ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಸ್ಥಳೀಯ ಅಗ್ನಿಶಾಮಕ ಠಾಣೆಯಲ್ಲಿ ಮಾರಕ ಕೊರೋನಾ ವೈರಸ್ ಹರಡುವುದನ್ನು ತಡೆಯುವ ಉದ್ದೇಶದಿಂದ ಕೇಂದ್ರ ಕಚೇರಿಯ ಆದೇಶದಂತೆ ಅಗ್ನಿ ಶಾಮಕ ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಅಗ್ನಿಶಾಮಕ ಠಾಣಾಧಿಕಾರಿ ಎನ್. ವಸಂತಕುಮಾರ್ ಅವರು ಸಿಬ್ಬಂದಿಗೆ ಕೇಂದ್ರ ಸರ್ಕಾರ ರಚಿಸಿರುವ ಕೋವಿಡ್ – 19 ಪ್ರತಿಜ್ಞೆಯನ್ನು ಬೋಧಿಸಿದರು.
ಸಿಬ್ಬಂದಿಗಳು ಪರಸ್ಪರ ಹಾಗೂ ಸಾರ್ವಜನಿಕರೊಂದಿಗೆ ಅಂತರ ಕಾಯ್ದುಕೊಳ್ಳಬೇಕು, ತಾವು ಮಾಸ್ಕ್ ಧರಿಸಬೇಕು ಇತರರಿಗೂ ಕೋವಿಡ್ ಕುರಿತು ಜಾಗೃತಿ ಮೂಡಿಸುವ ಮೂಲಕ ಕೊರೋನ ತೊಲಗಿಸೋಣ ಎಂದು ಕರೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post