No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಘದ ವಿರುದ್ಧ ಪಿತೂರಿ ನಿಮ್ಮ ರಾಜಕೀಯ ಅಂತ್ಯಕ್ಕೆ ನಾಂದಿ: ಕಾಂಗ್ರೆಸ್ ವಿರುದ್ಧ ಜ್ಯೋತಿಪ್ರಕಾಶ್ ಕಿಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 7, 2022
in ಶಿವಮೊಗ್ಗ
0
ಶಿವಮೊಗ್ಗ-ಭದ್ರಾವತಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜ್ಯೋತಿಪ್ರಕಾಶ್ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೌಲ್ಯಾಧಾರಿತವಾಗಿ ರಾಷ್ಟ್ರಕ್ಕಾಗಿ ತನ್ನನ್ನೇ ಸಮರ್ಪಣೆ ಮಾಡಿಕೊಂಡಿರುವ ಆರ್’ಎಸ್’ಎಸ್ ವಿರುದ್ಧ ಪದೇ ಪದೇ ಪಿತೂರಿ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರು ತಮ್ಮ ರಾಜಕೀಯ ಅಂತ್ಯಕ್ಕೆ ತಾವೇ ನಾಂದಿ ಹಾಡಿಕೊಳ್ಳುತ್ತಿದ್ದಾರೆ ಎಂದು ಎಪಿಎಂಸಿ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಕಿಡಿ ಕಾರಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘವು ದೇಶದ ಬಲಿಷ್ಠ ಸೈನ್ಯ ಪಡೆ ಇದ್ದಂತೆ. ಇಂತಹ ಮೌಲ್ಯಾಧಾರಿತ ಸಂಘದ ಸಮವಸ್ತ್ರವನ್ನು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್’ಎಸ್’ಯುಐ ಪ್ರತಿಭಟನೆಯ ಹೆಸರಿನಲ್ಲಿ ಸಂಘದ ಸಮವಸ್ತ್ರ ಸಾರ್ವಜನಿಕವಾಗಿ ಸುಟ್ಟು ಹಾಕಿರುವುದನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.
ಕೇಶವ ಬಲಿರಾಂ ಹೆಡಗೆವಾರ್ ಅವರು ಯಾವುದೇ ಸ್ವಾರ್ಥಕ್ಕಾಗಿ ಸಂಘವನ್ನು ಹುಟ್ಟು ಹಾಕಲಿಲ್ಲ. ದೇಶದ ಸಾರ್ವಭೌಮತ್ವವನ್ನು, ಅಖಂಡತೆಯನ್ನು ಹಾಗೂ ರಾಷ್ಟ್ರೀಯತೆಯನ್ನು ಎತ್ತಿ ಹಿಡಿಯುವ ಮೂಲ ಆಶಯದಿಂದ ಕಟ್ಟಿದ ಸ್ವಾತ್ರಂತ್ರ್ಯ ಭಾರತದ ಮೊಟ್ಟ ಮೊದಲ ಸಂಸ್ಥೆಯಾಗಿದ್ದು, ಇದರ ಪೂರ್ಣ ಇತಿಹಾಸ ತಿಳಿಯದೇ ತಮ್ಮ ರಾಜಕೀಯ ದುರುದ್ದೇಶದಿಂದ ಪದೇ ಪದೇ ಸಂಘದ ವಿರುದ್ಧ ಹೇಳಿಕೆ ನೀಡುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗರಡಿಯಲ್ಲಿ ಬೆಳದ ಪ್ರತಿಯೊಬ್ಬ ಕಾರ್ಯಕರ್ತನು ದೇಶಕ್ಕಾಗಿ ತನ್ನ ಉಸಿರನ್ನು ನೀಡುವ ಭಾರತ ಮಾತೆಯ ಮಗನಾಗಿ ರೂಪಿತನಾಗುತ್ತಾನೇ ವಿನಾ ಸಮಾಜಘಾತುಕ ಶಕ್ತಿಯಾಗಿ ಎಂದಿಗೂ ಗುರುತಿಸಿ ಕೊಳ್ಳುವುದಿಲ್ಲ ಎಂಬುದನ್ನು ಆರೋಪ ಮಾಡುವ ಮೊದಲು ಪ್ರತಿಪಕ್ಷದವರು ಅರಿಯಬೇಕು. ಒಂದು ವೇಳೆ ಎನ್’ಎಸ್’ಯುಐ ಅಥವಾ ಕಾಂಗ್ರೆಸ್ ಕಾರ್ಯಕರ್ತರು ಕೇವಲ ಒಂದೇ ಒಂದು ದಿನ ಸಂಘವು ನೀಡುವ ಮೂಲ ತರಬೇತಿಗಾಗಿ ಶಾಖೆಗೆ ಬಂದರೆ ನಿಮ್ಮ ಕೆಟ್ಟ ರಾಜಕೀಯ ಮನಸ್ಥಿತಿಗೆ ಸೂಕ್ತ ಮುಲಾಮು ದೊರೆಯುತ್ತದೆ ಎಂದು ಹೇಳುವ ಮೂಲಕ ಆಹ್ವಾನ ನೀಡಿದರು.

ಸಂಘದಲ್ಲಿ ಯಾವುದೇ ಜಾತಿ ಸಂಘರ್ಷಕ್ಕೆ ಅವಕಾಶವಿಲ್ಲ. ಸಂಘಕ್ಕೆ ಬರುವ ಪ್ರತಿಯೊಬ್ಬ ಸ್ವಯಂ ಸೇವಕನನ್ನು ಸೇವೆ ಎಂಬ ಯಜ್ಞದಲ್ಲಿ ಉರಿಯುವ ಸಮಿತ್ತು ಇದ್ದ ಹಾಗೆ. ರಾಷ್ಟ್ರೀಯತೆಯನ್ನು ಶಿಖರದೆತ್ತರಕ್ಕೆ ಕೊಂಡೊಯ್ಯುವ ರೀತಿಯಲ್ಲಿ ತಯಾರು ಮಾಡುತ್ತಾರೆ. ಇಲ್ಲಿ ಜಾತಿ ಹಾಗೂ ರಾಜಕೀಯಕ್ಕೆ ಯಾವುದೇ ಅವಕಾಶವಿಲ್ಲ. ಇಂತಹ ದೇಶ ಭಕ್ತ ಸಂಘಟನೆಯ ವಿರುದ್ಧ ಪದೇ ಪದೇ ಪಿತೂರಿ ಮಾಡುವುದರಿಂದ ನಿಮ್ಮ ರಾಜಕೀಯ ಅಂತ್ಯಕ್ಕೆ ನಾಂದಿ ಹಾಡಿದಂತೆ ಎಂದು ಭವಿಷ್ಯ ನುಡಿದಿದ್ದಾರೆ.
ಸಂಘದ ಸಮವಸ್ತ್ರಕ್ಕೆ ಬೆಂಕಿ ಇಡುವುದು ಒಂದೇ ದೇಶದ ಸೈನಿಕರ ಸಮವಸ್ತ್ರಕ್ಕೆ ಬೆಂಕಿ ಇಡುವುದು ಒಂದೇ. ದೇಶದ ಗಡಿ ಭಾಗದಲ್ಲಿ ಶತ್ರುಗಳ ವಿರುದ್ಧ ಹಗಲು ರಾತ್ರಿ ಎನ್ನದೇ ದಿಟ್ಟತನದಿಂದ ಹೋರಾಡುವ ಸೈನಿಕರು ಒಂದೆಡೆಯಾದರೆ, ದೇಶದೊಳಗೆ ಯಾವುದೇ ಸಂಕಷ್ಟ ಎದುರಾದರೂ ಯಾವುದೇ ಸಮಯವಿರಲಿ ಸಂಘವು ಕರೆ ಕೊಟ್ಟ ತತಕ್ಷಣ ಸ್ಥಳಕ್ಕೆ ತೆರಳಿ ಸಹಾಯ ಹಸ್ತ ಚಾಚುವುದು ಇದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ. ಇಲ್ಲದಿದ್ದರೆ ನಿಮ್ಮನ್ನು ಮಾನಸಿಕ ಸ್ಥಿಮೀತ ಕಳೆದುಕೊಂಡ ತಂಡವೆಂದು ಜನರೇ ಕರೆಯುವ ದಿನ ದೂರವಿಲ್ಲ ಎಂದರು.

ರಾಜ್ಯದಾದ್ಯಂತ ಸಂಘದ ಸಮವಸ್ತ್ರಕ್ಕೆ ಸಾರ್ವಜನಿಕವಾಗಿ ಬೆಂಕಿ ಹಚ್ಚುತ್ತೇವೆ ಎಂದು ಹೇಳಿಕೆ ನೀಡುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ ಅವರು ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಹೇಳಿಕೆಯ ತೀವ್ರತೆ ಯಾವ ಮಟ್ಟಕ್ಕೆ ಪೆಟ್ಟು ಕೊಡುತ್ತದೇ ಎಂಬುದನ್ನು ಬರುವ ಚುನಾವಣೆಯಲ್ಲಿ ನೀವೇ ನೋಡುತ್ತೀರ ಎಂದು ಸವಾಲು ಹಾಕಿದರು.

ಒಂದು ವಿದ್ಯಾರ್ಥಿ ಸಂಘಟನೆಯನ್ನು ರಾಜಕೀಯ ದಾಳವಾಗಿ ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವುದು, ಜೊತೆಗೆ ಸಂಘದ ಸಮವಸ್ತ್ರಕ್ಕೆ ಬೆಂಕಿ ಇಡುವ ಮೂಲಕ ರಾಷ್ಟ್ರೀಯತೆಗೆ ಅವಮಾನ ಮಾಡುತ್ತಿದ್ದಾರೆ. ಇದು ಪುರಾಣದ ಕಥೆಯಲ್ಲಿ ಭಸ್ಮಾಸುರ ಹೇಗೆ ತನ್ನನ್ನು ತಾನು ಸುಟ್ಟುಕೊಂಡನೋ ಹಾಗೆಯೇ ನಿಮ್ಮನ್ನು ನೀವೇ ರಾಜಕೀಯವಾಗಿ ಸುಟ್ಟುಕೊಳ್ಳಲು ವೇದಿಕೆ ಸಿದ್ಧತೆಗೆ ತಯಾರಿ ಮಾಡಿಕೊಡಂತೆ ಭಾಸವಾಗುತ್ತಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BJPcongressKannada News WebsiteLatest News KannadaLocal NewsMalnad NewsNSUIPolitical NewsRSSS S Jyothi PrakashShimogaShivamoggaShivamogga NewsSiddharamaiahಆರ್’ಎಸ್’ಎಸ್ಎನ್’ಎಸ್’ಯುಐಎಸ್.ಎಸ್. ಜ್ಯೋತಿಪ್ರಕಾಶ್ಕಾಂಗ್ರೆಸ್ಕೇಶವ ಬಲಿರಾಂ ಹೆಡಗೆವಾರ್ಮೊಹಮ್ಮದ್ ನಲಪಾಡರಾಷ್ಟ್ರೀಯ ಸ್ವಯಂ ಸೇವಕ ಸಂಘಸಿದ್ದರಾಮಯ್ಯ
Share196Tweet123Send
Previous Post

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗ ಸೇರಿ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್

Next Post

ಬೆಂಗಳೂರಿನಲ್ಲಿ ಜಮ್ಮು ಪೊಲೀಸರ ಆಪರೇಶನ್: ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಬೆಂಗಳೂರಿನಲ್ಲಿ ಜಮ್ಮು ಪೊಲೀಸರ ಆಪರೇಶನ್: ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

May 23, 2026
ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

May 23, 2026
ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

May 23, 2026
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

May 23, 2026
ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಆರು ಮಂದಿ ಬಂಧನ!

ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್, ಆರು ಮಂದಿ ಬಂಧನ!

May 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL