಿಬ್ಯೂಟರ್ ದೀರಜ್ ಜೈನ್ ಅವರು ಮೂವರು ಸದ್ದಿಲ್ಲದ ಸಾಧಕರಿಗೆ ನಗದಿನ ನೆರವು ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಮಿಟಿಯ ರಾಜ್ಯ ಮಾಧ್ಯಮ ಸಲಹೆಗಾರ ಎಸ್ ಕೆ ಗಜೇಂದ್ರ ಸ್ವಾಮಿ ಅವರು ಮಾನವ ಹಕ್ಕುಗಳ ಸಮಿತಿ ಸಹಾಯ ನೀಡುವಾಗ ಶಕ್ತಿಯನ್ನು ಬಳಸಿಕೊಳ್ಳುತ್ತಿದೆ ಕಿರಿಕಿರಿ ಯಾವುದೇ ಆತಂಕ ಇಲ್ಲದೆ ನೀರು ಬಿಸ್ಕೆಟ್ ಹಾಗೂ ಕರೋನಾ ಪೀಡಿತರ ಮನೆಗೆ ಆಹಾರಧಾನ್ಯಗಳನ್ನು ಪೂರೈಸುವ ಕಾರ್ಯ ಮಾಡಿತ್ತು ಈಗಲೂ ಹೊಸತನದ ಕಾರ್ಯಕ್ರಮಗಳ ಮೂಲಕ ಜನಸೇವೆಯ ಮುಖ್ಯ ಉದ್ದೇಶವನ್ನು ಹೊಂದಿದೆ ಎಂದರು.

ಪತ್ರಕರ್ತ ಹಾಗೂ ಸಾಹಿತಿ ಆರುಂಡಿ ಶ್ರೀನಿವಾಸಮೂರ್ತಿ ಅವರು ಕನ್ನಡ ನುಡಿ ನಮನ ಸಲ್ಲಿಸಿದರು

ಕಾರ್ಯಕ್ರಮದಲ್ಲಿ ರಾಜ್ಯ ಅಧ್ಯಕ್ಷ ನಾಗರಾಜ್ ರಾಜ್ಯಾಧ್ಯಕ್ಷ ಕೆ ನಾಗರಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅನಿತಾ ಡಿ, ಜಿಲ್ಲಾಧ್ಯಕ್ಷ ದಯಾನಂದ ಗೌಡ, ಜಿಲ್ಲಾ ಗೌರವಾಧ್ಯಕ್ಷರಾದ ರಮೇಶ್ ಎಸ್., ಡಿ.ಬಿ. ವಿಜಯಕುಮಾರ್, ರಾಜ್ಯ ಕಮಿಟಿಯ ನಿರಂಜನಮೂರ್ತಿ,ಮಹಿಳಾ ಘಟಕದ ಅಧ್ಯಕ್ಷೆ ಜಯಮಾಲಶೆಟ್ಟಿ ಹಾಗೂ ಇತರರಿದ್ದರು.

ಕಾರ್ಯಕ್ರಮ ಆರಂಭಕ್ಕೂ ಪೂರ್ವದಲ್ಲಿ ಶಿವಮೊಗ್ಗ ಸ್ಟೈಲ್ ಡ್ಯಾನ್ಸ್ ಗ್ರೂಪ್ ವತಿಯಿಂದ ಕನ್ನಡ ಗೀತೆಗೆ ನೃತ್ಯ ಪ್ರದರ್ಶನ ನಡೆಯಿತು. ಸ್ಕಂದ ಮಾಧುರ್ಯ ಸಂಗೀತ ಶಾಲೆಯ ಮಕ್ಕಳಿಂದ ನಾಡಗೀತೆ ಹಾಗೂ ರೈತ ಗೀತೆ ಮೂಡಿಬಂದಿತು.

ಕಮಿಟಿಯ ಪ್ರಧಾನ ಕಾರ್ಯದರ್ಶಿ ಶಾರದಾ ಶೇಷಗಿರಿ ಗೌಡ, ವಿನೋದ್ ಅವರು ಸದ್ದಿಲ್ಲದ ಸಾಧಕರ ಹಾಗೂ ಸನ್ಮಾನಿತರ ಪರಿಚಯ ಮಾಡಿದರು. ಕಾರ್ಯದರ್ಶಿ ಸುಜಾತ ಸ್ವಾಗತಿಸಿದರು. ಕಾರ್ಯದರ್ಶಿ ಶಶಿಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷೆ ಉಷಾ ಉತ್ತಪ್ಪ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Human Rights CommitteeKannada News WebsiteLatest News KannadaLocal NewsMalnad NewsShimogaShivamoggaShivamogga Newsಮಾನವ ಹಕ್ಕುಗಳ ಕಮಿಟಿಶಿವಮೊಗ್ಗ
Previous Post

ಮದುವೆಯ ಧಾರೆ ಸೀರೆಯಲ್ಲೇ ಪರೀಕ್ಷೆ ಬರೆದ ಯುವತಿ

Next Post

ಕೆಎಸ್’ಆರ್’ಪಿ ನೇಮಕಾತಿ ಪರೀಕ್ಷೆಯಲ್ಲಿ ನಕಲು: ಪೊಲೀಸ್ ಆಗಬೇಕಾದವರು ಈಗ ಕಂಬಿ ಹಿಂದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೆಎಸ್’ಆರ್’ಪಿ ನೇಮಕಾತಿ ಪರೀಕ್ಷೆಯಲ್ಲಿ ನಕಲು: ಪೊಲೀಸ್ ಆಗಬೇಕಾದವರು ಈಗ ಕಂಬಿ ಹಿಂದೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!