Wednesday, March 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಂಘದ ವಿರುದ್ಧ ಪಿತೂರಿ ನಿಮ್ಮ ರಾಜಕೀಯ ಅಂತ್ಯಕ್ಕೆ ನಾಂದಿ: ಕಾಂಗ್ರೆಸ್ ವಿರುದ್ಧ ಜ್ಯೋತಿಪ್ರಕಾಶ್ ಕಿಡಿ

June 7, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೌಲ್ಯಾಧಾರಿತವಾಗಿ ರಾಷ್ಟ್ರಕ್ಕಾಗಿ ತನ್ನನ್ನೇ ಸಮರ್ಪಣೆ ಮಾಡಿಕೊಂಡಿರುವ ಆರ್’ಎಸ್’ಎಸ್ ವಿರುದ್ಧ ಪದೇ ಪದೇ ಪಿತೂರಿ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರು ತಮ್ಮ ರಾಜಕೀಯ ಅಂತ್ಯಕ್ಕೆ ತಾವೇ ನಾಂದಿ ಹಾಡಿಕೊಳ್ಳುತ್ತಿದ್ದಾರೆ ಎಂದು ಎಪಿಎಂಸಿ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್. ಜ್ಯೋತಿಪ್ರಕಾಶ್ ಕಿಡಿ ಕಾರಿದ್ದಾರೆ.

ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ಸ್ವಯಂ ಸೇವಕ ಸಂಘವು ದೇಶದ ಬಲಿಷ್ಠ ಸೈನ್ಯ ಪಡೆ ಇದ್ದಂತೆ. ಇಂತಹ ಮೌಲ್ಯಾಧಾರಿತ ಸಂಘದ ಸಮವಸ್ತ್ರವನ್ನು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ ಎನ್’ಎಸ್’ಯುಐ ಪ್ರತಿಭಟನೆಯ ಹೆಸರಿನಲ್ಲಿ ಸಂಘದ ಸಮವಸ್ತ್ರ ಸಾರ್ವಜನಿಕವಾಗಿ ಸುಟ್ಟು ಹಾಕಿರುವುದನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ.
ಕೇಶವ ಬಲಿರಾಂ ಹೆಡಗೆವಾರ್ ಅವರು ಯಾವುದೇ ಸ್ವಾರ್ಥಕ್ಕಾಗಿ ಸಂಘವನ್ನು ಹುಟ್ಟು ಹಾಕಲಿಲ್ಲ. ದೇಶದ ಸಾರ್ವಭೌಮತ್ವವನ್ನು, ಅಖಂಡತೆಯನ್ನು ಹಾಗೂ ರಾಷ್ಟ್ರೀಯತೆಯನ್ನು ಎತ್ತಿ ಹಿಡಿಯುವ ಮೂಲ ಆಶಯದಿಂದ ಕಟ್ಟಿದ ಸ್ವಾತ್ರಂತ್ರ್ಯ ಭಾರತದ ಮೊಟ್ಟ ಮೊದಲ ಸಂಸ್ಥೆಯಾಗಿದ್ದು, ಇದರ ಪೂರ್ಣ ಇತಿಹಾಸ ತಿಳಿಯದೇ ತಮ್ಮ ರಾಜಕೀಯ ದುರುದ್ದೇಶದಿಂದ ಪದೇ ಪದೇ ಸಂಘದ ವಿರುದ್ಧ ಹೇಳಿಕೆ ನೀಡುವುದು ನಿಮಗೆ ಶೋಭೆ ತರುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗರಡಿಯಲ್ಲಿ ಬೆಳದ ಪ್ರತಿಯೊಬ್ಬ ಕಾರ್ಯಕರ್ತನು ದೇಶಕ್ಕಾಗಿ ತನ್ನ ಉಸಿರನ್ನು ನೀಡುವ ಭಾರತ ಮಾತೆಯ ಮಗನಾಗಿ ರೂಪಿತನಾಗುತ್ತಾನೇ ವಿನಾ ಸಮಾಜಘಾತುಕ ಶಕ್ತಿಯಾಗಿ ಎಂದಿಗೂ ಗುರುತಿಸಿ ಕೊಳ್ಳುವುದಿಲ್ಲ ಎಂಬುದನ್ನು ಆರೋಪ ಮಾಡುವ ಮೊದಲು ಪ್ರತಿಪಕ್ಷದವರು ಅರಿಯಬೇಕು. ಒಂದು ವೇಳೆ ಎನ್’ಎಸ್’ಯುಐ ಅಥವಾ ಕಾಂಗ್ರೆಸ್ ಕಾರ್ಯಕರ್ತರು ಕೇವಲ ಒಂದೇ ಒಂದು ದಿನ ಸಂಘವು ನೀಡುವ ಮೂಲ ತರಬೇತಿಗಾಗಿ ಶಾಖೆಗೆ ಬಂದರೆ ನಿಮ್ಮ ಕೆಟ್ಟ ರಾಜಕೀಯ ಮನಸ್ಥಿತಿಗೆ ಸೂಕ್ತ ಮುಲಾಮು ದೊರೆಯುತ್ತದೆ ಎಂದು ಹೇಳುವ ಮೂಲಕ ಆಹ್ವಾನ ನೀಡಿದರು.

ಸಂಘದಲ್ಲಿ ಯಾವುದೇ ಜಾತಿ ಸಂಘರ್ಷಕ್ಕೆ ಅವಕಾಶವಿಲ್ಲ. ಸಂಘಕ್ಕೆ ಬರುವ ಪ್ರತಿಯೊಬ್ಬ ಸ್ವಯಂ ಸೇವಕನನ್ನು ಸೇವೆ ಎಂಬ ಯಜ್ಞದಲ್ಲಿ ಉರಿಯುವ ಸಮಿತ್ತು ಇದ್ದ ಹಾಗೆ. ರಾಷ್ಟ್ರೀಯತೆಯನ್ನು ಶಿಖರದೆತ್ತರಕ್ಕೆ ಕೊಂಡೊಯ್ಯುವ ರೀತಿಯಲ್ಲಿ ತಯಾರು ಮಾಡುತ್ತಾರೆ. ಇಲ್ಲಿ ಜಾತಿ ಹಾಗೂ ರಾಜಕೀಯಕ್ಕೆ ಯಾವುದೇ ಅವಕಾಶವಿಲ್ಲ. ಇಂತಹ ದೇಶ ಭಕ್ತ ಸಂಘಟನೆಯ ವಿರುದ್ಧ ಪದೇ ಪದೇ ಪಿತೂರಿ ಮಾಡುವುದರಿಂದ ನಿಮ್ಮ ರಾಜಕೀಯ ಅಂತ್ಯಕ್ಕೆ ನಾಂದಿ ಹಾಡಿದಂತೆ ಎಂದು ಭವಿಷ್ಯ ನುಡಿದಿದ್ದಾರೆ.
ಸಂಘದ ಸಮವಸ್ತ್ರಕ್ಕೆ ಬೆಂಕಿ ಇಡುವುದು ಒಂದೇ ದೇಶದ ಸೈನಿಕರ ಸಮವಸ್ತ್ರಕ್ಕೆ ಬೆಂಕಿ ಇಡುವುದು ಒಂದೇ. ದೇಶದ ಗಡಿ ಭಾಗದಲ್ಲಿ ಶತ್ರುಗಳ ವಿರುದ್ಧ ಹಗಲು ರಾತ್ರಿ ಎನ್ನದೇ ದಿಟ್ಟತನದಿಂದ ಹೋರಾಡುವ ಸೈನಿಕರು ಒಂದೆಡೆಯಾದರೆ, ದೇಶದೊಳಗೆ ಯಾವುದೇ ಸಂಕಷ್ಟ ಎದುರಾದರೂ ಯಾವುದೇ ಸಮಯವಿರಲಿ ಸಂಘವು ಕರೆ ಕೊಟ್ಟ ತತಕ್ಷಣ ಸ್ಥಳಕ್ಕೆ ತೆರಳಿ ಸಹಾಯ ಹಸ್ತ ಚಾಚುವುದು ಇದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ. ಇಲ್ಲದಿದ್ದರೆ ನಿಮ್ಮನ್ನು ಮಾನಸಿಕ ಸ್ಥಿಮೀತ ಕಳೆದುಕೊಂಡ ತಂಡವೆಂದು ಜನರೇ ಕರೆಯುವ ದಿನ ದೂರವಿಲ್ಲ ಎಂದರು.

ರಾಜ್ಯದಾದ್ಯಂತ ಸಂಘದ ಸಮವಸ್ತ್ರಕ್ಕೆ ಸಾರ್ವಜನಿಕವಾಗಿ ಬೆಂಕಿ ಹಚ್ಚುತ್ತೇವೆ ಎಂದು ಹೇಳಿಕೆ ನೀಡುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ ಅವರು ಈ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಹೇಳಿಕೆಯ ತೀವ್ರತೆ ಯಾವ ಮಟ್ಟಕ್ಕೆ ಪೆಟ್ಟು ಕೊಡುತ್ತದೇ ಎಂಬುದನ್ನು ಬರುವ ಚುನಾವಣೆಯಲ್ಲಿ ನೀವೇ ನೋಡುತ್ತೀರ ಎಂದು ಸವಾಲು ಹಾಕಿದರು.

ಒಂದು ವಿದ್ಯಾರ್ಥಿ ಸಂಘಟನೆಯನ್ನು ರಾಜಕೀಯ ದಾಳವಾಗಿ ಬಳಸಿಕೊಂಡು ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿರುವುದು, ಜೊತೆಗೆ ಸಂಘದ ಸಮವಸ್ತ್ರಕ್ಕೆ ಬೆಂಕಿ ಇಡುವ ಮೂಲಕ ರಾಷ್ಟ್ರೀಯತೆಗೆ ಅವಮಾನ ಮಾಡುತ್ತಿದ್ದಾರೆ. ಇದು ಪುರಾಣದ ಕಥೆಯಲ್ಲಿ ಭಸ್ಮಾಸುರ ಹೇಗೆ ತನ್ನನ್ನು ತಾನು ಸುಟ್ಟುಕೊಂಡನೋ ಹಾಗೆಯೇ ನಿಮ್ಮನ್ನು ನೀವೇ ರಾಜಕೀಯವಾಗಿ ಸುಟ್ಟುಕೊಳ್ಳಲು ವೇದಿಕೆ ಸಿದ್ಧತೆಗೆ ತಯಾರಿ ಮಾಡಿಕೊಡಂತೆ ಭಾಸವಾಗುತ್ತಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BJPcongressKannada News WebsiteLatest News KannadaLocal NewsMalnad NewsNSUIPolitical NewsRSSS S Jyothi PrakashShimogaShivamoggaShivamogga NewsSiddharamaiahಆರ್’ಎಸ್’ಎಸ್ಎನ್’ಎಸ್’ಯುಐಎಸ್.ಎಸ್. ಜ್ಯೋತಿಪ್ರಕಾಶ್ಕಾಂಗ್ರೆಸ್ಕೇಶವ ಬಲಿರಾಂ ಹೆಡಗೆವಾರ್ಮೊಹಮ್ಮದ್ ನಲಪಾಡರಾಷ್ಟ್ರೀಯ ಸ್ವಯಂ ಸೇವಕ ಸಂಘಸಿದ್ದರಾಮಯ್ಯ
Previous Post

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗ ಸೇರಿ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್

Next Post

ಬೆಂಗಳೂರಿನಲ್ಲಿ ಜಮ್ಮು ಪೊಲೀಸರ ಆಪರೇಶನ್: ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರಿನಲ್ಲಿ ಜಮ್ಮು ಪೊಲೀಸರ ಆಪರೇಶನ್: ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

March 29, 2023

ಪರಿಸರವಾದಿಗಳ ಪ್ರಯತ್ನಕ್ಕೆ ಸಿಕ್ಕ ಫಲ: ತ್ಯಾಜ್ಯ ಸಂಸ್ಕರಣಾ ಘಟಕಗಳ ಮರು ಕಾರ್ಯಾರಂಭಕ್ಕೆ ಸಿದ್ಧತೆ

March 29, 2023

ಶಿವಮೊಗ್ಗದ ಇಂದಿನ ಸುದ್ಧಿಗಳು | ಒಳ ಮೀಸಲಾತಿ ವಿರೋಧಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

March 29, 2023

ಚುನಾವಣೆ ಘೋಷಣೆ: ಶಿವಮೊಗ್ಗ ಜಿಲ್ಲೆ ಎಷ್ಟು ಮತದಾರರಿದ್ದಾರೆ? ಎಷ್ಟು ಮತಗಟ್ಟೆಗಳಿವೆ?

March 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗಕ್ಕೆ ಬರಲಿವೆ ಸಿಆರ್’ಪಿಎಫ್ 6 ತಂಡಗಳು: ಜಿಲ್ಲೆಯಲ್ಲಿ ಎಷ್ಟು ಚೆಕ್ ಪೋಸ್ಟ್ ಸ್ಥಾಪನೆ?

March 29, 2023

ಪರಿಸರವಾದಿಗಳ ಪ್ರಯತ್ನಕ್ಕೆ ಸಿಕ್ಕ ಫಲ: ತ್ಯಾಜ್ಯ ಸಂಸ್ಕರಣಾ ಘಟಕಗಳ ಮರು ಕಾರ್ಯಾರಂಭಕ್ಕೆ ಸಿದ್ಧತೆ

March 29, 2023

ಶಿವಮೊಗ್ಗದ ಇಂದಿನ ಸುದ್ಧಿಗಳು | ಒಳ ಮೀಸಲಾತಿ ವಿರೋಧಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ

March 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!