No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜೀವನ ಮಟ್ಟ ಸುಧಾರಿಸುವಲ್ಲಿ ಎಲ್ಲ ಇಂಜಿನಿಯರ್’ಗಳು ಶ್ರಮಿಸಬೇಕು: ಚಕ್ರವರ್ತಿ ಕರೆ

ಪಿಇಎಸ್ ಇಂಜಿನೀಯರಿಂಗ್ ಕಾಲೇಜಿನ 16ನೆಯ ಬ್ಯಾಚ್ ಕೋರ್ಸ್ ಶಿಷ್ಯೋಪನಯನ ಪ್ರಾರಂಭೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 22, 2022
in ಶಿವಮೊಗ್ಗ
0
ಜೀವನ ಮಟ್ಟ ಸುಧಾರಿಸುವಲ್ಲಿ ಎಲ್ಲ ಇಂಜಿನಿಯರ್’ಗಳು ಶ್ರಮಿಸಬೇಕು: ಚಕ್ರವರ್ತಿ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾನವ ಜನಾಂಗದ ಜೀವನಮಟ್ಟವು ಸುಧಾರಿಸುವಲ್ಲಿ ಸಂಘಟನಾ ಮನೋಭಾವನೆಯಲ್ಲಿ ಇಂಜಿನಿಯರಿಂಗ್ ಕ್ಷೇತ್ರದ ಎಲ್ಲಾ ವಿಭಾಗಗಳ ಪದವೀಧರರು ಶ್ರಮಿಸಬೇಕು ಎಂದು ಬೆಂಗಳೂರಿನ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪೆನಿಯ ಉಪಾಧ್ಯಕ್ಷ ಹಾಗೂ ಪ್ರಾದೇಶಿಕ ಆರ್’ಎಂಜಿ ಮುಖ್ಯಸ್ಥರಾದ ಇ.ಎಸ್. ಚಕ್ರವರ್ತಿ ಕರೆ ನೀಡಿದರು.

ಪಿಇಎಸ್ ಕಾಲೇಜಿನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಇಂಜಿನಿಯರಿಂಗ್ ಪದವಿಯ 16 ನೆಯ ಬ್ಯಾಚ್’ನ ಶಿಷ್ಯೋಪನಯನ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇಂಜಿನಿಯರಿಂಗ್ ಶಿಕ್ಷಣದ ಮೂಲಭೂತ ಉದ್ದೇಶಗಳಲ್ಲಿ, ಉದ್ಭವಿಸುವ ವಿವಿಧ ನಮೂನೆಯ ಸಮಸ್ಯೆಗಳಿಗೆ ಪರಿಹಾರಾತ್ಮಕ ಮಾರ್ಗೋಪಾಯಗಳನ್ನು ಕಂಡುಹಿಡಿದು ಪ್ರಾಯೋಗಿಕವಾಗಿ ತಾರ್ಕಿಕ ಮಟ್ಟದಲ್ಲಿ ಅವುಗಳ ಅಳವಡಿಕೆ ಪ್ರಮುಖವಾಗಿದೆ. ಈ ಮೂಲಕ ದೇಶದ ಸರ್ವತೋಮುಖ – ಸರ್ವಾಂಗೀಣ ಅಭಿವೃದ್ಧಿಗೆ ವಿವಿಧ ಕ್ಷೇತ್ರಗಳಲ್ಲಿ ಹಾಗೂ ವಿವಿಧ ವಿಭಾಗಗಳಲ್ಲಿ ನಡೆಯುವ ಆವಿಷ್ಕಾರಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೈಗೆಟುಕುವ ಮಟ್ಟದಲ್ಲಿ ಪಡೆಯುತ್ತ, ಅಸಾಧಾರಣವಾದದ್ದನ್ನು ಸಮಾಜದ ಉನ್ನತಿಗೆ ಪ್ರಾಯೋಗಿಕ ಮಟ್ಟದಲ್ಲಿ ಅಳವಡಿಸುವುದು ಅತ್ಯವಶ್ಯಕವಾಗಿದೆ. ಮಾನವ ಜನಾಂಗದ ಜೀವನಮಟ್ಟವು ಸುಧಾರಿಸುವಲ್ಲಿ ಸಂಘಟನಾ ಮನೋಭಾವನೆಯಲ್ಲಿ ಇಂಜಿನಿಯರಿಂಗ್ ಕ್ಷೇತ್ರದ ಎಲ್ಲಾ ವಿಭಾಗಗಳ ಪದವೀಧರರು ಶ್ರಮಿಸಬೇಕು ಎಂದು ತಿಳಿಸಿದರು.

ಪ್ರಸ್ತುತ ಕಾಲಮಾನದಲ್ಲಿ ಇಂಜಿನಿಯರಿಂಗ್ ಕ್ಷೇತ್ರದ ಒಂದಕ್ಕಿಿಂತ ಹೆಚ್ಚು ವಿಭಾಗಗಳು ಒಟ್ಟುಗೂಡಿ ತಮ್ಮ ತಂತ್ರಜ್ಞಾನ ನೈಪುಣ್ಯವನ್ನು ಒರೆಗೆ ಹಚ್ಚುವ ಮೂಲಕ ವಿಶಿಷ್ಟವಾದದ್ದನ್ನು ಸಂಶೋಧಿಸುವಲ್ಲಿ ಪ್ರಯತ್ನಗಳು ಸಾಗುತ್ತಿದ್ದು, ಇಂಜಿನಿಯರಿಂಗ್ ಶಿಕ್ಷಣದ ಎಲ್ಲಾ ಬ್ರಾಂಚ್’ಗಳು ತಮ್ಮದೇ ಆದ ಪ್ರಾಮುಖ್ಯತೆಯನ್ನು ಹೊಂದಿವೆ.
-ಇ.ಎಸ್. ಚಕ್ರವರ್ತಿ

ಸದಾಕಾಲ ಹೊಸತನ್ನು ಹಾಗೂ ನಾವಿನ್ಯವನ್ನು ಅಳವಡಿಸಿಕೊಳ್ಳುತ್ತಾ, ಅನೂಹ್ಯವಾದದ್ದನ್ನು ಮಾನವ ಸಮಾಜದ ಸಾರ್ವಕಾಲಿಕ ಅಭಿವೃದ್ಧಿಗೆ ಅನುಕೂಲಕರವಾಗುವಂತೆ ಮತ್ತು ಪ್ರಾಯೋಗಿಕ ಸಂಶೋಧನೆಗಳ ಫಲಶ್ರುತಿಗೆ ತನ್ನನ್ನು ತಾನು ಒಡ್ಡಿಕೊಳ್ಳುವ ಮುಕ್ತ ಮನಸ್ಸಿನ ಮನೋವಾಂಛೆಯನ್ನು ಹೊಂದಿರಬೇಕು. ಔದ್ಯೋಗಿಕ ಕ್ಷೇತ್ರದ ಬಗ್ಗೆ ಕುತೂಹಲ ಭರಿತ ಆಸಕ್ತಿಯನ್ನು ಹೊಂದುವಂತೆ ವಿದ್ಯಾರ್ಥಿಗಳನ್ನು ಕೆಲವು ಉದಾಹರಣೆಗಳೊಂದಿಗೆ ಚಕ್ರವರ್ತಿಯವರು ಹುರಿದುಂಬಿಸಿದರು.

ಕಾಲಮಾನಕ್ಕೆ ತಕ್ಕಂತೆ ಕಂಪ್ಯೂಟರ್ ಕ್ಷೇತ್ರ ವಿಭಾಗ, ಎಲೆಕ್ಟ್ರಾನಿಕ್ಸ್ ಕ್ಷೇತ್ರ ವಿಭಾಗ, ಮೆಕಾನಿಕಲ್ ಕ್ಷೇತ್ರ ವಿಭಾಗ ಎಲೆಕ್ಟ್ರಿಕಲ್ ಹಾಗೂ ಸಿವಿಲ್ ಕ್ಷೇತ್ರ ವಿಭಾಗಗಳ ಇಂಜಿನಿಯರಿಂಗ್ ತಂತ್ರಜ್ಞರೆಲ್ಲರೂ ಒಟ್ಟುಗೂಡಿ ಸಾಮಾಜಿಕ ಮಟ್ಟದಲ್ಲಿ ವಿಶಿಷ್ಟವಾದದ್ದನ್ನು ಸಂಶೋಧಿಸಿ ಎಲ್ಲಾ ಸ್ಥರದ ಜನರ ಜೀವನ ಮಟ್ಟವು ಸುಧಾರಿಸುವಲ್ಲಿ ಶ್ರಮಿಸುವಂತೆ ತಿಳಿಸಿದರು.

ಶಿಕ್ಷಕರು ಪ್ರತಿಯೊಂದು ವಿದ್ಯಾರ್ಥಿಗಳ ಬಗ್ಗೆ ವೈಯಕ್ತಿಕ ಗಮನಹರಿಸುವಿಕೆಯನ್ನು ಅಳವಡಿಸಿಕೊಂಡು ತನ್ಮೂಲಕ ಅವರುಗಳಲ್ಲಿ ಹುದುಗಿರುವ ನೈಪುಣ್ಯತೆಯನ್ನು ಗುರುತಿಸಿ ಅತ್ಯುತ್ತಮವಾದದನ್ನು ಸಾಧಿಸುವಲ್ಲಿ ಪ್ರೇರೇಪಿಸುವ ಕಡೆಗೆ ಗಮನಹರಿಸಬೇಕೆಂದು ಮನಮುಟ್ಟುವಂತೆ ನುಡಿದರು.
ವಿದ್ಯಾರ್ಥಿಗಳಲ್ಲಿ ಅಡಗಿರುವ ತಾರ್ಕಿಕ ಮನೋಭಾವನೆಯನ್ನು ವೃದ್ಧಿಸುವಲ್ಲಿ ಪ್ರಾಯೋಗಿಕ ಮಟ್ಟದ ಪ್ರಾತ್ಯಕ್ಷಿಕೆಗಳನ್ನು ತಯಾರಿಸುವಲ್ಲಿ ಅನುಕೂಲವಾಗುವ ಪ್ರಾಜೆಕ್ಟ್ ಎಕ್ಸಿಬಿಷನ್’ಗಳು, ಗ್ರೂಪ್ ಡಿಸ್ಕಶನ್, ರಸಪ್ರಶ್ನೆ ಕಾರ್ಯಕ್ರಮಗಳ ಆಯೋಜನೆಯ ಮೂಲಕ ಅತ್ಯುತ್ತಮ ಇಂಜಿನಿಯರಿಂಗ್ ಪದವೀಧರರಾಗಿ ಹೊರಹೊಮ್ಮುವಲ್ಲಿ ಕಾರ್ಯತತ್ಪರರಾಗುವಂತೆ ಕರೆ ನೀಡಿದರು.

ಪಿಇಎಸ್’ಐಟಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಎಂ.ವಿ. ಚೈತನ್ಯ ಕುಮಾರ್ ಮಾತನಾಡಿ, ಇಂಜಿನಿಯರಿಂಗ್ ಶಿಕ್ಷಣವು ಪ್ರಸ್ತುತ ಕಾಲಮಾನದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ಹಾಗೂ ಪಾವಿತ್ರವನ್ನು ಪಡೆದಿದೆ. ತನ್ಮೂಲಕ ಅಸಾಧಾರಣ ಪ್ರಾಯೋಗಿಕ ಸಂಶೋಧನೆಗಳನ್ನು ನಡೆಸುವ ಮೂಲಕ ಮಾನವ ಸಮಾಜದ ಮೂಲಭೂತ ಮಟ್ಟವನ್ನು ಸುಧಾರಿಸಿ ಅದ್ವಿತೀಯ ಕೊಡುಗೆಗಳನ್ನು ಸಮಾಜಕ್ಕೆ ನೀಡುವ ಮೂಲಕ ಸಮಾಜಮುಖಿ ಧೋರಣೆಯನ್ನು ವ್ಯಕ್ತಪಡಿಸುವಲ್ಲಿ ಶ್ರಮಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದರು.

ದಿನನಿತ್ಯದ ಜೀವನದಲ್ಲಿ ಎಲ್ಲಾ ಕೆಲಸಗಳ ಜೊತೆಗೆ ನಿಯಮಿತ ನಿದ್ರಾ ಕ್ರಮವೂ ವಿಷಯಗಳ ಮನವರಿಕೆ, ಅಧ್ಯಯನ ಲಹರಿ ಹಾಗೂ ಅವುಗಳ ಪ್ರಾಯೋಗಿಕ ಅಳವಡಿಕೆಗಳಲ್ಲಿ ಒಂದು ಪ್ರಮುಖ ಸಾಧನವಾಗಿ ಅವತರಿಸಲ್ಪಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ತಾರ್ಕಿಕ ಚಾಕಚಕ್ಯತೆಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತ ಸಂಯೋಜನಾಧಿಕಾರಿ ಡಾ. ಆರ್. ನಾಗರಾಜ ಮಾತನಾಡಿ, ಪಿಇಎಸ್ ಶಿಕ್ಷಣ ಸಂಸ್ಥೆಯ ಹಲವಾರು ಸಾಧನೆಗಳ ಪಕ್ಷಿ ನೋಟವನ್ನು ಆಮೂಲಾಗ್ರವಾಗಿ ನೀಡಿದರು. ರಾಜ್ಯದ ಮಲೆನಾಡಿನ ವಿಭಾಗದ ವಿದ್ಯಾರ್ಥಿ ವೃಂದಕ್ಕೆ ಗುಣಾತ್ಮಕ ಶಿಕ್ಷಣವನ್ನು ನೀಡುವುದರ ಜೊತೆ ಜೊತೆಗೆ ಸಮಾಜಮುಖಿ ಸ್ವಾವಲಂಬಿ ಪ್ರಜೆಗಳನ್ನಾಗಿ ರೂಪಿಸುವಲ್ಲಿ ತನ್ನದೇ ಆದ ಕೊಡುಗೆಗಳನ್ನು ನೀಡುತ್ತಾ ಬಂದಿರುವುದು ಅಭಿನಂದನಾರ್ಹ ಎಂದು ತಿಳಿಸಿದರು.

ಪಿಇಎಸ್’ಐಟಿಎಂ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮಲ್ಲೇಶ್ ಕುಮಾರ್ ಮಾತನಾಡಿ, ಪಿಇಎಸ್ ಶಿಕ್ಷಣ ಸಂಸ್ಥೆಯು ಅತ್ಯಂತ ಕಡಿಮೆ ಕಾಲಮಾನದಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿದೆ. ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರಕ್ಕೆ ಅತ್ಯವಶ್ಯವಿರುವ ನೈಪುಣ್ಯವನ್ನು ಸಂಪಾದಿಸುವಲ್ಲಿ ಜರುಗುವ ಅನೇಕ ಕಾರ್ಯಕ್ರಮಗಳ ಸದುಪಯೋಗವನ್ನು ಪಡೆದುಕೊಳ್ಳುವಲ್ಲಿ ಕಾರ್ಯತತ್ಪರರಾಗಬೇಕೆಂದು ಮನಮುಟ್ಟುವಂತೆ ತಿಳಿಸಿದರು.

ಶೈಕ್ಷಣಿಕ ಹಾಗೂ ಔದ್ಯೋಗಿಕ ಕ್ಷೇತ್ರದ ಅವಶ್ಯಕತೆಗಳನ್ನು ಪೂರೈಸಲು ಅನುಕೂಲಕರವಾಗುವಂತಹ ತಾರ್ಕಿಕ ಪ್ರಾಯೋಗಿಕ ಚಾಕಚಕ್ಯತೆಯನ್ನು ಸಂಪಾದಿಸುವಲ್ಲಿ ಜ್ಞಾನಾರ್ಜನೆ ಒಳಗೊಂಡಂತೆ ಬೌದ್ಧಿಕ ಹಾಗೂ ಆಧ್ಯಾತ್ಮಿಕ ಅಂಶಗಳನ್ನು ಮೈಗೂಡಿಸಿಕೊಂಡು ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ಅಸಾಧಾರಣ ಸಾಧನೆಗಳನ್ನು ಮಾಡುಬೇಕು.
-ಡಾ.ಆರ್. ನಾಗರಾಜ್, ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತ ಸಂಯೋಜನಾಧಿಕಾರಿ  

ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್ಮೆಂಟ್’ನ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳ ಫಲಶ್ರುತಿಯಾಗಿ ಶೈಕ್ಷಣಿಕ ವೈಶಿಷ್ಟಯುಳ್ಳ ಮೂರು ಪ್ರಾಯೋಗಿಕ ಸಂಶೋಧನಾತ್ಮಕ ಕೇಂದ್ರಗಳನ್ನು ಚಕ್ರವರ್ತಿಯವರು ಹಾಗೂ ಪಿಇಎಸ್ ಟ್ರಸ್ಟ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಬಿ.ಆರ್. ಸುಭಾಷ್ ಉದ್ಘಾಟಿಸಿದರು.

ಪಿಇಎಸ್’ಐಟಿಎಂ ಮೆಕಾನಿಕಲ್ ವಿಭಾಗದ ನ್ಯಾನೋ ಟೆಕ್ನಾಲಜಿ ಕ್ಷೇತ್ರದ ಸಂಶೋಧನಾತ್ಮಕ ಕೇಂದ್ರವಾದ ಆಡ್ ನ್ಯಾನೋ; ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ ಡೇಟಾ ಸೈನ್ಸ್ ಕ್ಷೇತ್ರದ ಉತ್ಕೃಷ್ಟತಾ ಕೇಂದ್ರ ಮತ್ತು ಆರ್ಟಿಫಿಶಿಯಲ್ ಇಂಟಿಲಿಜನ್ಸ್ ಹಾಗೂ ಮಿಷಿನ್ ಲರ್ನಿಂಗ್ ವಿಭಾಗದ ಆರ್ಟಿಫಿಶಿಯಲ್ ಇಂಟಿಲಿಜನ್ಸ್ ಮತ್ತು ರೋಬೋಟಿಕ್ಸ್ ಕ್ಷೇತ್ರದ ವಿಕಸನ ಕೇಂದ್ರಗಳನ್ನು ಈ ಸಮಾರಂಭದ ಒಂದು ಭಾಗವಾಗಿ ಲೋಕಾರ್ಪಣೆ ಮಾಡಲಾಯಿತು.

ಎಂಬಿಎ ವಿಭಾಗ ಹಾಗೂ ಕೆರಿಯರ್ ಡೆವಲಪ್ಮೆಂಟ್ ಸೆಂಟರ್ ಮುಖ್ಯಸ್ಥರಾದ ಡಾ. ಟಿ.ಎಂ. ಪ್ರಸನ್ನ ಕುಮಾರ್ ಸ್ವಾಗತಿಸಿ, ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ.ಎಚ್.ಆರ್. ಪ್ರಸನ್ನಕುಮಾರ್ ವಂದಿಸಿದರು. ಆರ್ಟಿಫಿಶಿಯಲ್ ಇಂಟಿಲಿಜನ್ಸ್ ಮತ್ತು ಮಷೀನ್ ಲರ್ನಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಲೈಕ್ವಿನ್ ಥಾಮಸ್ ನಿರೂಪಿಸಿದರು. ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ – ಬೋಧಕೇತರ ಸಿಬ್ಬಂದಿ ಹಾಗೂ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್, ಇನ್ಫರ್ಮೇಷನ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಶನ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಮೆಕಾನಿಕಲ್, ಸಿವಿಲ್, ಎಐಎಂಎಲ್, ಕಂಪ್ಯೂಟರ್ ಸೈನ್ಸ್ ಇನ್ ಡಿಸೈನ್, ಕಂಪ್ಯೂಟರ್ ಸೈನ್ಸ್ ಇನ್ ಡೇಟಾ ಸೈನ್ಸ್ ವಿಭಾಗಗಳ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಪೋಷಕ ವೃಂದದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ElectricalEngineeringKannada News WebsiteLatest News KannadaMechanicalPES CollegePESITMShiamogga NewsShimogaShivamoggaಇಂಜಿನಿಯರಿಂಗ್ಎಲೆಕ್ಟ್ರಾನಿಕ್ಸ್ಎಲೆಕ್ಟ್ರಿಕಲ್ಕಂಪ್ಯೂಟರ್ಪಿಇಎಸ್ ಕಾಲೇಜುಪಿಇಎಸ್ಐಟಿಎಂಮೆಕಾನಿಕಲ್ಶಿವಮೊಗ್ಗ
Share197Tweet123Send
Previous Post

ಸಿದ್ಧರಾಮಯ್ಯ ಭ್ರಮಾಲೋಕದ ಬಾದ್ ಷಾ: ಸಚಿವ ಶ್ರೀರಾಮುಲು ವಾಗ್ದಾಳಿ

Next Post

ನ.26-27ರಂದು ಶೃಂಗೇರಿ ಶ್ರೀಗಳ ನೇತೃತ್ವದಲ್ಲಿ ಸಹಸ್ರನಾರಿಕೇಳ ಗಣಯಾಗ: ಈಶ್ವರಪ್ಪ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನ.26-27ರಂದು ಶೃಂಗೇರಿ ಶ್ರೀಗಳ ನೇತೃತ್ವದಲ್ಲಿ ಸಹಸ್ರನಾರಿಕೇಳ ಗಣಯಾಗ: ಈಶ್ವರಪ್ಪ ಮಾಹಿತಿ

ನ.26-27ರಂದು ಶೃಂಗೇರಿ ಶ್ರೀಗಳ ನೇತೃತ್ವದಲ್ಲಿ ಸಹಸ್ರನಾರಿಕೇಳ ಗಣಯಾಗ: ಈಶ್ವರಪ್ಪ ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಗಾಂಜಾ ಮಾರಾಟ | ಇಬ್ಬರ ಬಂಧನ

May 5, 2026
ಗೋ ಸಮ್ಮಾನ ಅಹ್ವಾನ ಅಭಿಯಾನ; ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಕಾಲ್ನಡಿಗೆ ಜಾಥಾ

ಗೋ ಸಮ್ಮಾನ ಅಹ್ವಾನ ಅಭಿಯಾನ; ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಕಾಲ್ನಡಿಗೆ ಜಾಥಾ

May 5, 2026
ತಮಿಳುನಾಡು | ಕಾರು ಚಾಲಕನ ಪುತ್ರ ಈಗ ವಿರುಗಂಬಕ್ಕಂ ಶಾಸಕ | ವಿಜಯ್ ಮ್ಯಾಜಿಕ್

ತಮಿಳುನಾಡು | ಕಾರು ಚಾಲಕನ ಪುತ್ರ ಈಗ ವಿರುಗಂಬಕ್ಕಂ ಶಾಸಕ | ವಿಜಯ್ ಮ್ಯಾಜಿಕ್

May 5, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಬೆಂಗಳೂರು ಒಡೆಯರ್ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

May 5, 2026
ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL