ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಗರದ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ ಸೇರಿದಂತೆ ತಾಲ್ಲೂಕಿನಾದ್ಯಂತ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗದ ಡಿವೈಎಸ್ಪಿ ಕೆ. ಕೃಷ್ಣಮೂರ್ತಿ ತಿಳಿಸಿದರು.
ಅಧಿಕಾರ ಸ್ವೀಕರಿಸಿದ ನಂತರ ಪ್ತಥಮ ಬಾರಿಗೆ ತಮ್ಮ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಅವರು ಚರ್ಚೆ ನಡೆಸಿದರು.
2002ರಲ್ಲಿ ಶಿವಮೊಗ್ಗದಲ್ಲಿ ಗುಪ್ತಚರ ವಿಭಾಗದಲ್ಲಿ ಕೆಲಸ ಮಾಡಿ, ನಂತರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಬೆಂಗಾವಲು ಪಡೆಯಲ್ಲಿ ಕರ್ತವ್ಯ ನಿರ್ವಹಿಸಿ ಭದ್ರಾವತಿಗೆ ಆಗಮಿಸಿರುವುದಾಗಿ ತಿಳಿಸಿದರು. ನಗರದಲ್ಲಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಕವಿತ ರವರ ಕರ್ತವ್ಯವನ್ನು ಶ್ಲಾಘಿಸಿದರು.
ಪತ್ರಕರ್ತರ ಪ್ರಶ್ನೆ ಹಾಗೂ ಸಲಹೆಗಳು
ನಿರಂತರವಾಗಿ ಹಸುಗಳ ಸಾಗಾಣಿಕೆ ಹೆಚ್ಚುತ್ತಿದೆ, ಬಸವೇಶ್ವ,ರ ಸರ್ಕಲ್ ಮಾರುಕಟ್ಟೆ ಬಳಿ ಜನಸಂದಣಿ ಸಂಚಾರಕ್ಕೆ ಅಡ್ಡಿಯಾಗಿದೆ. ರಂಗಪ್ಪ ವೃತ್ತದಲ್ಲಿ ಸಂಚಾರ ದಟ್ಟಣೆ, ಅಂಡರ್ ಬ್ರಿಡ್ಜ್ ಹತ್ತಿರ ರಸ್ತೆಯಲ್ಲೇ ವಾಹನಗಳ ನಿಲುಗಡೆ ಮಾಡುತ್ತಿರುವುದು, ಸಿಗ್ನಲ್ ಲೈಟ್ ಹಾಗೂ ಸಿಸಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪತ್ರಕರ್ತರು ಪ್ರಶ್ನಿಸಿದರು.
ಪತ್ರಕರ್ತರಲ್ಲದವರೂ ಕೂಡ ತಮ್ಮ ವಾಹನಗಳಿಗೆ ಪ್ರೆಸ್ ನಾಮಫಲಕ ಹಾಕಿಕೊಂಡು ಸಂಚರಿಸುತ್ತಿದ್ದು ಕ್ರಮಕೈಗೊಳ್ಳಬೇಕೆಂದು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಡಿವೈಎಸ್ಪಿ ಅವರಿಗೆ ಒತ್ತಾಯಿಸಲಾಯಿತು.
ಪತ್ರಕರ್ತರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿವೈಎಸ್’ಪಿ ಅವರು ಈ ಕುರಿತಂತೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನಗರ ಸಿಪಿಐ ರಾಘವೇಂದ್ರ ಕಾಂಡ್ಕೆ, ಸಂಚಾರಿ ಠಾಣೆಯ ಪಿಎಸ್ಐ ಕವಿತ ಮತ್ತು ಪಿಎಸ್ಐ ರಮೇಶ್ ಹಳೇ ನಗರ ಠಾಣೆಯ ಪಿಎಸ್ಐ ಶ್ರೀನಿವಾಸ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post