No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈ ಕಾರಣಕ್ಕೆ ಈಶ್ವರಪ್ಪರನ್ನು ದೂರ ಇಡಲಾಗಿದೆ | ಬೇಳೂರು ಗೋಪಾಲಕೃಷ್ಣ ಹೇಳಿದ್ದೇನು?

kalpa News by kalpa News
April 5, 2024
in ಶಿವಮೊಗ್ಗ
0
ಈ ಕಾರಣಕ್ಕೆ ಈಶ್ವರಪ್ಪರನ್ನು ದೂರ ಇಡಲಾಗಿದೆ | ಬೇಳೂರು ಗೋಪಾಲಕೃಷ್ಣ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗದ #Shivamogga ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಗೆ ಬಿಜೆಪಿ ಸರ್ಕಾರ ಕಾನೂನುಬಾಹಿರವಾಗಿ 240 ಎಕರೆ ಜಮೀನನ್ನು ನೀಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ #BeluruGopalaKrishna ಆಗ್ರಹಿಸಿದರು.

ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾತನಾಡಿ, ಶಾಹಿ ಗಾರ್ಮೆಂಟ್ಸ್’ಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರ 240 ಎಕರೆ ಜಮೀನನ್ನು ನೀಡಿದೆ. ಆದರೆ ಶಾಹಿ ಗಾರ್ಮೆಂಟ್ಸ್’ಗೆ #ShahiGarments 10 ಎಕರೆ ನೀಡಿದ್ದರೆ ಸಾಕಿತ್ತು. 230 ಎಕರೆ ಹೆಚ್ಚಾಗಿ ನೀಡಿದೆ. ಈ 230 ಎಕರೆ ಜಮೀನನ್ನು ಏಕೆ ಕೊಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ತನಿಖೆ ನಡೆಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ನಾನು ಸಿದ್ದನಿದ್ದೇನೆ, ಸಾಯಿ ಗಾಮೆರ್ಂಟ್ಸ್ ಗೆ 240 ಎಕರೆ ಜಾಗ ನೀಡುವಲ್ಲಿ ಸಂಸದರ ಕೈವಾಡವಿದೆ. ಬೇನಾಮಿ ಶಂಕೆ ಇಲ್ಲೂ ಇದೆ ಎಂದರು.
ಲೋಕಸಭಾ ಚುನಾವಣೆ #LoksabhaElection2024 ಜಿದ್ದಾಜಿದ್ದಿಯಾಗಿ ನಡೆಯುತ್ತಿದೆ. ಇಬ್ಬರು ಮುಖ್ಯಮಂತ್ರಿಗಳ ಮಕ್ಕಳು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ನಮ್ಮ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್ ಈಗಾಗಲೇ ಪ್ರವಾಸ ಆರಂಭಿಸಿದ್ದಾರೆ. ತಾಲ್ಲೂಕು ಸಂಚಾರ, ಗ್ರಾಮಾಂತರ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಹೋದಕಡೆಯೆಲ್ಲಾ ಭವ್ಯ ಸ್ವಾಗತ ಸಿಗುತ್ತಿದೆ.  ನೂರಕ್ಕೆ ನೂರು ಗೀತಾ ಶಿವರಾಜ್ ಕುಮಾರ್ ಗೆಲ್ಲೋದು ಖಚಿತ ಎಂದರು.

ಕೆಜೆಪಿಗೆ ಹೋಗಿಲ್ಲ ಎಂಬ ಒಂದೇ ಕಾರಣಕ್ಕೆ ಈಶ್ವರಪ್ಪರನ್ನು ದೂರ ಇಡಲಾಗಿದೆ. ಹಿಂದುತ್ವದ ಬಿಜೆಪಿ ಕಟ್ಟಾ ಅಭಿಮಾನಿ ಈಶ್ವರಪ್ಪ #KSEshwarappa ಈಗ ಅಪ್ಪ ಮಕ್ಕಳ ಹಿಂದೆ ಬಿದ್ದಿದ್ದಾರೆ. ಇದು ಕಾಂಗ್ರೆಸ್‍ಗೆ ಲಾಭವಾಗಿ ಪರಿಣಮಿಸುತ್ತಿದೆ. ಇದರ ಜೊತೆಗೆ ರಾಜ್ಯ ಸರ್ಕಾರದ ಗ್ಯಾರಂಟಿಗಳು ಮತ್ತು ರಾಹುಲ್‍ಗಾಂಧಿಯವರ ಹೊಸ ಹತ್ತು ಗ್ಯಾರಂಟಿಗಳು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಕಾರಣವಾಗುತ್ತಿದೆ. 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ ಎಂದರು.

ಬಿ.ಎಸ್. ಯಡಿಯೂರಪ್ಪ #BSYediyurappa ಮತ್ತು ಅವರ ಮಕ್ಕಳು ಆಸ್ತಿ ಮಾಡಿದ್ದೇ ಸಾಧನೆ. 18 ವರ್ಷವಾದರೂ ಹೈವೇ ಸಂಪೂರ್ಣ ಆಗಿಲ್ಲ. ತಮ್ಮ ಮಾಲೀಕತ್ವದ ಕಾಲೇಜಿಗೆ ಬಂದು ಹೋಗಲಷ್ಟೇ ಹೈವೇ ಮಾಡಿದ್ದಾರೆ. ಬಸ್ ನಿಲ್ದಾಣಗಳ ನಿರ್ಮಾಣ ಬಿಟ್ಟರೆ ಮತ್ತೇನಾಗಿದೆ. ವಿಮಾನ ನಿಲ್ದಾಣ ನಿರ್ಮಾಣ ಮಾಡಿದ್ದು ಬಿಟ್ಟರೆ ಅದರ ಅಕ್ಕಪಕ್ಕದಲ್ಲೇ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಿದರು.
ಜೂನ್ 4 ರಿಂದ ಕುಟುಂಬ ರಾಜಕಾರಣ ಕೊನೆಗೊಳಿಸ್ತೀವಿ ಅಂತ ಬಿಜೆಪಿಯ ಶಾಸಕ ಯತ್ನಾಳ್ ಹೇಳಿದ್ದಾರೆ. ಈಶ್ವರಪ್ಪ ಕೂಡ ಹೇಳುತ್ತಿದ್ದಾರೆ. ಅಂದರೆ, ರಾಘವೇಂದ್ರ ಸೇರಿದಂತೆ ಯಾರೂ ಬಿಜೆಪಿಯಿಂದ ಗೆಲ್ಲೋದಿಲ್ಲ.

ಕಾಂಗ್ರೆಸ್ ಅಧಿಕಾರದಲ್ಲಿದೆ. ನಮ್ಮ ಅಭ್ಯರ್ಥಿ ಗೆಲ್ಲೋದು ಖಚಿತ. ಕಾಂಗ್ರೆಸ್ ಪಕ್ಷ ಮೇಲುಗೈ ವಾತಾವರಣವಿದೆ. ಮೋದಿ, ಶಾ ಹಿಂದಿನ ಚುನಾವಣೆಯಲ್ಲೂ ಬಂದಿದ್ರು. ಬಂದ ಕಡೆ ಗೆದ್ದಿಲ್ಲ. ಈಗಲೂ ಗೆಲ್ಲೋಲ್ಲ.

ಏತ ನೀರಾವರಿ ಕಾಂಗ್ರೆಸ್ ನೀಡಿದ್ದು. ಸಂಸದರು ಸುಳ್ಳು ಹೇಳ್ತಿದ್ದಾರೆ. ಶಿಕಾರಿಪುರ ಬಿಟ್ಟರೆ ಮತ್ಯಾವ ತಾಲ್ಲೂಕಲ್ಲೂ ಸಾಧನೆ ಆಗಿಲ್ಲ. ಬಸ್ ನಿಲ್ದಾಣಗಳ ಸೃಷ್ಟಿ ಅಷ್ಟೇ. ಅದಕ್ಕೆ ಅವರು ಬಸ್ ಸ್ಟ್ಯಾಂಡ್ ರಾಘು ಎಂದು ಸಮರ್ಥಿಸಿಕೊಂಡರು.
ಕಲ್ಲು ಹೊಡೆದ ಕಡೆ ಯಡಿಯೂರಪ್ಪರ ಆಸ್ತಿ ಇದೆ. ಇಡಿ , ಐಟಿ ಕಣ್ಮುಚ್ಚಿ ಕುಳಿತಿದೆ. ಚುನಾವಣಾ ಬಾಂಡ್ ಹೆಸರಲ್ಲಿ ಗೋಮಾಂಸ ಮಾರಾಟಗಾರರಿಂದಲೂ ಹಣ ಪಡೆದಿದ್ದಾರೆ ಎಂದು ಆರೋಪಿಸಿದರು.

ಮಧು ಬಂಗಾರಪ್ಪ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದೆ. ಬೈಂದೂರಿನಲ್ಲೂ ಅತ್ಯಂತ ಹೆಚ್ಚಿನ ಬೆಂಬಲ ಇದೆ. ಹಿಂದೆ ರಾಘವೇಂದ್ರ 75 ಸಾವಿರ ಮತಗಳ ಲೀಡ್ ಪಡೆದಿದ್ದರು. ಈಗ ಕಾಂಗ್ರೆಸ್ ಆ ಲೀಡ್ ಪಡೆಯಲಿದೆ. ಬಂಗಾರಪ್ಪ ಕೊಟ್ಟ ಯೋಜನೆಗಳನ್ನು ಮುಂದಿಟ್ಟುಕೊಂಡು ನಾವೂ ಮತ ಕೇಳುತ್ತಿದ್ದೇವೆ. ಹೈಲೀಡ್ ನಮ್ಮದೇ, ಸಾಗರದಲ್ಲೂ ಹೈ ಲೀಡ್ ಕೊಡ್ತೀವಿ. ಒಳ್ಳೇ ಹವಾ ಇದೆ ಎಂದರು.

ಕೋಟಾ ಶ್ರೀನಿವಾಸ ಪೂಜಾರಿ ಬಳಿ 62 ಕೋಟಿ ಮೌಲ್ಯದ ಆಸ್ತಿ ಇದೆ. ಅಂಥವರು ಗಂಜಿ ಕುಡಿದು ರಾಜಕಾರಣ ಮಾಡ್ತಾರಾ? ಸ್ವಾಭಿಮಾನ ಎಂದು ಗೆದ್ದಿದ್ರು. ಈಗ ಅದನ್ನೇ ಬಿಟ್ಟು ತಮ್ಮ ರಾಜಕೀಯ ಜೀವನ ಹಾಳು ಮಾಡಿಕೊಂಡ್ರು ಎಂದರು.
ಗೀತಾ ಶಿವರಾಜ್ ಕುಮಾರ್ ಮನೆ ಇಲ್ಲೇ ಇದೆ. ಗೀತಕ್ಕನ ಮನೆಯೂ ಶಿವಮೊಗ್ಗದಲ್ಲೇ ಇದೆ. ಆ ಹರತಾಳು ಹಾಲಪ್ಪನಿಗೆ ನಾಯಿಗಿರೋ ನಿಯತ್ತೂ ಇಲ್ಲ. ಬಂಗಾರಪ್ಪನೆಯಲ್ಲಿ ದೊಡ್ಡ ನಾಯಿ ಇದ್ರೂ ಹೋಗ್ತಿದ್ದ…ಯಾರ ಮನೆ ಬೆಂಗಳೂರಲ್ಲಿಲ್ಲ ಎಲ್ಲರದೂ ಇದೆ ಎಂದರು.

ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಪ್ರಕರಣದಲ್ಲಿ ಯಾರೇ ಇದ್ದರೂ ಕೂಡಲೇ ಅವರನ್ನು ಗುಂಡು ಹೊಡೆಯಬೇಕು. ಅವರು ಮುಸ್ಲೀಮರೇ ಇರಲಿ, ಹಿಂದೂಗಳೇ ಇರಲಿ, ಕ್ರಿಸ್ತರೇ ಇರಲಿ…ಬಾಂಬ್ ಹಾಕುವ ಪಾಪಿಷ್ಠರನ್ನು ಗುಂಡು ಹೊಡೆದೇ ಬಿಡಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಎಸ್.ಟಿ.ಚಂದ್ರಶೇಖರ್, ಉಸ್ತುವಾರಿ ಎಸ್.ಟಿ. ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಕೆ.ಅನಿತಾಕುಮಾರಿ, ಪ್ರಮುಖರಾದ ಯು.ಶಿವಾನಂದ್, ಮಂಜುನಾಥ್ ಬಾಬು, ಜಿ.ಡಿ.ಮಂಜುನಾಥ್, ಕೆ.ರಂಗನಾಥ್, ಲೇಖನ ನಾಯ್ಕ, ಬಿ.ಭಾರತಿ, ಸೋಮಶೇಖರ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: B S YediyurappaBeluru Gopala KrishnaGeetha ShivarajkumarK S EshwarappaKannada News WebsiteLatest News KannadaLocal NewsMalnad NewsShashi GarmentsShimogaShivamoggaShivamogga Newsಕೆ.ಎಸ್. ಈಶ್ವರಪ್ಪಗೀತಾ ಶಿವರಾಜ್’ಕುಮಾರ್ಬಿ.ಎಸ್. ಯಡಿಯೂರಪ್ಪಬೇಳೂರು ಗೋಪಾಲಕೃಷ್ಣಲೋಕಸಭಾ ಚುನಾವಣೆ 2024ಶಾಹಿ ಗಾರ್ಮೆಂಟ್ಸ್ಶಿವಮೊಗ್ಗ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದ ಅಭಿವೃದ್ಧಿಗಾಗಿ ಮತ ಯಾಚಿಸೋಣ: ಜೆಡಿಎಸ್ ಕಾರ್ಯಕರ್ತರಿಗೆ ರಾಘವೇಂದ್ರ ಮನವಿ

Next Post

ರಾಮೇಶ್ವರಂ ಕೆಫೆ ಸ್ಪೋಟ | ತೀರ್ಥಹಳ್ಳಿ ಬಿಜೆಪಿ ಕಾರ್ಯಕರ್ತನ ಬಂಧನ ಸುದ್ಧಿ | NIA ವಾರ್ನಿಂಗ್ ಏನು?

kalpa News

kalpa News

Next Post
ರಾಮೇಶ್ವರಂ ಕೆಫೆ ಸ್ಪೋಟ | ತೀರ್ಥಹಳ್ಳಿ ಬಿಜೆಪಿ ಕಾರ್ಯಕರ್ತನ ಬಂಧನ ಸುದ್ಧಿ | NIA ವಾರ್ನಿಂಗ್ ಏನು?

ರಾಮೇಶ್ವರಂ ಕೆಫೆ ಸ್ಪೋಟ | ತೀರ್ಥಹಳ್ಳಿ ಬಿಜೆಪಿ ಕಾರ್ಯಕರ್ತನ ಬಂಧನ ಸುದ್ಧಿ | NIA ವಾರ್ನಿಂಗ್ ಏನು?

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL