Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ನಿಮ್ಮನೆಯಿಂದ ನೀರು ಕೊಡ್ತಿರೇನ್ರಿ? ಶಾಸಕ ಸಂಗಮೇಶ್ವರ್ ಗುಡುಗಿಗೆ ವಿಐಎಸ್’ಎಲ್ ಅಧಿಕಾರಿಗಳು ತತ್ತರ

ಶಾಸಕರ ಸಂಧಾನ ಬಹುತೇಕ ಯಶಸ್ವಿ: ಕ್ವಾಟ್ರರ್ಸ್ ಮನೆಗಳ ಬಾಡಿಗೆ ಮುಂದಿನ 5 ವರ್ಷಕ್ಕೆ ಏರಿಕೆಯಿಲ್ಲ, ದಿನಕ್ಕೆರಡು ಬಾರಿ ನೀರು ಪೂರೈಕೆಗೆ ಒಂದು ವಾರ ಗಡುವು

October 16, 2020
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ವಿಐಎಸ್’ಎಲ್ ಕ್ವಾಟ್ರಸ್ ಮನೆಗಳಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯ ಪೂರೈಕೆಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆ ಪರವಾಗಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಖಡಕ್ ಮಾತಿಗೆ ವಿಐಎಸ್’ಎಲ್ ಹಿರಿಯ ಅಧಿಕಾರಿಗಳು ಅಕ್ಷರಶಃ ತತ್ತರಗೊಂಡ ಘಟನೆ ಇಂದು ನಡೆದಿದೆ.

ವಿಐಎಸ್’ಎಲ್ ಕಾರ್ಖಾನೆ ನಿವೃತ್ತ ನೌಕರರ ಕ್ವಾಟ್ರಸ್ ಮನೆಗಳ ಬಾಡಿಗೆಯನ್ನು ಶೇ.100ರಷ್ಟು ಏರಿಕೆ ಮಾಡಿದ್ದು ಹಾಗೂ ಈ ಹಿಂದೆ ಇದ್ದ ನಿಯಮವನ್ನು ಬದಲಿಸಿ ಪ್ರತಿದಿನ ಎರಡು ಬಾರಿಗೆ ಬದಲಾಗಿ ಒಂದೇ ಬಾರಿ ನೀರು ಬಿಡಲಾಗುತ್ತಿದೆ. ಅಲ್ಲದೇ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿಲ್ಲ ಎಂದು ಆರೋಪಿಸಿ ನೂರಾರು ನಿವಾಸಿಗಳು ವಿಐಎಸ್’ಎಲ್ ನಗರಾಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರ ಪರವಾಗಿ ಮಾತುಕತೆ ನಡೆಸಿದ ಶಾಸಕ ಸಂಗಮೇಶ್ವರ್ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಭಾರೀ ವಾಗ್ವಾದ
ನಗರಾಡಳಿತ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸುಮಾರು 3 ಗಂಟೆಗೂ ಅಧಿಕ ಕಾಲ ಭಾರೀ ವಾಗ್ವಾದ ನಡೆಯಿತು.

ಆರು ವರ್ಷಗಳ ಕಾಲ ಬಾಡಿಗೆಯನ್ನು ಏರಿಕೆ ಮಾಡುವಂತಿಲ್ಲ. ಈ ಅವಧಿಯಲ್ಲಿ ಒಂದು ವರ್ಷ ಈಗಾಗಲೇ ಕಳೆದು ಹೋಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮುಂದಿನ 5 ವರ್ಷಗಳ ಕಾಲ ಬಾಡಿಗೆ ಹೆಚ್ಚಿಸುವಂತಿಲ್ಲ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದು, ಇದನ್ನು ಲಿಖಿತ ರೂಪದಲ್ಲಿ ನೀಡುವುದಾಗಿ ಅಧಿಕಾರಿಗಳೂ ಸಹ ಒಪ್ಪಿಕೊಂಡಿದ್ದಾರೆ.

ಇನ್ನು, ಈ ಹಿಂದೆ ಇದ್ದ ನಿಯಮವನ್ನು ಬದಲಾವಣೆ ಮಾಡಿ ದಿನಕ್ಕೆ ಎರಡರ ಬದಲಾಗಿ ಒಂದೇ ಬಾರಿ ಕುಡಿಯುವ ನೀರು ಬಿಡುತ್ತಿರುವ ಕ್ರಮಕ್ಕೆ ಶಾಸಕರು ಕೆಂಡಾಮಂಡಲರಾದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮೂಲಭೂತ ಸೌಕರ್ಯಗಳ ಕಾನೂನಿನಂತೆ ಜನಕ್ಕೆ ಅಗತ್ಯವಿರುವಷ್ಟು ನೀರು ಪೂರೈಕೆಗೆ ಕತ್ತರಿ ಹಾಕಿರುವ ಕ್ರಮಕ್ಕೆ ಕಿಡಿ ಕಾರಿದರು. ಪ್ರತಿದಿನ ಬೆಳಗ್ಗೆ ಒಂದು ಗಂಟೆ, ಸಂಜೆ ಒಂದು ಗಂಟೆ ಕಡ್ಡಾಯವಾಗಿ ನೀರು ಬಿಡುವ ನಿರ್ಧಾರ ಕೈಗೊಳ್ಳಬೇಕು. ಈ ನಿರ್ಧಾರವನ್ನು ಈಗಲೇ ಪ್ರಕಟಿಸಿ, ಲಿಖಿತ ರೂಪದಲ್ಲಿ ನೀಡಬೇಕು ಪಟ್ಟು ಹಿಡಿದರು.

ಆದರೆ, ಇದಕ್ಕೆ ಒಪ್ಪದ ವಿಐಎಸ್’ಎಲ್ ಇಡಿ ಸತ್ಯನಾರಾಯಣ್, ಪೈಪ್ ಲೈನ್ ಸೇರಿದಂತೆ ಈ ಸಂಬಂಧಿತ ಸಂಪೂರ್ಣ ಪರಿವೀಕ್ಷಣೆ ನಡೆಸಿ ಆನಂತರ ನಿರ್ಧಾರ ತಿಳಿಸುತ್ತೇವೆ ಎಂದರು. ಆದರೆ, ಇದಕ್ಕೆ ಒಪ್ಪದ ಶಾಸಕರು ಜನರೇನು ಕಂಪೆನಿಯ ಆಸ್ತಿ ಕೇಳುತ್ತಿಲ್ಲ. ಕುಡಿಯುವ ನೀರು ಪೂರೈಕೆ ವಿಚಾರದಲ್ಲಿ ಈ ರೀತಿ ಉಡಾಫೆ ಮಾಡುವ ನಿಮ್ಮ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ. ಈಗಿಂದೀಗಲೇ ನಿರ್ಧಾರ ಪ್ರಕಟಿಸಿ ಎಂದು ಪಟ್ಟು ಹಿಡಿದರು.

ಆನಂತರ, ಒಂದು ವಾರಗಳ ಅವಧಿಯ ಒಳಗಾಗಿ ಎಲ್ಲ ರೀತಿಯ ಪರಿವೀಕ್ಷಣೆ ನಡೆಸಿ, ದಿನಕ್ಕೆ ಎರಡು ಬಾರಿ ನೀರು ಬಿಡುವ ಕುರಿತಾಗಿ ನಿರ್ಧಾರ ಪ್ರಕಟಿಸಲು ಒಪ್ಪಿಗೆ ಸೂಚಿಸಲಾಯಿತು.

ಒಂದು ವಾರದ ಗುಡುವು
ಸಭೆಯ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಬೆಳಗ್ಗೆ ಒಂದು ಗಂಟೆ, ಸಂಜೆ ಒಂದು ಗಂಟೆ ನೀರು ಕೊಡಬೇಕು ಎಂಬ ಬೇಡಿಕೆಗೆ ಇಂದಿನಿಂದ ಒಂದು ವಾರದ ಅವಧಿ ಕೊಟ್ಟಿದ್ದೇವೆ. ಒಂದು ವಾರದ ಒಳಗಾಗಿ ನೀರು ಬಿಡುವ ನಿರ್ಧಾರ ಕೈಗೊಳ್ಳದೇ ಇದ್ದಲ್ಲಿ ಇಡಿ ಸೇರಿದಂತೆ ಅಧಿಕಾರಿಗಳನ್ನು ಕಚೇರಿಯಲ್ಲೇ ಕೂಡಿ ಹಾಕಿ, ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇನ್ನು, ಆರು ವರ್ಷಗಳ ಕಾಲ ಬಾಡಿಗೆಯನ್ನು ಏರಿಕೆ ಮಾಡದಂತೆ ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದ್ದು, ಈಗಾಗಲೇ ಒಂದು ವರ್ಷ ಮುಕ್ತಾಯವಾಗಿದೆ. ಹೀಗಾಗಿ, ಇಂದಿನಿಂದ ಮುಂದಿನ ಐದು ವರ್ಷಗಳ ಕಾಲ ಏರಿಕೆ ಮಾಡದಂತೆ ಕೈಗೊಳ್ಳಲಾಗಿರುವ ನಿರ್ಧಾರವನ್ನು ಲಿಖಿತ ರೂಪದಲ್ಲಿ ಅಧಿಕಾರಿಗಳು ನೀಡಲಿದ್ದಾರೆ. ಯಾವುದೇ ಕಾರಣಕ್ಕೂ ಜನರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.

ಶಾಸಕರ ಸಭೆಯ ಹಾಗೂ ಅವರ ಭರವಸೆಯ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ನಿವಾಸಿಗಳ ಪ್ರತಿಭಟನೆ ವಿಚಾರ ತಿಳಿದು ತತಕ್ಷಣವೇ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಪರವಾಗಿ ಸಭೆ ನಡೆಸಿ, ವಿಚಾರವನ್ನು ಬಹುತೇಕ ಯಶಸ್ವಿಗೊಳಿಸಿದ ಶಾಸಕರನ್ನು ಗೌರವಿಸಿ, ಪ್ರಶಂಸಿಸಲಾಯಿತು.

ಇಂದು ಮುಂಜಾನೆಯಿಂದ ನಗರಾಡಳಿತ ಕಚೇರಿ ಮುಂಭಾಗದಲ್ಲಿ ನಿವಾಸಿಗಳು ಆರಂಭಿಸಿದ್ದ ಪ್ರತಿಭಟನೆ ಮಧ್ಯಾಹ್ನದ ವೇಳೆಗೆ ಕಾವು ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಶಾಸಕರು ಮೂರು ಗಂಟೆಗೂ ಅಧಿಕ ಕಾಲ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ ಪಟ್ಟು ಬಿಡದೇ ಬಹುತೇಕ ಸಕಾರಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವಲ್ಲಿ ಯಶಸ್ವಿಯಾದರು. ಕುಡಿಯುವ ನೀರಿನ ವಿಚಾರದಲ್ಲಿ ಮಾತ್ರ ಅಧಿಕಾರಿಗಳಿಗೆ ನೀಡಿರುವ ಒಂದು ವಾರದ ಗಡುವಿನ ನಂತರ ವಿಚಾರ ಎತ್ತ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B K SangameshwaraBhadravathiKannada News WebsiteLatest News KannadaLocal NewsMalnad NewsShivamoggaShivamogga NewsVISLಬಿ.ಕೆ.ಸಂಗಮೇಶ್ವರ್ಭದ್ರಾವತಿಮಲೆನಾಡು ಸುದ್ಧಿವಿಐಎಸ್’ಎಲ್ಶಿವಮೊಗ್ಗ ನ್ಯೂಸ್
Previous Post

ಹೊಸಮನೆಯಲ್ಲಿ ಅವೈಜ್ಞಾನಿಕ, ಕಳಪೆ ಸ್ಮಾರ್ಟ್ ಸಿಟಿ ಕಾಮಗಾರಿ: ಸಾರ್ವಜನಿಕರಿಂದ ಅಧಿಕಾರಿಗಳಿಗೆ ತರಾಟೆ

Next Post

ಹೊಸಮನೆ ಪೊಲೀಸರ ಕಾರ್ಯಾಚರಣೆ: ಸೊಸೈಟಿ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸಮನೆ ಪೊಲೀಸರ ಕಾರ್ಯಾಚರಣೆ: ಸೊಸೈಟಿ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿ ಬಂಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!