No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅಕ್ಷರ ಕ್ರಾಂತಿಗೆ ಸುದೀಪ್ ಸ್ಪರ್ಶ: ಸಾಗರದ ನಾಲ್ಕು ಸರ್ಕಾರಿ ಶಾಲೆ ದತ್ತು ಸ್ವೀಕಾರ

ಖಾಸಗಿ ಶಾಲೆಗಳಂತೆ ಅಭಿವೃದ್ಧಿ, ಸ್ವಂತ ವೆಚ್ಚದಲ್ಲಿ ಅತಿಥಿ ಶಿಕ್ಷಕರ ನಿಯೋಜನೆ: ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ಅಧ್ಯಕ್ಷರು ಏನೆಂದರು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 11, 2020
in Special Articles
0
ಅಕ್ಷರ ಕ್ರಾಂತಿಗೆ ಸುದೀಪ್ ಸ್ಪರ್ಶ: ಸಾಗರದ ನಾಲ್ಕು ಸರ್ಕಾರಿ ಶಾಲೆ ದತ್ತು ಸ್ವೀಕಾರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿರುವ ನಟ ಸುದೀಪ್, ಇವನ್ನು ಖಾಸಗಿ ಶಾಲೆಗಳ ಗುಣಮಟ್ಟಕ್ಕೆ ಅಭಿವೃದ್ಧಿಪಡಿಸುವ ಸಂಕಲ್ಪ ಮಾಡುವ ಮೂಲಕ ಎಲ್ಲ ಸೆಲೆಬ್ರೆಟಿಗಳಿಗೆ ಮಾದರಿಯಾಗಿದ್ದಾರೆ.

ಹೌದು… ಸಾಗರ ತಾಲೂಕಿನ ಆವಿಗೆ, ಹಾಳಸಸಿ(ಹಾಲಸಸಿ) ಎಸ್.ಎನ್. ಬಡಾವಣೆ ಹಾಗೂ ಎಂಎಲ್ ಹಳ್ಳಿಯ ನಾಲ್ಕು ಸರ್ಕಾರಿ ಶಾಲೆಗಳನ್ನು ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ಕಾನೂನಾತ್ಮಕವಾಗಿ ದತ್ತು ಪಡೆದುಕೊಂಡಿದ್ದು, ಅತಿ ಶೀಘ್ರದಲ್ಲೇ ಅಭಿವೃದ್ಧಿ ಕಾರ್ಯಗಳನ್ನು ಆರಂಭ ಮಾಡಲಿದೆ.

ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ಅಧ್ಯಕ್ಷರಾದ ರಮೇಶ್ ಕಿಟ್ಟಿ, ಸುದೀಪ್ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ಯೋಜನೆಯ ಕುರಿತಾಗಿ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಖಾಸಗಿ ಶಾಲೆಗಳಂತೆ ಅಭಿವೃದ್ಧಿ
ಶಿಕ್ಷಣ ಇಲಾಖೆಯ ನಿಯಮಾವಳಿಯಂತೆ ಈ ನಾಲ್ಕು ಶಾಲೆಯ ಶಿಕ್ಷಕರ ವೇತನ ಹೊರತುಪಡಿಸಿ ಉಳಿದ ಸಂಫೂರ್ಣ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ.

ಶಾಲಾ ಕಟ್ಟಡ ನವೀಕರಣ, ಶಿಕ್ಷಣದ ಡಿಜಿಟಲೀಕರಣ, ಉತ್ತಮ ಗುಣಮಟ್ಟದ ಪೀಠೋಪಕರಣ, ಪಾಠೋಪಕರಣ, ಬಾಲಕ-ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ, ಕುಡಿಯುವ ನೀರು, ಕ್ರೀಡಾ ಉಪಕರಣ, ದಾಖಲೆಗಳನ್ನು ಇರಿಸಲು ಲಾಕರ್ ವ್ಯವಸ್ಥೆ, ಸಮವಸ್ತ್ರ, ಮ್ಯಾಪ್, ಸುಸಜ್ಜಿತವಾದ ಅಡುಗೆ ಕೋಣೆ, ಸಿಸಿ ಕ್ಯಾಮೆರಾ, ರಂಗಮಂದಿರ ಸೇರಿದಂತೆ ಸಂಫೂರ್ಣ ಅಭಿವೃದ್ದಿ ಮಾಡಲಾಗುತ್ತದೆ.

ದೇಶಕ್ಕೊಬ್ಬ ವಿಶ್ವೇಶ್ವರಯ್ಯ, ಒಬ್ಬ ಅಬ್ದುಲ್ ಕಲಾಂರಂತಹ ಸಾಧಕರು ದೊರೆತು ಎಷ್ಟೋ ದಶಕಗಳಾಯಿತು. ನಮ್ಮ ದೇಶಕ್ಕೆ ಸಾಧಕರು ಬೇಕಾಗಿದೆ. ಇಂತಹ ಸಂದರ್ಭದಲ್ಲಿ ದೇಶಕ್ಕಾಗಿಯೇ ಕೊಡುಗೆ ನೀಡುವ ಮಕ್ಕಳನ್ನು ನಾವು ಗುರುತಿಸಿ ಅವರಿಗೆ ಸಂಪೂರ್ಣ ಸಹಕಾರ ನೀಡುವ ಅಗತ್ಯವಿದೆ ಎನ್ನುವುದು ಸುದೀಪ್ ಸರ್ ಮನದಾಳದ ಅಭಿಪ್ರಾಯ. ಹೀಗಾಗಿ, ಈ ನಾಲ್ಕು ಶಾಲೆಗಳನ್ನು ದತ್ತು ಪಡೆದಿದ್ದೇವೆ. ಈ ನಾಲ್ಕು ಶಾಲೆಗಳಿಂದ ನಾಲ್ವರು ಮಕ್ಕಳು ದೇಶಕ್ಕೆ ಕೊಡುಗೆಯಾಗಿ ದೊರೆತರೆ ನಮ್ಮ ಉದ್ದೇಶ ಸಾರ್ಥಕವಾಗುತ್ತದೆ. ಅಕ್ಷರ ಕ್ರಾಂತಿಯೊಂದಿಗೆ ನಾವು ನಮ್ಮ ದೇಶಕ್ಕೆ ನಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುವುದು ಸುದೀಪ್ ಸರ್ ಹಾಗೂ ನಮ್ಮ ಸೊಸೈಟಿಯ ಉದ್ದೇಶ.
-ರಮೇಶ್ ಕಿಟ್ಟಿ
ಅಧ್ಯಕ್ಷರು, ಕಿಚ್ಚ ಸುದೀಪ್ ಚಾರಿಟೆಬಲ್ ಟ್ರಸ್ಟ್‌ 

Click below link to watch video:

https://www.facebook.com/KalpaNews/videos/1034028727032363/?t=1

ಶಾಲೆ ಮಾತ್ರವಲ್ಲ ಪೂರಕ ಸೌಕರ್ಯ ಅಭಿವೃದ್ಧಿ
ಅತ್ಯಂತ ಪ್ರಮುಖವಾಗಿ, ಆವಿಗೆಯಂತಹ ಗ್ರಾಮದ ಶಾಲೆಗೆ ಪ್ರತಿದಿನ 8 ಕಿಲೋ ಮೀಟರ್ ದೂರದ ದುರ್ಗಮ ಹಾದಿಯಲ್ಲಿ ನಡೆದುಕೊಂಡೇ ಬರುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ, ಇವರ ಕಷ್ಟವನ್ನು ಅರಿತ ಸೊಸೈಟಿ ಸರ್ಕಾರದೊಂದಿಗೆ ಕೈಜೋಡಿಸಿ ಈ ರಸ್ತೆಯ ಅಭಿವೃದ್ಧಿ ಮಾಡುವುದು ಹಾಗೂ ದೂರದಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ವಾಹನದ ವ್ಯವಸ್ಥೆ ಮಾಡುವ ಯೋಜನೆಯನ್ನೂ ಸಹ ಹೊಂದಿರುವುದು ನಿಜಕ್ಕೂ ಪ್ರಶಂಸನೀಯ.

ವಿಶೇಷ ಅನುಮತಿಯೊಂದಿಗೆ ಅತಿಥಿ ಶಿಕ್ಷಕರ ನೇಮಕ
ಬಹಳಷ್ಟು ಹಿಂದುಳಿದಿರುವ ಸಾಗರ ತಾಲೂಕಿನ ಆವಿಗೆ ಗ್ರಾಮದಲ್ಲಿ ಶಿಕ್ಷಕರ ಕೊರತೆಯಿದ್ದು ಇದು ಸದಾ ಕಾಲ ಇಲ್ಲಿನ ಸಮಸ್ಯೆಯಾಗಿದೆ. ಇದಕ್ಕೊಂದು ಪರಿಹಾರ ಕಂಡುಕೊಳ್ಳಲಾಗಿದೆ. ಸರ್ಕಾರದಿಂದ ವಿಶೇಷ ಅನುಮತಿ ಪಡೆದುಕೊಂಡು ಸೊಸೈಟಿ ವೆಚ್ಚದಲ್ಲಿ ಅತಿಥಿ ಉಪನ್ಯಾಸಕರನ್ನು ಆ ಶಾಲೆಗೆ ಕಳುಹಿಸಿ, ಅವರಿಗೆ ಅಗತ್ಯವಿರುವ ಎಲ್ಲ ರೀತಿಯ ಸೌಕರ್ಯಗಳನ್ನು ಒದಗಿಸಿಕೊಂಡುವಂತಹ ಯೋಜನೆ ಹಾಕಿಕೊಳ್ಳಲಾಗಿದೆ.

ಸಂಪೂರ್ಣ ಕಾನೂನಾತ್ಮಕವಾಗಿ ದತ್ತು
ಇನ್ನು, ಈ ನಾಲ್ಕು ಶಾಲೆಗಳ ಕುರಿತಾಗಿ ವಿಚಾರ ತಿಳಿದುಕೊಂಡ ನಂತರ ಬಿಇಒ ಹಾಗೂ ಡಿಡಿಪಿಐ ಅವರ ಮೂಲಕ ಸರ್ಕಾರಕ್ಕೆ ಕಿಚ್ಚ ಸುದೀಪ್ ಚಾರಿಟೆಬಲ್ ಟ್ರಸ್ಟ್‌ ಸಂಪರ್ಕಿಸಿ, ಶಾಲೆಗಳನ್ನು ದತ್ತು ನೀಡುವಂತೆ ಮನವಿ ಸಲ್ಲಿಸುತ್ತದೆ. ಇದಕ್ಕೆ ಅಗತ್ಯವಾಗಿರುವ ಎಲ್ಲ ರೀತಿಯ ದಾಖಲಾತಿಗಳನ್ನು ಸಲ್ಲಿಸಿ, ಅನುಮತಿ ಪಡೆದುಕೊಂಡಿದೆ.

ವೆಚ್ಚ ಎಷ್ಟು?
ನಾಲ್ಕು ಶಾಲೆಗಳ ಅಭಿವೃದ್ಧಿಗೆ ಮೊದಲ ಹಂತದಲ್ಲಿ 30 ಲಕ್ಷ ರೂ.ಗಳ ಯೋಜನೆಯನ್ನು ರೂಪಿಸಿಕೊಂಡಿದ್ದು, ಶೀಘ್ರದಲ್ಲೇ ಕೆಲಸ ಆರಂಭವಾಗಲಿದೆ. ಆನಂತರ ಹಂತ ಹಂತವಾಗಿ ಈ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತದೆ.

ಸೊಸೈಟಿ ಆಯ್ದುಕೊಂಡಿರುವ ಶಾಲೆಗಳ ಪ್ರದೇಶ ಹೇಗಿದೆ ಗೊತ್ತಾ? ಸ್ಥಳ ಭೇಟಿ ಮಾಡಿದ ತಂಡದ ಮಾತಲ್ಲೇ ಕೇಳಿ:
ಅವಿಗೆ ಹಳ್ಳಿ ಸಾಗರದಿಂದ 49 ಕಿಲೋ ಮೀಟರ್ ದೂರದಲ್ಲಿದೆ. ವಿಶೇಷ ಹಾಗೂ ವಿಚಿತ್ರ ಅಂದರೆ ಈ ಶಾಲೆ ಇರುವುದು ದಟ್ಟ ಕಾಡಿನ ಮಧ್ಯೆ. ಕಾಡಿನಲ್ಲಿ ವಾಸವಿರೋ ಗುಡ್ಡಗಾಡಿನ ಕುಣಬಿ ಜನಾಂಗದವರ ಮಕ್ಕಳಿಗಾಗಿ ಸರ್ಕಾರ ಶಾಲೆ ಕಟ್ಟಿಸಿದೆ ಅದಕ್ಕೆ ಮುಖ್ಯೋಪಾಧ್ಯರನ್ನು ನೇಮಿಸಿದೆ. ಆದರೆ ಮಕ್ಕಳಿಗೆ ಪಾಠ ಮಾಡುವವರೇ ಇಲ್ಲ.

ಇಡೀ ಊರಿನಲ್ಲಿ ಹುಡುಕಿದರೆ ನಿಮಗೆ ಸಿಗೋದು ಮೂವರು ವಿದ್ಯಾವಂತರು ಅಷ್ಟೇ. ಒಬ್ಬರು ಡಿಗ್ರಿ, ಇನ್ನಿಬ್ಬರು ಪಿಯುಸಿ. ಈ ಮೂವರಲ್ಲಿ ಒಬ್ಬರು ಮಕ್ಕಳ ಪಾಲಿಗೆ ಟೀಚರ್. ಇನ್ನು ಆಶ್ಚರ್ಯ ತರಿಸೋ ಸಂಗತಿ ಅಂದರೆ ಇಲ್ಲಿ ಮಕ್ಕಳು ಪ್ರತಿ ನಿತ್ಯ 8 ಕಿಲೋ ಮೀಟರ್ ಕಾಲ್ನಡಿಯಲ್ಲಿ ಪ್ರಯಾಣ ಮಾಡಿ ಶಾಲೆಗೆ ಕಲಿಯಲು ಹೋಗುತ್ತಾರೆ. ಈ ಎಲ್ಲಾ ವಿಚಾರ ತಿಳಿದು ಕಿಚ್ಚ ಸುದೀಪ ಚಾರಿಟಬಲ್ ಸೊಸೈಟಿಯಿಂದ ಸ್ಥಳಕ್ಕೆ ಭೇಟಿ ಕೊಟ್ಟೆವು.

ಸಾಗರದಿಂದ ಸುಮಾರು 38 ಕಿಲೋ ನಮ್ಮ ಕಾರಿನಲ್ಲಿ ನಂತರ 8 ಕಿಲೋ ಅಲ್ಲಿಯ ಸ್ಥಳೀಯ ವಾಹನದಲ್ಲಿ ನಂತರ 3 ಕಿಲೋ ಕಾಲ್ನಡಿಗೆಯಲ್ಲಿ ಆವಿಗೆ ಸ್ಥಳಕ್ಕೆ ತಲುಪಿದೆವು. ನೋಡಿದ ನಮಗೆ ಅನ್ನಿಸಿದ್ದು ಮಕ್ಕ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಬೇಕೆಂದು. ಹಾಗಾಗಿ ಸದ್ಯ ಶಾಲೆಯನ್ನ ದತ್ತು ಪಡೆದಿದ್ದು ಈಗ ಶಾಲೆಯ ಅಭಿವೃದ್ದಿ ಜೊತೆಗೆ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ವ್ಯವಸ್ಥೆ ಮಾಡುವ ಆಲೋಚನೆಯಲ್ಲಿದ್ದೇವೆ. ಇಷ್ಟು ದಿನಗಳಲ್ಲಿ ದತ್ತು ಪಡೆದ ಶಾಲೆಗಳ ಪೈಕಿ ಈ ಶಾಲೆ ವಿಚಿತ್ರ ಹಾಗೂ ವಿಶೇಷ ಎನ್ನಿಸಿದೆ.
-ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿ ಸದಸ್ಯರು

Get In Touch With Us info@kalpa.news Whatsapp: 9481252093

Tags: Kannada News WebsiteKiccha SudeepKicchasudeepKICHCHA SUDEEPA CHARITABLE SOCIETYKSCSLatest News KannadaMalnad NewssandalwoodShimogaShivamogga Newsಕಿಚ್ಚ ಸುದೀಪ್ಕಿಚ್ಚ ಸುದೀಪ್ ಚಾರಿಟೆಬಲ್ ಸೊಸೈಟಿಶಿವಮೊಗ್ಗಸಾಗರಸ್ಯಾಂಡಲ್’ವುಡ್
Share197Tweet123Send
Previous Post

ಜಿಲ್ಲೆಯಲ್ಲಿಂದು 210 ಪಾಸಿಟಿವ್: ಶಿವಮೊಗ್ಗದಲ್ಲೇ 138, ಮೂರು ಸಾವಿರ ದಾಟಿದ ಸೋಂಕಿತರ ಸಂಖ್ಯೆ

Next Post

ವಿಐಎಸ್’ಎಲ್ ನಿವೃತ್ತ ನೌಕರರ ಮನೆ ಬಾಡಿಗೆ ಇಳಿಸಲು ಸಂಸದ ರಾಘವೇಂದ್ರ ಪ್ರಯತ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಐಎಸ್’ಎಲ್ ನಿವೃತ್ತ ನೌಕರರ ಮನೆ ಬಾಡಿಗೆ ಇಳಿಸಲು ಸಂಸದ ರಾಘವೇಂದ್ರ ಪ್ರಯತ್ನ

ವಿಐಎಸ್’ಎಲ್ ನಿವೃತ್ತ ನೌಕರರ ಮನೆ ಬಾಡಿಗೆ ಇಳಿಸಲು ಸಂಸದ ರಾಘವೇಂದ್ರ ಪ್ರಯತ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

ಶಿವಮೊಗ್ಗ | ರಾಘವೇಂದ್ರ ಶೇಟ್’ಗೆ ಪಿಎಚ್’ಡಿ ಪದವಿ ಪ್ರದಾನ

May 7, 2026
ಮೇ.9ರಂದು ಚಿತ್ರದುರ್ಗದಲ್ಲಿ ಬಿಎಸ್‍ವೈ ಅಭಿಮಾನೋತ್ಸವ: ಶಾಸಕ ಅರಗ ಜ್ಞಾನೇಂದ್ರ

ಮೇ.9ರಂದು ಚಿತ್ರದುರ್ಗದಲ್ಲಿ ಬಿಎಸ್‍ವೈ ಅಭಿಮಾನೋತ್ಸವ: ಶಾಸಕ ಅರಗ ಜ್ಞಾನೇಂದ್ರ

May 7, 2026
ಯೋಗಾಸನಕ್ಕೆ ಜಾಗತಿಕ ವೇದಿಕೆ | ಭಾರತದ ಆತಿಥ್ಯದಲ್ಲಿ ಚೊಚ್ಚಲ ವಿಶ್ವ ಚಾಂಪಿಯನ್‌ಶಿಪ್‌

ಯೋಗಾಸನಕ್ಕೆ ಜಾಗತಿಕ ವೇದಿಕೆ | ಭಾರತದ ಆತಿಥ್ಯದಲ್ಲಿ ಚೊಚ್ಚಲ ವಿಶ್ವ ಚಾಂಪಿಯನ್‌ಶಿಪ್‌

May 7, 2026
ಡಿಜಿಟಲ್ ವಂಚನೆ | ವಾಟ್ಸಾಪ್ ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಡಿಜಿಟಲ್ ವಂಚನೆ | ವಾಟ್ಸಾಪ್ ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

May 7, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಚಿಪ್ಪು ಹಂದಿಯ ಚಿಪ್ಪು ಮಾರಾಟ ಯತ್ನ ಹಿನ್ನೆಲೆ | ಮೂವರ ಬಂಧನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL