ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಗ್ರಾಮಾಂತರ ಪೊಲೀಸರು, ಲಕ್ಷಾಂತರ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಡಿವೈಎಸ್’ಪಿ ಸುಧಾಕರ್ ನಾಯಕ್ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ಸಿಪಿಐ ಮಂಜುನಾಥ್, ಪಿಎಸ್’ಐ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡ ಯಶಸ್ವಿ ಕಾರ್ಯಾಚರಣೆಯನ್ನು ನಡೆದಿದೆ.
ಚನ್ನಗಿರಿಯ ಮಾವಿನಕಟ್ಟೆಯ ನಾಗರಾಜ ನಾಯ್ಕ ಹಾಗೂ ಗಣೇಶ ನಾಯ್ಕ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಇವರಿಂದ ಲಕ್ಷಾಂತರ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
2019ರಲ್ಲಿ ಹೊಳೆಹೊನ್ನೂರಿನ ಅಶೋಕ ನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿ ದೋಚಿದ್ದ 40 ಗ್ರಾಂ ತೂಕದ ಬಂಗಾರದ ಆಭರಣಗಳು, ಹಾಗೂ 240 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಮತ್ತು 2020ರ ಮೇ ತಿಂಗಳಿನಲ್ಲಿ ಬೆಳ್ಳಿಗೆರೆಯ ಮನೆಯೊಂದರಲ್ಲಿ ದೋಚಿದ್ದ 10 ಗ್ರಾಂ ಬಂಗಾರದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಒಟ್ಟು ಮೌಲ್ಯ 2,32,500 ರೂ.ಗಳು ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post