ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಂತ ಸ್ನೇಹ ಜೀವಿ ಎಂದೇ ಖ್ಯಾತರಾಗಿದ್ದ, ಜೆಪಿ ಆಸ್ಪತ್ರೆಯ ಸಂಸ್ಥಾಪಕ, ಮೂಳೆ ರೋಗ ತಜ್ಞ ಡಾ.ಜಯಪ್ರಕಾಶ್ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.
ಇಂದು ಮುಂಜಾನೆ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.ಕೀಲು-ಮೂಳೆ ರೋಗ ತಜ್ಞರಾಗಿದ್ದ ಅವರು, ಶಿವಮೊಗ್ಗ ಐಎಎಂ ಅಧ್ಯಕ್ಷರಾಗಿಯೂ ಸಹ ಸೇವೆ ಸಲ್ಲಿಸಿದ್ದರು. ದುಬೈ ಸೇರಿದಂತೆ ಹಲವು ದೇಶಗಳಲ್ಲಿ ಬಹಳಷ್ಟು ಕಾಲ ಸೇವೆ ಸಲ್ಲಿಸಿದ್ದ ಅವರು 2012ರಿಂದಲೂ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಸವಳಂಗ ರಸ್ತೆಯಲ್ಲಿ ಜೆಪಿ ಆಸ್ಪತ್ರೆಯನ್ನು ಇವರು ಹಾಗೂ ಇವರ ಪತ್ನಿ ಸ್ತ್ರೀ ರೋಗ ಹಾಗೂ ಪ್ರಸೂತಿ ತಜ್ಞೆ ಡಾ. ಶೈಲಜಾ ಜಯಪ್ರಕಾಶ್ ಅವರು ನಡೆಸುತ್ತಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post